ಗಜೇಂದ್ರಗಡ: ಶಿಕ್ಷಕರು ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಬುದ್ದಿಮಟ್ಟ ಮತ್ತು ಅವರ ಆಸಕ್ತಿಗಳನ್ನು ಅರಿತು ಭೋಧನೆ ಮಾಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಲು ಸಾಧ್ಯವಾಗುತ್ತದೆ ಎಂದು ಬಾಲಕೀಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಜಾಲಿಹಾಳ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಗಜೇಂದ್ರಗಡ ಹಾಗೂ ರೋಣ ತಾಲ್ಲೂಕು ಮಟ್ಟದ ಕನ್ನಡ ವಿಷಯ ಶಿಕ್ಷಕರ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಶಿಕ್ಷಕರ ಜವಾಬ್ದಾರಿಯಾಗಿದೆ. ಅದನ್ನು ನಾವೇಲ್ಲರೂ ಜವಾಬ್ದಾರಿಯುತವಾಗಿ ನಿಬಾಯಿಸಬೇಕು. ಅಲ್ಲದೇ ಶಿಕ್ಷಕರು ಸದಾ ಅಧ್ಯಯನಶೀಲರಾಗಿರುವುದರ ಜೊತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಉತ್ತಮ ಫಲಿತಾಂಶ ತರಲು ಶ್ರಮಿಸಬೇಕು ಎಂದರು.

ಶಿಕ್ಷಕ ಶಿವಾನಂದ ಮಠದ ಮಾತನಾಡಿ, ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇವೆ. ಹೀಗಾಗಿ ಶಿಕ್ಷಕರು ಜವಾಬ್ದಾರಿ ವಹಿಸಿ ಶಿಕ್ಷಣದಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿಸ ಶಾಲಾ ಹಂತದಲ್ಲಿ ಕಠಿಣ ವಿಷಯಗಳ ಬಗ್ಗೆ ಪರೀಕ್ಷೆ ಬರೆಸಿ ಮೌಲ್ಯಮಾಪನ ಮಾಡಿ ಮಕ್ಕಳು ಪಡೆದ ಅಂಕಗಳ ಬಗ್ಗೆ ಅರಿತು ಅವರಿಗೆ ಮಾರ್ಗದರ್ಶನ ನೀಡಬೇಕು. ಪೋಷಕರ ಸಭೆ, ಮನೆ ಮನೆ ಭೇಟಿ, ರಸಪ್ರಶ್ನೆ, ಸಂವಾದದಂತ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.

ಕಾರ್ಯಾಗಾರದಲ್ಲಿ ಶಿಕ್ಷಕ ಎಂ.ವಿ.ನಾಡಗೇರ, ಎಚ್.ವೈ.ನದಾಫ, ಮಹಾಂತೇಶ ಚಳಕಿ, ಎಂ.ವಿ.ಲೂತಿಮಠ, ಎಲ್.ಬಿ.ಬಸವರಡ್ಡೇರ, ಐ.ಬಿ.ಕುರಿ, ಅನ್ನಪೂರ್ಣ ಹಿರೇಮಠ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ : ಕೋಟಿ ಕಂಠ ಗೀತ ಗಾಯನ ಸಂಭ್ರಮ

ಆಲಮಟ್ಟಿ:  ಇಲ್ಲಿನ ಶಾಲಾ,ಕಾಲೇಜುಗಳಲ್ಲಿ ಶುಕ್ರವಾರ ಕನ್ನಡ ಸಿರಿತನದ ಗೀತೆಗಳು ಮೊಳಗಿದವು. ಕನ್ನಡಮ್ಮನ ಜ್ಞಾನ ದೀಪದ ಗೀತಗಾನ…

ಕೃಷಿಗೆ ಉತ್ತೇಜನ ನೀಡಲು ಭೂಕಾಯಿದೆಗೆ ತಿದ್ದುಪಡಿಯಾಗಿದೆ : ಸಚಿವ ಬಿ.ಸಿ.ಪಾಟೀಲ್

ಕಾಂಗ್ರೆಸ್ ಈಗ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೆಕೆರೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು. 2019 ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು ಎಂದರು.

ಗದಗ ಜಿಲ್ಲೆಯ ಹೂ ಬೆಳೆಗಾರರಿಗೆ ಕೋಟ್ಯಾಂತರ ರೂ, ನಷ್ಟ..!

ಲಾಕ್ ಡೌನ್ ಹಿನ್ನೆಲೆ ಹೂಬೆಳೆಯನ್ನೆ ನಂಬಿಕೊಂಡ ಕುಳಿತ ರೈತ ಕಂಗಾಲಾಗಿದ್ದಾನೆ. ಗದಗ ಜಿಲ್ಲೆಯಲ್ಲಿ ಯಾವ ಹೂವು ಎಷ್ಟು ಹಾನೀಗಿಡಾಗಿದೆ ಎನ್ನುವ ವಿವರ ಇಲ್ಲಿದೆ ನೋಡಿ.

ಆನ್‍ಲೈನ್ ಮೂಲಕ ಐ.ಟಿ.ಐ ಕೋರ್ಸಗಳಿಗೆ ಪ್ರವೇಶಾತಿ

ರಾಜ್ಯದ 270 ಸರಕಾರಿ ಹಾಗೂ 196 ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಅಗಷ್ಟ-2020 ನೇ ಸಾಲಿಗೆ ಮೆರಿಟ್-ಕಂ-ರಿಸರ್ವೇಷನ್ ಆಧಾರಿತ ಪ್ರವೇಶಗಳನ್ನು ಆನ್‍ಲೈನ್ ಮುಖಾಂತರ ಮಾಡಲಾಗುತ್ತಿದೆ.