ಧಾರವಾಡ: ಈಗಾಗಲೇ ದಿನದಿಂದ ದಿನಕ್ಕೆ ಕೊರೋನ ಎರಡನೇ ಅಲೆ ಆರಂಭವಾಗಿದ್ದು, ಈ ಹಿನ್ನೆಲೆ ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ ಎಂದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಈ ಕುರಿತು ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಲಾಕ್‌ಡೌನ್ ವಿಚಾರವಾಗಿ ಬಗ್ಗೆ ಚರ್ಚೆ ಮಾಡಿಲ್ಲ. ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡುವುದಿಲ್ಲ. ಆಯಾ ರಾಜ್ಯದಲ್ಲಿ ಕೊರೊನಾ ಬಗ್ಗೆ ಅವರು ಕ್ರಮಗಳನ್ನ ಕೈಗೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಬಗ್ಗೆ ತಜ್ಞರು ಚರ್ಚೆ ಮಾಡುತ್ತಿದ್ದಾರೆ. ಕೊರೊನಾ ನಿಯಂತ್ರಣ ಮಾಡಬೇಕು ಎಂಬ ವಿಚಾರದಲ್ಲಿ ಸರಕಾರ ಕ್ರಮ ಕೈಗೊಂಡಿದೆ ಎಂದರು.

ಉಪ ಚುಣಾವಣೆಯಲ್ಲಿ ಮೂರು ಕಡೆ ಬಿಜೆಪಿ ಗೆಲುವು ಸಾಧಿಸಲಿದೆ. ಎರಡು ವಿಧಾನಸಭಾ ಹಾಗೂ ಒಂದು ಲೋಕಸಭೆಯಲ್ಲಿ ಜಯಭೇರಿ ಬಾರಿಸಲಿದೆ. ಎಸ್‌ಐಟಿ ಸಿಎಂ, ಗೃಹ ಸಚಿವರ ಕೈಯಲ್ಲಿ ಕೆಲಸ ಮಾಡುತ್ತದೆ ಎಂಬ ಯತ್ನಾಳ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, 2016 ರಲ್ಲಿ ಸಚಿವರೊಬ್ಬರ ಸಿಡಿ ಪ್ರಕರಣ ನಡೆದಿತ್ತು. ಆ ಸಮಯದಲ್ಲಿ ರಾಜ್ಯ ಸರಕಾರದ ಎಸ್‌ಐಟಿ ವಿಚಾರಣೆ ಮಾಡಿತ್ತು. ಯಾವಾಗಲೂ ಪೋಲಿಸರು ಕಾನೂನು ಪ್ರಕಾರ ವಿಚಾರಣೆ ಮಾಡುತ್ತಿದ್ದಾರೆ. ಎಸ್‌ಐಟಿಯನ್ನ ಸ್ವತಂತ್ರವಾಗಿ ಬಿಟ್ಟಿದ್ದೆವೆ ಎಂದು ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

You May Also Like

ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿ: ಡಾ.ಬಸವಲಿಂಗ ಸ್ವಾಮೀಜಿ

ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾದುದು. ಎಲ್ಲರ ಬದುಕಿಗೆ ಅನುಗುಣವಾದ ಪರಂಪರೆ ಇದು. ಈ ನಿಟ್ಟಿನಲ್ಲಿ ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ

ಬಸ್ ನಿಲುಗಡೆ ಸ್ಥಳದಲ್ಲೇ ಬೈಕ್ ಪಾರ್ಕಿಂಗ್, ಪ್ರಯಾಣಿಕರ ಪರದಾಟ

ಸ್ಥಳೀಯ ಬಸ್ ನಿಲ್ಧಾಣದ ನಿಲುಗಡೆ ಸ್ಥಳದಲ್ಲೇ ನಿತ್ಯ ಬೈಕ್ ಗಳ ಪಾರ್ಕಿಂಗ್ ಮಾಡುತ್ತಿದ್ದು ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹೊಸ ಬಸ್ ನಿಲ್ಧಾಣ ಆರಂಭವಾದಾಗಿನಿಂದ ಬೈಕ ನಿಲ್ಲಿಸಲು ಪ್ರತ್ಯೇಕ ಜಾಗದ ವ್ಯವಸ್ಥೆ ಇಲ್ಲದಿರುವದು ಈ ಸಮಸ್ಯೆ ಉಂಟಾಗಿದೆ. ನಿಲ್ಧಾನದಲ್ಲಿ ಯಾವ ಸೂಚನಾ ಫಲಕವನ್ನು ಅಳಡಿಕೆಗೆ ಸಂಬಂಧಿಸಿದ ಸಾರಿಗೆ ಸಂಸ್ಥೆ ಸೂಕ್ತ ವ್ಯವಸ್ಥೆ ಮಾಡುತ್ತಿಲ್ಲ.

ನೂತನ ಗದಗ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ನೇಮಕ..!

ಉತ್ತರಪ್ರಭ, ಗದಗ :ಗದಗ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ಇವರನ್ನು ತಕ್ಷಣವೆ ಜಾರಿಬರುವಂತೆ ರಾಜ್ಯ ಸರ್ಕಾರ…

ಗುಲಾಬ ನಬಿ ಆಜಾದರ ನಿರ್ಣಯ ಕೋಮುವಾದಿ ಶಕ್ತಿಗೆ ಬಲ ತಂದಂತಾಗಿದೆ: ಎಚ್ ಕೆ ಪಾಟೀಲ

ಉತ್ತರಪ್ರಭಗದಗ: ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಎಂಬ ರ್ಯಾಲಿಯ ಮೂಲಕ ಕೋಮುವಾದಿ ಶಕ್ತಿಗಳಿಗೆ ಶಡ್ಡು ಹೋಡೆದು…