ಬೆಂಗಳೂರು: ಈಗಾಗಲೇ ಶುದ್ಧ ಕುಡಿಯುವ ನೀರು ಒದಗಿಸುವ ಯಂತ್ರಗಳು ರಾಜ್ಯದಲ್ಲೆಲ್ಲಡೆ ಕಂಡು ಬರುತ್ತಿವೆ. ಆದರೆ ಇದೀಗ ನೀರಿನಂತೆ ಗಾಳಿಯನ್ನು ಶುದ್ಧೀಕರಣ ಗೊಳಿಸುವ ಯಂತ್ರದಿಂದ ಸಿಲಿಕಾನ ಸಿಟಿಯಲ್ಲಿ ಗಾಳಿ ಶುದ್ಧಿಕರಣ ಮಾಡುವ ಪ್ರಾಯೋಗಿಕ ಕಾರ್ಯ ಕೈಗೊಳ್ಳಲಾಗಿದೆ.

ಇದು ವಾತಾವರಣದಲ್ಲಿರುವ ಕಲುಷಿತ ಗಾಳಿಯನ್ನು ಹೀರಿಕೊಂಡು ನ್ಯಾನೋ ಕಣಗಳ ಮೂಲಕ ಹಾಯಿಸುತ್ತದೆ. ಪಿಎಂ 2.5, ಪಿಎಂ 10, ಕಾರ್ಬನ್‌ ಮಾನಾಕ್ಸೈಡ್‌, ಸೆಲ್ಫರ್‌ ಡೈ ಆಕ್ಸೈಡ್‌, ನೈಟ್ರೋಜಿನಸ್‌ ಆಕ್ಸೈಡ್‌, ಹೊಲೆಟೈಲ. ಆರ್ಗಾನಿಕ್‌ ಕಾಂಪೋಡ್ಸ್‌ ಮತ್ತು ಇತರೆ ಅಪಾಯಕಾರಿ ಅಂಶಗಳನ್ನು ಹೀರಿಕೊಳ್ಳುತ್ತದೆ. ನಂತರ ಉಸಿರಾಟಕ್ಕೆ ಯೋಗ್ಯವಾದ ಶುದ್ಧ ಗಾಳಿಯನ್ನು ಹೊರಬಿಡಲಿದೆ. ಸದರಿ ಯಂತ್ರ ಪ್ರತಿ ನಿಮಿಷಕ್ಕೆ 15 ಸಾವಿರ ಘನ ಅಡಿ ಪ್ರದೇಶದ ಗಾಳಿಯನ್ನು ಶುದ್ಧೀಕರಿಸಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಪಾಲಿಕೆ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಾಯು ಗುಣಮಟ್ಟ ಮಾನಿಟರಿಂಗ್‌ ವ್ಯಾನ್‌ ಮೂಲಕ ಹೊಗೆ ಗೋಪುರ ಯಂತ್ರ ಹೇಗೆ ಕಾರ್ಯನಿರ್ವಹಿಸಲಿದೆ ಎಂದು ಪರಿಶೀಲನೆ ನಡೆಲಾಗುವುದು. ಪ್ರಾಯೋಗಿಕವಾಗಿ ಅಳವಡಿಸಿರುವ ಯಂತ್ರ ಸರಿಯಾಗಿ ಕಾರ್ಯನಿರ್ವಹಿಸಲಿದೆ ಎಂಬುದು ಖಚಿತವಾದರೆ 15ನೇ ಹಣಕಾಸು ಆಯೋಗದಡಿ ನಗರದ ಪ್ರಮುಖ ಜಂಕ್ಷನ್‌ಗಳು ಹಾಗೂ ಹೆಚ್ಚು ಸಂಚಾರ ದಟ್ಟಣೆಯಾಗುವ ಪ್ರದೇಶದಲ್ಲಿ ವಾಯು ಶುದ್ಧೀಕರಣ ಯಂತ್ರಗಳನ್ನು ಅಳವಡಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಈ ಹೊಗೆ ಗೋಪುರ ಯಂತ್ರ 11 ಹಂತಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಸಣ್ಣ ಧೂಳಿನ ಕಣ, ಗಾಳಿಯಲ್ಲಿರುವ ವಿಷಯುಕ್ತ ಅನಿಲಗಳು ಸೇರಿದಂತೆ ಅಪಾಯಕಾರಿ ಅಂಶಗಳನ್ನು ಹೀರಿಕೊಂಡು ಶುದ್ಧೀಕರಿಸಿ ಗಾಳಿಯನ್ನು ಹೊರಬಿಡುತ್ತದೆ. ಸದರಿ ಯಂತ್ರವು 15 ಅಡಿ ಎತ್ತರ, 6 ಅಡಿ ಸುತ್ತಳೆತೆ ಹೊಂದಿದ್ದು, ಯಂತ್ರ ಕಾರ್ಯನಿರ್ವಹಿಸಲು 11 ಕಿಲೋವಾಟ್‌ ವಿದ್ಯುತ್‌ ಬೇಕಾಗಿದೆ.

ವಾಯು ಮಾಲಿನ್ಯದಿಂದ ಕಲುಷಿತಗೊಳ್ಳುವ ವಾತಾವರಣವನ್ನು ತಿಳಿಗೊಳಿಸುವ ಉದ್ದೇಶದಿಂದ ನಗರದ ಹಡ್ಸನ್‌ ವೃತ್ತದಲ್ಲಿ ಪ್ರಾಯೋಗಿಕವಾಗಿ ಕಲುಷಿತ ಹೊಗೆಯನ್ನು ಶುದ್ಧೀಕರಿಸಿ ಶುದ್ಧಗಾಳಿ ಹೊರ ಬಿಡುವ ಹೊಗೆ ಗೋಪುರ(ಸ್ಮೋಗ್‌ ಟವರ್‌) ಅಳವಡಿಸಲಾಗಿದೆ. ರಾಜ್ಯದ ನೂತನ್‌ ಲ್ಯಾಬ್ಸ್‌ ಸಂಸ್ಥೆಯು ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ) ಸಹಯೋಗದಲ್ಲಿ ತಯಾರಿಸಲ್ಪಟ್ಟಿರುವ ಈ ಹೊಗೆ ಗೋಪುರ ಯಂತ್ರವು ನ್ಯಾನೋ ತಂತ್ರಜ್ಞಾನದ ಮೂಲಕ ಕೆಲಸ ಮಾಡಲಿದೆ.

Leave a Reply

Your email address will not be published. Required fields are marked *

You May Also Like

ನಾಳೆ ನಡೆಯುವ ಜನಸಂಪರ್ಕ ಯಾತ್ರೆಗೆ ಬಿಎಸ್‌ವೈ, ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಅನೇಕ…

ಡಾ. ಶಾಂತಕುಮಾರ ಭಜಂತ್ರಿ ಅವರಿಗೆ ರಾಜ್ಯಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ

ಉತ್ತರಪ್ರಭ ಸುದ್ದಿಗದಗ: ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ 108ನೇ ಜಯಂತ್ಯೋತ್ಸವ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ…

ಕೋವಿಡ್ ಹಿನ್ನೆಲೆ ಕಾಲಕಾಲೇಶ್ವರ ಜಾತ್ರೆ ರದ್ದು

ಶ್ರೀ ಕಾಲಕಾಲೇಶ್ವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ರದ್ದುಮಾಡಲಾಗಿದೆ ಎಂದು ತಹಶೀಲ್ದಾರ ಎ.ಬಿ. ಕಲಘಟಗಿ ಹೇಳಿದರು.

ಕಾರ್ಮಿಕ ಇಲಾಖೆ: ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ : ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಯಟಿಯಲ್ಲಿ ಖಾಲಿ…