ವಿಶ್ವ ಅರಣ್ಯ ದಿನಾಚರಣೆ
ಶಿರಹಟ್ಟಿ:
ಕಾಡು ಬೆಳೆಸಿ ನಾಡು ಉಳಿಸಿ ಎಂಬ ವಾಖ್ಯೆದಂತೆ ಪ್ರತಿಯೊಬ್ಬರು ಗಿಡಗಳನ್ನು ಬೆಳೆಸಿ ಉತ್ತಮವಾದ ಆರೋಗ್ಯವನ್ನು ಪಡೆದುಕೊಳ್ಳುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಪಪಂ ಅಧ್ಯಕ್ಷ ಪರಮೇಶ ಪರಬ ಹೇಳಿದರು.

ಸ್ಥಳೀಯ ಸಾಮಾಜಿಕ ಅರಣ್ಯ ಇಲಾಖೆಯಿಂದ ರವಿವಾರ ನಡೆದ ವಿಶ್ವ ಅರಣ್ಯ ದಿನಾಚರಣೆಯನ್ನು ಸಸಿ ನೆಟ್ಟು ಅದಕ್ಕೆ ನೀರುಣಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಮರ, ಗಿಡಗಳನ್ನು ಕಡಿದು ಅರಣ್ಯ ನಾಶ ಮಾಡುವುದು ಅಪರಾಧವಾಗಿದೆ. ಮೂಲಭೂತ ಸೌಲಭ್ಯಗಳಲ್ಲಿ ಉತ್ತಮವಾದ ಗಾಳಿಯು ಸಹ ಒಂದಾಗಿದ್ದು, ಅರಣ್ಯ ಉಳಿದರೆ ಮಾತ್ರ ಮನುಷ್ಯ ಹಾಗೂ ಪ್ರಾಣಿ ಸಂಕುಲಗಳು ಬೆಳೆಯಲು ಸಾಧ್ಯ. ಈ ನಿಟ್ಟಿನಲ್ಲಿ ಅರಣ್ಯ ಬೆಳೆಸಲು ಪ್ರತಿಯೊಬ್ಬರು ಮುಂದಾಗಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉಳಿಸಲು ಯುವ ಜನಾಂಗ ಪಣ ತೊಡಬೇಕಾಗಿದ್ದು, ಮರಗಿಡಗಳನ್ನು ಪೋಷಣೆ ಮಾಡಿ ಪರಿಸರ ಉಳಿವಿಗಾಗಿನಾವೆಲ್ಲರೂ ಪಣ ತೊಡಬೇಕು ಎಂದು ಹೇಳಿದರು.
ಪಪಂ ಉಪಾಧ್ಯಕ್ಷ ಇಸಾಕ ಆದ್ರಳ್ಳಿ, ಸದಸ್ಯ ದೀಪು ಕಪ್ಪತ್ತನವರ, ತಾಪಂ ಸದಸ್ಯ ತಿಪ್ಪಣ್ಣ ಕೊಂಚಿಗೇರಿ, ಜಗದೀಶ ತೇಲಿ, ಶರಣಪ್ಪ ಹರ್ಲಾಪೂರ, ವಿನಾಯಕ ಪರಬತ, ಬಸವಣ್ಣೆಪ್ಪ ತುಳಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್.ಪಿ.ಹೊಸಳ್ಳಿ, ಉಪ ವಲಯ ಅರಣ್ಯಾಧಿಕಾರಿ ಶಂಕರ ಕೊನಪ್ಪನವರ, ಮಾಂತೇಶ ಲಮಾಣಿ, ಮಂಜುನಾಥ ಮಾಳಗಿ, ಲೇಪಾಕ್ಷಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

13 ವರ್ಷಗಳಿಂದ ಪ್ರೀತಿ…ಎರಡು ಬಾರಿ ಗರ್ಭಪಾತ…ಮದುವೆಯ ದಿನವೇ ನಾಪತ್ತೆ!

ಉಡುಪಿ : ಇಬ್ಬರೂ ಕಳೆದ 13 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಪ್ರೀತಿಯ ಪಾತ್ರವಾಗಿ ಎರಡು ಬಾರಿ ಯುವತಿಯ ಗರ್ಭಪಾತವೂ ಆಗಿದೆ. ಆದರೆ, ಮದುವೆಯೇ ದಿನವೇ ಹುಡುಗ ಕೈ ಕೊಟ್ಟ ಘಟನೆ ನಡೆದಿದೆ.
ಹೂವಿನ ಹಡಗಲಿ: ಬಳ್ಳಾರಿ ಜಿಲ್ಲೆಯ ಹೂನಿನ ಹಡಗಲಿ ತಾಲೂಕಿನಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಒಟ್ಟು 9…

ಅಗಸ್ಟ್ 5 ರಂದು ಸಂಕಲ್ಪ ಯಾತ್ರೆಗೆ ಆಲಮಟ್ಟಿಯಲ್ಲಿ ಚಾಲನೆ

ಉತ್ತರಪ್ರಭಆಲಮಟ್ಟಿ : ದೇಶ, ನಾಡು ಕಟ್ಟುವಗೊಸ್ಕರ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಮಹನೀಯರ ಸ್ಮರಣೆಗಾಗಿ…

1xbet вход: Актуальное Зеркало 1хбет Денга

Онлайн Казино 1xbet официальному Сайт Зеркало: Регистрация И Вход, Скачать 1хбет Что…