ಗದಗ: ನಗರದ ಡಿ.ಸಿ.ಮಿಲ್ ತಳಗೇರಿ ಓಣಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ ಆಯೋಜಿಸಲಾಯಿತು.

ಸಭೆಯಲ್ಲಿ ಶಹರ ಪೊಲೀಸ್ ಠಾಣೆ ಸಿಪಿಐ ಸಾಲಿಮಠ ಮಾತನಾಡಿ, ಪೋಲಿಸ್ ಅಂದರೆ ಭಯ ಅಲ್ಲ, ಭರವಸೆ ಎಂದು ಹೇಳಿದರು ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದರು.

ಪಿಎಸ್‌ಐ ಪ್ರಕಾಶ ಡಿ ಮಾತನಾಡಿ, ಶಿಕ್ಷಣದ ಅರಿವು ಮಕ್ಕಳಲ್ಲಿ ಮನೆ ಮಾಡಬೇಕು ಅದು ಅವರ ಪ್ರಗತಿಗೆ ಹಾಗೂ ಸಮಾಜಕ್ಕೆ ಹಿರಿಮೆ ತರುತ್ತದೆ ಎಂದು ಮಕ್ಕಳ ಮನವೊಲಿಸಿದರು.

ಓಣಿಯ ಹಿರಿಯರಾದ ಶಿಕ್ಷಕ ಪಿ.ಎಚ್.ತಳಗೇರಿ ಮಾತನಾಡಿ, ಯುವಕರು ಮಧ್ಯಪಾನ ದಾಸರಾಗಿದ್ದಾರೆ. ಅಂತಹ ಯುವಕರು ದುಶ್ಚಟಗಳಿಂದ ದೂರವಿರಬೇಕೆಂದು ಸಲಹೆ ನೀಡಿದರು.

 ಬಾಮ್ಸೇಫ್ ಅಂಗ ಸಂಘಟನೆಯಾದ ಭಾರತೀಯ ಯುವ ಮೋರ್ಚಾ ಜಿಲ್ಲಾ ಸಂಯೋಜಕ ವಿಶಾಲ ಗೋಶಾಲ್ಯನ್ನವರ್ ಮಾತನಾಡಿ, ಪ್ರೆöÊವೆಟ್ ಡಿಫೆನ್ಸ ಆ್ಯಕ್ಟ್ ಹಾಗೂ ಅನುಚ್ಛೇದ 17 ಅದರ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಕಾನೂನು ಮತ್ತು ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳಾಗಬೇಕು ಎಂದು ಪೊಲೀಸ್ ಇಲಾಖೆಯವರಿಗೆ ಮನವಿ ಮಾಡಿಕೊಂಡರು.

 ಈ ಸಂದರ್ಭದಲ್ಲಿ ವಿಜಯ ಕಲ್ಮನಿ, ವೀಣಾ ಕಡಬಿನ, ಮಂಜುಳಾ ಅಗಸಿನಕೊಪ್ಪ, ಯಮನವ್ವ ಕಲ್ಮನಿ, ಪೋಲಿಸರೊಂದಿಗೆ ಎಸ್.ಸಿ./ಎಸ್.ಟಿ. ಜನರ ಮೇಲೆ ಆಗುತ್ತಿರುವ ದೌರ್ಜನ್ಯದ ಬಗ್ಗೆ ಚರ್ಚೆ ಮಾಡಿದರು. ರಾಘವೇಂದ್ರ ನಾಗನಾಥನಹಳ್ಳಿಯವರು ದಲಿತ ಎಂಬ ಪದ ಬಳಸುವುದು ಸೂಕ್ತವಲ್ಲ ಇದು ಅಸಂವಿಧಾನಿಕ ಪದ ಎಂದು ಪೋಲಿಸ್ ಅಧಿಕಾರಿಗಳಿಗೆ ಮನವಿ ಮಾಡಿಕೊಟ್ಟರು.

 ಈ ಸಂದರ್ಭದಲ್ಲಿ ವಿಶಾಲ ಹಾದಿಮನಿ, ಸಂತೋಷ ಅಕ್ಕಿ, ರಾಘು ದೊಡ್ಡಮನಿ, ಶಿವಾನಂದ ಸಕ್ರಿ, ಬಸವರಾಜ ಕಟ್ಟಿಮನಿ, ವಿನಾಯಕ ಕಟ್ಟಿಮನಿ, ವಿನಾಯಕ ಕಲ್ಮನಿ, ವಿನಾಯಕ ಸಂಗಾಪೂರ, ಸಂಜಯ ಪರಾಪೂರ, ಅಭಿಷೇಕ ಸಂಗಾಪೂರ, ಗಣೇಶ ಅಕ್ಕಿ, ಸುರೇಶ ಸಂಗಾಪೂರ, ಪ್ರಮೋದ ಸಕ್ರಿ, ಮೋಹನ ಅಗಸಿನಕೊಪ್ಪ, ರಾಹುಲ ಜಂಬಲದಿನ್ನಿ, ಮಂಜುನಾಥ ಕಲ್ಲೂರ, ಸಾಗರ ಕಟ್ಟಿಮನಿ, ಅಭಿ ಬಳ್ಳಾರಿ, ಶ್ರೀಶೈಲ ಪರಾಪೂರ, ಯಮನೇಶ ಬೇವಿನಕಟ್ಟಿ, ಹಾಗೂ ಭಾರತೀಯ ಯುವ ಮೋರ್ಚಾ ಕಾರ್ಯಕರ್ತರು, ತಳಗೇರಿ ಓಣಿಯ ಹಿರಿಯರು ಉಪಸ್ಥಿತಿರಿದ್ದರು.

Leave a Reply

Your email address will not be published. Required fields are marked *

You May Also Like

ಆದುನಿಕತೆಯಲ್ಲಿ ಜಾನಪದ ಸಾಹಿತ್ಯ ಮರೆಯಾಗದಿರಲಿ: ದೊಡ್ಡಮನಿ

ಜಾನಪದ ಸಾಹಿತ್ಯ ಇಂದಿನ ಆಧುನಿಕ ಸ್ಪರ್ಶದಿಂದ ಕಣ್ಮರೆಯಾಗುತ್ತಿದ್ದು, ವೈಶಿಷ್ಟಪೂರ್ಣವಾದ ಈ ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.

ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ಮದುವೆ : ಕೋವಿಡ್ ನಿಯಮಕ್ಕೆ ಡೋಂಟ್ ಕೇರ್..!!

ಹರಪನಹಳ್ಳಿ: ಕೊರೊನಾ ಹಿನ್ನೆಲೆ ಲಾಕ್ ಡೌನ್ ಸಡಿಲಿಸಿದರೂ ಸಾಕಷ್ಟು ಕಟ್ಟುನಿಟ್ಟಿನ ನಿಯಮ ಸರ್ಕಾರ ಸೂಚಿಸಿದೆ. ಆದರೆ…

ರಾಜ್ಯಾದ್ಯಂತ ಎರಡುದಿನ ಭಾರಿ ಮಳೆ : ಗದಗ ಸೆರಿ ಇನ್ನು ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..!

ಉತ್ತರಪ್ರಭ ಸುದ್ದಿ ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ರಾಜ್ಯದಲ್ಲಿ…

ಗ್ರಾಮಪಂಚಾಯಿತಿಗೆ ಸದಸ್ಯರ ನೇಮಕ: ಕಾಂಗ್ರೆಸ್ ವಿರೋಧ

ಅವಧಿ ಪೂರ್ಣಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅವಕಾಶ ನೀಡದಂತೆ ಹಾಗೂ ಪಂಚಾಯಿತಿಗಳಿಗೆ ಚುನಾವಣೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರ ನಿಯೋಗ ಮೂಲಕ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿತು.