ಧಾರವಾಡ: ಈಗಾಗಲೇ ದಿನದಿಂದ ದಿನಕ್ಕೆ ಕೊರೋನ ಎರಡನೇ ಅಲೆ ಆರಂಭವಾಗಿದ್ದು, ಈ ಹಿನ್ನೆಲೆ ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ ಎಂದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಈ ಕುರಿತು ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಲಾಕ್‌ಡೌನ್ ವಿಚಾರವಾಗಿ ಬಗ್ಗೆ ಚರ್ಚೆ ಮಾಡಿಲ್ಲ. ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡುವುದಿಲ್ಲ. ಆಯಾ ರಾಜ್ಯದಲ್ಲಿ ಕೊರೊನಾ ಬಗ್ಗೆ ಅವರು ಕ್ರಮಗಳನ್ನ ಕೈಗೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಬಗ್ಗೆ ತಜ್ಞರು ಚರ್ಚೆ ಮಾಡುತ್ತಿದ್ದಾರೆ. ಕೊರೊನಾ ನಿಯಂತ್ರಣ ಮಾಡಬೇಕು ಎಂಬ ವಿಚಾರದಲ್ಲಿ ಸರಕಾರ ಕ್ರಮ ಕೈಗೊಂಡಿದೆ ಎಂದರು.

ಉಪ ಚುಣಾವಣೆಯಲ್ಲಿ ಮೂರು ಕಡೆ ಬಿಜೆಪಿ ಗೆಲುವು ಸಾಧಿಸಲಿದೆ. ಎರಡು ವಿಧಾನಸಭಾ ಹಾಗೂ ಒಂದು ಲೋಕಸಭೆಯಲ್ಲಿ ಜಯಭೇರಿ ಬಾರಿಸಲಿದೆ. ಎಸ್‌ಐಟಿ ಸಿಎಂ, ಗೃಹ ಸಚಿವರ ಕೈಯಲ್ಲಿ ಕೆಲಸ ಮಾಡುತ್ತದೆ ಎಂಬ ಯತ್ನಾಳ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, 2016 ರಲ್ಲಿ ಸಚಿವರೊಬ್ಬರ ಸಿಡಿ ಪ್ರಕರಣ ನಡೆದಿತ್ತು. ಆ ಸಮಯದಲ್ಲಿ ರಾಜ್ಯ ಸರಕಾರದ ಎಸ್‌ಐಟಿ ವಿಚಾರಣೆ ಮಾಡಿತ್ತು. ಯಾವಾಗಲೂ ಪೋಲಿಸರು ಕಾನೂನು ಪ್ರಕಾರ ವಿಚಾರಣೆ ಮಾಡುತ್ತಿದ್ದಾರೆ. ಎಸ್‌ಐಟಿಯನ್ನ ಸ್ವತಂತ್ರವಾಗಿ ಬಿಟ್ಟಿದ್ದೆವೆ ಎಂದು ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

You May Also Like

ಕನ್ನಡ ರಾಜ್ಯೋತ್ಸವ ದಿನದಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲು ಮುಂದಾದ ಮಹಾರಾಷ್ಟ್ರ ಸಚಿವರು!

ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ.

ಹುಬ್ಬಳ್ಳಿ :ಕೈಯಲ್ಲಿ ಜೀವ ಹಿಡಿದುಕೊಂಡು ಹೋಗಬೇಕು ಜಯನಗರದಲ್ಲಿ

ಅದು ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗ, ಅಲ್ಲಿ ನೀವು ಏನಾದರೂ ಸಂಚಾರ ಮಾಡಬೇಕು ಎಂದರೆ ಸ್ವಲ್ಪ ಎಚ್ಚರಿಕೆ ಇರಬೇಕು. ಸ್ವಲ್ಪ ಅಪ್ಪ ತಪ್ಪಿದರೆ ಸೊಂಟ,‌ಅಥವಾ ಕೈಕಾಲು ಮುರಿಯುವುದು ಗ್ಯಾರಂಟಿ. ಇದು ನಗರದ ಕಿಮ್ಸ್ ಆಸ್ಪತ್ರೆಯ ಎದುರಿಗಿನ ಜಯನಗರ ರಸ್ತೆ. ಮಳೆಯಾದರೂ ಅಂತೂ ಮಳೆಯ ನೀರು ಮನೆ ತುಂಬೆಲ್ಲಾ ನುಗ್ಗುತ್ತವೆ.

ಸರಳ ಗಣರಾಜ್ಯೋತ್ಸವ ಆಲಮಟ್ಟಿ ಪ್ರವಾಸಿ ತಾಣ ಉತ್ತೇಜನಕ್ಕೆ ಸಂಕಲ್ಪ- ಎಚ್.ಸುರೇಶ್

ಆಲಮಟ್ಟಿ: ಈ ಭಾಗದ ಪ್ರವಾಸಿ ತಾಣವಾಗಿ ಖ್ಯಾತಿ ಪಡೆಯುತ್ತಿರುವ ಆಲಮಟ್ಟಿಯನ್ನು ಇನ್ನಷ್ಟು ಪ್ರವಾಸಿಗರನ್ನು ಇತ್ತ ಆಕಷಿ೯ಸಿ…