ಸಿನಿಮಾ ಮಂದಿರದಲ್ಲಿ ಪ್ರೇಕ್ಷಕರ ಕಡಿತವಿಲ್ಲ

ಬೆಂಗಳೂರು : ಕೊರೊನಾ ಸಂಖ್ಯೆ ಮತ್ತೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಸಿನಿಮಾ ಮಂದಿರಗಳು ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.
ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Exit mobile version