ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ವರ್ತನೆಯಿಂದ ಆತಂಕಗೊಂಡಿರುವ ಶಿಕ್ಷಣ ಇಲಾಖೆ, ಇದೀಗ ಮಕ್ಕಳ ಹಿತ ಕಾಪಾಡಲು ಮುಂದಾಗಿದೆ. ಹೀಗಾಗಿ ಶಾಲಾ ಶುಲ್ಕದ ವಿಚಾರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಶಾಲಾ ಶುಲ್ಕದ ವಿಚಾರವಾಗಿ ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಪ್ರಯತ್ನ ಮಾಡಿದ್ದ. ಅದಾದ ಬಳಿಕ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳಿಗೆ ಮನವಿ ಮಾಡಿಕೊಂಡಿತ್ತು. ಆದರೆ, ಆ ಬಳಿಕವೂ ಖಾಸಗಿ ಶಾಲೆಗಳ ಧೋರಣೆಯಲ್ಲಿ ಬದಲಾವಣೆ ಆಗಿಲ್ಲ. ಕೊರೊನಾ ಲಾಕ್‌ಡೌನ್‌ನಿಂದಾಗಿ ಶಾಲಾ ಆಡಳಿತ ಮಂಡಳಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರ ಪರಿಸ್ಥಿತಿ ತೀರಾ ಭಿನ್ನವಾಗಿಯೇನೂ ಇಲ್ಲ. ಆದರೆ ಖಾಸಗಿ ಶಾಲೆಗಳಿಗೆ ಹೋಲಿಕೆ ಮಾಡಿದರೆ ಪಾಲಕರು, ಪೋಷಕರ ಸ್ಥಿತಿ ಗಂಭೀರವಾಗಿದೆ. ಅದರ ಅರಿವೂ ಸರ್ಕಾರಕ್ಕಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಶಾಸಗಿ ಶಿಕ್ಷಣ ಸಂಸ್ಥೆಗಳ ಧನದಾಹದಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ.

ಶಾಲಾಡಳಿತ ಮಂಡಳಿಗಳು ಮತ್ತು ಪೋಷಕರ ನಡುವಿನ ಇಂತಹ ಸಂಘರ್ಷಗಳು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದರಿಂದ, ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಇಂತಹ ಪ್ರಕರಣಗಳಿಗೆ ಎಡೆಯಾಗದಂತೆ ವರ್ತಿಸಬೇಕಾದ ಅಗತ್ಯವನ್ನು ನಾನು ಪದೇ ಪದೇ ಹೇಳಿದ್ದೇನೆ. ಈ ರೀತಿಯ ಪ್ರಕರಣಗಳು ಮರುಕಳಿಸಿದರೆ ಇಲಾಖೆ ತನ್ನ ಪರಮಾಧಿಕಾರವನ್ನು ಚಲಾಯಿಸಬೇಕಾಗುತ್ತದೆ ಎಂಬುದನ್ನು ಶಾಲಾಡಳಿತ ಮಂಡಳಿಗಳು ತಿಳಿದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಂದುವರೆದ ಸೋಂಕು ತೀವ್ರತೆ, ಸಾವಿನ ಪ್ರಮಾಣ ರಾಜ್ಯದಲ್ಲಿಂದು 2,627 ಕೇಸ್: ಯಾವ ಜಿಲ್ಲೆಯಲ್ಲಿ ಎಷ್ಟು?

ಶನಿವಾರ 2,798 ಕೇಸ್ಗಳೊಂದಿಗೆ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ 5ನೆ ಸ್ಥಾನಕ್ಕೇರಿದ್ದ ರಾಜ್ಯ, ಇಂದು 2,627 ಪಾಸಿಟಿವ್ಗಳನ್ನು…

ಪಾಪ.. ಕೊಪ್ಪಳದಲ್ಲಿ ಭಿಕ್ಷೆಯೇ ಬದುಕಾಗಿಸಿಕೊಂಡವರ ಗತಿ ಏನು..?

ಕೊಪ್ಪಳ: ಮುಂಬೈಯಿಂದ ಪಿ-1173 ಸೋಂಕಿತ ಪ್ರಯಾಣಿಸಿದ್ದ ಬಸ್ ನಲ್ಲಿ 9 ಜನ ಭಿಕ್ಷುಕರು ಪ್ರಯಾಣಿಸಿದ್ದರಂತೆ. ಈ…

ಎಪಿಎಂಸಿ ಚೆಕ್‌ಪೊಸ್ಟ್ ನಲ್ಲಿ ಹಣ ವಸೂಲಿ ದಂಧೆ?

ಎಪಿಎಂಸಿ ಚೆಕ್‌ಪೊಸ್ಟ್ನಲ್ಲಿ ವಾಹನ ತಪಾಸಣೆ ಹೆಸರಿನಲ್ಲಿ ಭಾರಿ ಪ್ರಮಾಣದಲ್ಲಿ ಹಣ ವಸೂಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಆನ್‍ಲೈನ್ ಮೂಲಕ ಐ.ಟಿ.ಐ ಕೋರ್ಸಗಳಿಗೆ ಪ್ರವೇಶಾತಿ

ರಾಜ್ಯದ 270 ಸರಕಾರಿ ಹಾಗೂ 196 ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಅಗಷ್ಟ-2020 ನೇ ಸಾಲಿಗೆ ಮೆರಿಟ್-ಕಂ-ರಿಸರ್ವೇಷನ್ ಆಧಾರಿತ ಪ್ರವೇಶಗಳನ್ನು ಆನ್‍ಲೈನ್ ಮುಖಾಂತರ ಮಾಡಲಾಗುತ್ತಿದೆ.