ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ವರ್ತನೆಯಿಂದ ಆತಂಕಗೊಂಡಿರುವ ಶಿಕ್ಷಣ ಇಲಾಖೆ, ಇದೀಗ ಮಕ್ಕಳ ಹಿತ ಕಾಪಾಡಲು ಮುಂದಾಗಿದೆ. ಹೀಗಾಗಿ ಶಾಲಾ ಶುಲ್ಕದ ವಿಚಾರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಶಾಲಾ ಶುಲ್ಕದ ವಿಚಾರವಾಗಿ ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಪ್ರಯತ್ನ ಮಾಡಿದ್ದ. ಅದಾದ ಬಳಿಕ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳಿಗೆ ಮನವಿ ಮಾಡಿಕೊಂಡಿತ್ತು. ಆದರೆ, ಆ ಬಳಿಕವೂ ಖಾಸಗಿ ಶಾಲೆಗಳ ಧೋರಣೆಯಲ್ಲಿ ಬದಲಾವಣೆ ಆಗಿಲ್ಲ. ಕೊರೊನಾ ಲಾಕ್‌ಡೌನ್‌ನಿಂದಾಗಿ ಶಾಲಾ ಆಡಳಿತ ಮಂಡಳಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರ ಪರಿಸ್ಥಿತಿ ತೀರಾ ಭಿನ್ನವಾಗಿಯೇನೂ ಇಲ್ಲ. ಆದರೆ ಖಾಸಗಿ ಶಾಲೆಗಳಿಗೆ ಹೋಲಿಕೆ ಮಾಡಿದರೆ ಪಾಲಕರು, ಪೋಷಕರ ಸ್ಥಿತಿ ಗಂಭೀರವಾಗಿದೆ. ಅದರ ಅರಿವೂ ಸರ್ಕಾರಕ್ಕಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಶಾಸಗಿ ಶಿಕ್ಷಣ ಸಂಸ್ಥೆಗಳ ಧನದಾಹದಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ.

ಶಾಲಾಡಳಿತ ಮಂಡಳಿಗಳು ಮತ್ತು ಪೋಷಕರ ನಡುವಿನ ಇಂತಹ ಸಂಘರ್ಷಗಳು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದರಿಂದ, ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಇಂತಹ ಪ್ರಕರಣಗಳಿಗೆ ಎಡೆಯಾಗದಂತೆ ವರ್ತಿಸಬೇಕಾದ ಅಗತ್ಯವನ್ನು ನಾನು ಪದೇ ಪದೇ ಹೇಳಿದ್ದೇನೆ. ಈ ರೀತಿಯ ಪ್ರಕರಣಗಳು ಮರುಕಳಿಸಿದರೆ ಇಲಾಖೆ ತನ್ನ ಪರಮಾಧಿಕಾರವನ್ನು ಚಲಾಯಿಸಬೇಕಾಗುತ್ತದೆ ಎಂಬುದನ್ನು ಶಾಲಾಡಳಿತ ಮಂಡಳಿಗಳು ತಿಳಿದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಪುಟಾಣಿಗಳ ಬಿಂದಾಸ್ ಸ್ಟೇಪ್ಸ್…ಬೊಂಬಾಟ್ ಪ್ರಫಾರ್ಮನ್ಸ್ ಗೆ ಜನ ಫಿದಾ…!

ವಿಶೇಷ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಪುಟ್ಟ ಪುಟ್ಟ ಪುಟಾಣಿ ಮಕ್ಕಳು ಫೂಲ್ ಜೋಶ್…

ಭೀಮ ಆರ್ಭಟ: ವಿಜಯಪುರ ಜನ ತತ್ತರ – 400 ಕುಟುಂಬಗಳ ಸ್ಥಳಾಂತರ!

ಜಿಲ್ಲೆಯ ಇಂಡಿ ಹಾಗೂ ಸಿಂದಗಿ ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 400ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.

ರಕ್ತದಾನ ಮಾಡಿ ಜೀವ ಉಳಿಸಿ

ಆರೋಗ್ಯವಂತ ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ಐಎಂಎ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಆರ್.ಟಿ. ಪವಾಡಶೆಟ್ಟರ್ ಹೇಳಿದರು.

ವಾಲಿಬಾಲ್ ಪಂದ್ಯಾಟ : ಹಳಕಟ್ಟಿ ಶಾಲೆ ಬಾಲಕಿಯರ ತಂಡ ಸಾಧನೆ

ಆಲಮಟ್ಟಿ : ಸ್ಥಳೀಯ ಎಸ್.ವಿ.ವಿ.ಅಸೋಸಿಯೇಷನ್ ಶಿಕ್ಷಣ ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡ  2022-23…