ಗದಗ: ನಗರದ ಡಿ.ಸಿ.ಮಿಲ್ ತಳಗೇರಿ ಓಣಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ ಆಯೋಜಿಸಲಾಯಿತು.

ಸಭೆಯಲ್ಲಿ ಶಹರ ಪೊಲೀಸ್ ಠಾಣೆ ಸಿಪಿಐ ಸಾಲಿಮಠ ಮಾತನಾಡಿ, ಪೋಲಿಸ್ ಅಂದರೆ ಭಯ ಅಲ್ಲ, ಭರವಸೆ ಎಂದು ಹೇಳಿದರು ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದರು.

ಪಿಎಸ್‌ಐ ಪ್ರಕಾಶ ಡಿ ಮಾತನಾಡಿ, ಶಿಕ್ಷಣದ ಅರಿವು ಮಕ್ಕಳಲ್ಲಿ ಮನೆ ಮಾಡಬೇಕು ಅದು ಅವರ ಪ್ರಗತಿಗೆ ಹಾಗೂ ಸಮಾಜಕ್ಕೆ ಹಿರಿಮೆ ತರುತ್ತದೆ ಎಂದು ಮಕ್ಕಳ ಮನವೊಲಿಸಿದರು.

ಓಣಿಯ ಹಿರಿಯರಾದ ಶಿಕ್ಷಕ ಪಿ.ಎಚ್.ತಳಗೇರಿ ಮಾತನಾಡಿ, ಯುವಕರು ಮಧ್ಯಪಾನ ದಾಸರಾಗಿದ್ದಾರೆ. ಅಂತಹ ಯುವಕರು ದುಶ್ಚಟಗಳಿಂದ ದೂರವಿರಬೇಕೆಂದು ಸಲಹೆ ನೀಡಿದರು.

 ಬಾಮ್ಸೇಫ್ ಅಂಗ ಸಂಘಟನೆಯಾದ ಭಾರತೀಯ ಯುವ ಮೋರ್ಚಾ ಜಿಲ್ಲಾ ಸಂಯೋಜಕ ವಿಶಾಲ ಗೋಶಾಲ್ಯನ್ನವರ್ ಮಾತನಾಡಿ, ಪ್ರೆವೆಟ್ ಡಿಫೆನ್ಸ ಆ್ಯಕ್ಟ್ ಹಾಗೂ ಅನುಚ್ಛೇದ 17 ಅದರ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಕಾನೂನು ಮತ್ತು ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳಾಗಬೇಕು ಎಂದು ಪೊಲೀಸ್ ಇಲಾಖೆಯವರಿಗೆ ಮನವಿ ಮಾಡಿಕೊಂಡರು.

 ಈ ಸಂದರ್ಭದಲ್ಲಿ ವಿಜಯ ಕಲ್ಮನಿ, ವೀಣಾ ಕಡಬಿನ, ಮಂಜುಳಾ ಅಗಸಿನಕೊಪ್ಪ, ಯಮನವ್ವ ಕಲ್ಮನಿ, ಪೋಲಿಸರೊಂದಿಗೆ ಎಸ್.ಸಿ./ಎಸ್.ಟಿ. ಜನರ ಮೇಲೆ ಆಗುತ್ತಿರುವ ದೌರ್ಜನ್ಯದ ಬಗ್ಗೆ ಚರ್ಚೆ ಮಾಡಿದರು. ರಾಘವೇಂದ್ರ ನಾಗನಾಥನಹಳ್ಳಿಯವರು ದಲಿತ ಎಂಬ ಪದ ಬಳಸುವುದು ಸೂಕ್ತವಲ್ಲ ಇದು ಅಸಂವಿಧಾನಿಕ ಪದ ಎಂದು ಪೋಲಿಸ್ ಅಧಿಕಾರಿಗಳಿಗೆ ಮನವಿ ಮಾಡಿಕೊಟ್ಟರು.

 ಈ ಸಂದರ್ಭದಲ್ಲಿ ವಿಶಾಲ ಹಾದಿಮನಿ, ಸಂತೋಷ ಅಕ್ಕಿ, ರಾಘು ದೊಡ್ಡಮನಿ, ಶಿವಾನಂದ ಸಕ್ರಿ, ಬಸವರಾಜ ಕಟ್ಟಿಮನಿ, ವಿನಾಯಕ ಕಟ್ಟಿಮನಿ, ವಿನಾಯಕ ಕಲ್ಮನಿ, ವಿನಾಯಕ ಸಂಗಾಪೂರ, ಸಂಜಯ ಪರಾಪೂರ, ಅಭಿಷೇಕ ಸಂಗಾಪೂರ, ಗಣೇಶ ಅಕ್ಕಿ, ಸುರೇಶ ಸಂಗಾಪೂರ, ಪ್ರಮೋದ ಸಕ್ರಿ, ಮೋಹನ ಅಗಸಿನಕೊಪ್ಪ, ರಾಹುಲ ಜಂಬಲದಿನ್ನಿ, ಮಂಜುನಾಥ ಕಲ್ಲೂರ, ಸಾಗರ ಕಟ್ಟಿಮನಿ, ಅಭಿ ಬಳ್ಳಾರಿ, ಶ್ರೀಶೈಲ ಪರಾಪೂರ, ಯಮನೇಶ ಬೇವಿನಕಟ್ಟಿ, ಹಾಗೂ ಭಾರತೀಯ ಯುವ ಮೋರ್ಚಾ ಕಾರ್ಯಕರ್ತರು, ತಳಗೇರಿ ಓಣಿಯ ಹಿರಿಯರು ಉಪಸ್ಥಿತಿರಿದ್ದರು.

Leave a Reply

Your email address will not be published. Required fields are marked *

You May Also Like

ಬಾಗೇಪಲ್ಲಿ: ತಾಲೂಕಿನ ದುಗ್ಗಿನಾಕನಪಲ್ಲಿ ಗ್ರಾಮದ ಕೆರೆ ಕಾಲುವೆ ಪ್ರದೇಶದ ಒತ್ತುವರಿ ತೆರವುಗೆ ದೂರು

ಉತ್ತರಪ್ರಭ ಸುದ್ದಿ ಬಾಗೇಪಲ್ಲಿ: ತಾಲೂಕಿನ ದುಗ್ಗಿನಾಕನಪಲ್ಲಿ ಗ್ರಾಮದ ಕೆರೆ ಕಾಲುವೆ ಪ್ರದೇಶದ ಒತ್ತುವರಿ ತೆರವುಗೆ ದೂರು…

ಬಿಪಿಎಲ್ ಕಾರ್ಡ್ ದಾರರು, ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಸರ್ಕಾರದ ಬೆಂಬಲ ಬೆಲೆಯೊಂದಿಗೆ ರಾಗಿ, ಭತ್ತ ಜೋಳ ಖರೀದಿಗೆ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅಗತ್ಯವರುವ ಕಡೆಗಳಲ್ಲಿ ಹೆಚ್ಚಿನ ಖರೀದಿ ಕೇಂದ್ರಗಳನ್ನು ತೆರದು ಈ ಬಗ್ಗೆ ಪ್ರಚಾರಗೊಳಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ಆನ್‍ಲೈನ್ ಮೂಲಕ ಐ.ಟಿ.ಐ ಕೋರ್ಸಗಳಿಗೆ ಪ್ರವೇಶಾತಿ

ರಾಜ್ಯದ 270 ಸರಕಾರಿ ಹಾಗೂ 196 ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಅಗಷ್ಟ-2020 ನೇ ಸಾಲಿಗೆ ಮೆರಿಟ್-ಕಂ-ರಿಸರ್ವೇಷನ್ ಆಧಾರಿತ ಪ್ರವೇಶಗಳನ್ನು ಆನ್‍ಲೈನ್ ಮುಖಾಂತರ ಮಾಡಲಾಗುತ್ತಿದೆ.

ಇಂದು ಆರ್ಟ್ ಅಡ್ಡಾ ಉದ್ಘಾಟನೆ

ನಗರದ ಹಾಕಿ ಗ್ರೌಂಡ ಹತ್ತಿರ, ಎಸ್.ಎಂ.ಕೃಷ್ಣ ನಗರ ರಸ್ತೆಯ ಬಳಿ ಮಾ.6 ರಂದು ಶನಿವಾರ ಸಂಜೆ 6-30ಕ್ಕೆ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಆರ್ಟ್ ಅಡ್ಡಾ ಸಭಾಭವನ ಉದ್ಘಾಟನೆ ಹಾಗೂ ಸಂಧ್ಯಾ ಸುರಾಗ ಕಾರ್ಯಕ್ರಮ ನೆರವೇರುವುದು.