ಗಜೇಂದ್ರಗಡ: ಶಿಕ್ಷಕರು ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಬುದ್ದಿಮಟ್ಟ ಮತ್ತು ಅವರ ಆಸಕ್ತಿಗಳನ್ನು ಅರಿತು ಭೋಧನೆ ಮಾಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಲು ಸಾಧ್ಯವಾಗುತ್ತದೆ ಎಂದು ಬಾಲಕೀಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಜಾಲಿಹಾಳ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಗಜೇಂದ್ರಗಡ ಹಾಗೂ ರೋಣ ತಾಲ್ಲೂಕು ಮಟ್ಟದ ಕನ್ನಡ ವಿಷಯ ಶಿಕ್ಷಕರ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಶಿಕ್ಷಕರ ಜವಾಬ್ದಾರಿಯಾಗಿದೆ. ಅದನ್ನು ನಾವೇಲ್ಲರೂ ಜವಾಬ್ದಾರಿಯುತವಾಗಿ ನಿಬಾಯಿಸಬೇಕು. ಅಲ್ಲದೇ ಶಿಕ್ಷಕರು ಸದಾ ಅಧ್ಯಯನಶೀಲರಾಗಿರುವುದರ ಜೊತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಉತ್ತಮ ಫಲಿತಾಂಶ ತರಲು ಶ್ರಮಿಸಬೇಕು ಎಂದರು.

ಶಿಕ್ಷಕ ಶಿವಾನಂದ ಮಠದ ಮಾತನಾಡಿ, ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇವೆ. ಹೀಗಾಗಿ ಶಿಕ್ಷಕರು ಜವಾಬ್ದಾರಿ ವಹಿಸಿ ಶಿಕ್ಷಣದಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿಸ ಶಾಲಾ ಹಂತದಲ್ಲಿ ಕಠಿಣ ವಿಷಯಗಳ ಬಗ್ಗೆ ಪರೀಕ್ಷೆ ಬರೆಸಿ ಮೌಲ್ಯಮಾಪನ ಮಾಡಿ ಮಕ್ಕಳು ಪಡೆದ ಅಂಕಗಳ ಬಗ್ಗೆ ಅರಿತು ಅವರಿಗೆ ಮಾರ್ಗದರ್ಶನ ನೀಡಬೇಕು. ಪೋಷಕರ ಸಭೆ, ಮನೆ ಮನೆ ಭೇಟಿ, ರಸಪ್ರಶ್ನೆ, ಸಂವಾದದಂತ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.

ಕಾರ್ಯಾಗಾರದಲ್ಲಿ ಶಿಕ್ಷಕ ಎಂ.ವಿ.ನಾಡಗೇರ, ಎಚ್.ವೈ.ನದಾಫ, ಮಹಾಂತೇಶ ಚಳಕಿ, ಎಂ.ವಿ.ಲೂತಿಮಠ, ಎಲ್.ಬಿ.ಬಸವರಡ್ಡೇರ, ಐ.ಬಿ.ಕುರಿ, ಅನ್ನಪೂರ್ಣ ಹಿರೇಮಠ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಡೆತ್‌ನೋಟ್ ಬರೆದಿಟ್ಟು ಪೊಲೀಸ್ ಪೇದೆ ಸಾವು

ಉತ್ತರಪ್ರಭ ಸುದ್ದಿಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಮನೆಯಲ್ಲಿ ಪೊಲೀಸ್ ಪೇದೆಯೊಬ್ಬರು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ…

ಗರ್ಭಿಣಿಗೆ ಸೋಂಕು: ಗದಗ ಹೆರಿಗೆ ಆಸ್ಪತ್ರೆ ಸೀಲ್ ಡೌನ್

ಗದಗ: ನಗರದ ಕೆ.ಸಿ ರಾಣಿ ರಸ್ತೆಯಲ್ಲಿರುವ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮಹಿಳೆಯೋರ್ವರ ಗಂಟಲುದ್ರವದ…

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ!

ರಾಜ್ಯದಲ್ಲಿ ಇಂದು ನೂತನವಾಗಿ 11 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಕಂಡಿದೆ. ಈ ಪೈಕಿ 22 ಜನ ಸಾವನ್ನಪ್ಪಿದ್ದಾರೆ.

ಸಚಿವ ಸುಧಾಕರ್ ಗನ್ ಮ್ಯಾನ್, ಡ್ರೈವರ್ ನಡುವೆ ಮಾರಾಮಾರಿ

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಮನೆ ಎದುರು ಚಾಲಕ ಸೋಮಶೇಖರ್ ಮೇಲೆ ಗನ್ ಮ್ಯಾನ್ ತಿಮ್ಮಯ್ಯ ಹಲ್ಲೆ ಮಾಡಿದ್ದಾರೆ.