ಬೆಂಗಳೂರು: ಎರಡು ದಿನಗಳಿಂದ ಚಿನ್ನ ದರ ಇಳಿಕೆಯತ್ತ ಮುಖ ಮಾಡಿದೆ. ಹಾಗೆಯೇ ಎರಡು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ದರ ಕೂಡಾ ಇಂದು ಇಳಿಕೆ ಕಂಡಿದೆ.  

22 ಕ್ಯಾರೆಟ್ 10ಗ್ರಾಂ ಚಿನ್ನ ದರ 42,050 ರೂಪಾಯಿಂದ 41,900 ರೂಪಾಯಿಗೆ ಇಳಿದಿದೆ. ದೈನಂದಿನ ದರ ಬದಲಾವಣೆಯಲ್ಲಿ 150 ರೂಪಾಯಿಯಷ್ಟು ಇಳಿಕೆ ಕಂಡಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನ ಮಂಗಳವಾರ 45,880 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 45,700 ರೂಪಾಯಿಗೆ ಇಳಿದಿದೆ.

ದರ ಬದಲಾವಣೆಯಲ್ಲಿ 180 ರೂಪಾಯಿ ಇಳಿಕೆ ಕಂಡಿದೆ. ಹಾಗೆಯೇ ಬೆಳ್ಳಿ ದರದಲ್ಲೂ ಇಳಿಕೆ ಕಂಡಿದ್ದು ಬುಧವಾರ 1ಕೆಜಿ ಬೆಳ್ಳಿ ದರ 66,500 ರೂಪಾಯಿ ಇದೆ. 1,000 ರೂಪಾಯಿಯಷ್ಟು ಇಳಿಕೆ ಕಂಡಿದೆ.

Leave a Reply

Your email address will not be published. Required fields are marked *

You May Also Like

ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಒತ್ತಾಯ: ಲಂಬಾಣಿ ಸಮಾಜದ ಅಪ್ರಾಪ್ತ ಬಾಲಕಿ ಹತ್ಯೆಗೈದ ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುರಗಲವಾಡಿ ಗ್ರಾಮದಲ್ಲಿ ಗುಳೆಹೋದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಅತ್ಯಂತ ಖಂಡನಾರ್ಹ. ಲಂಬಾಣಿ ಸಮಾಜದವರು ಬಹಳಷ್ಟು ಸ್ವಾಭಿಮಾನಿಗಳು. ಆದರೆ ತುತ್ತಿನ ಚೀಲ ತುಂಬಿಕೊಳ್ಳಲು ಗುಳೆಹೋಗುವುದು ನಮಗೆ ಅನಿವಾರ್ಯವಾಗಿದೆ. ಆದರೆ ಗುಳೆಹೋದಂತಹ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ದುಷ್ಟರನ್ನು ಗಲ್ಲಿಗೇರಿಸಬೇಕು ಎಂದು ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಆಗ್ರಹಿಸಿದರು.

ಸರ್ಕಾರಿ ವಿವಿಗಳ ತಾತ್ಕಾಲಿಕ- ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತ ವಿಚಾರ ಸಂಕಿರಣ

ಕರ್ನಾಟಕದ ಸರ್ಕಾರೀ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾತ್ಕಾಲಿಕ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ರಾಜ್ಯಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಅನ್ನು 2020 ಆಗಸ್ಟ್ 19 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ (ಸಾಮಾಜಿಕ ಜಾಲತಾಣದ ಮೂಲಕ) ಆಯೋಜಿಸಲಾಗಿದೆ.

ರೋಣ ಎಪಿಎಮ್‌ಸಿ ಅಧ್ಯಕ್ಷರಾಗಿ ರಾಜಣ್ಣ,ಉಪಾಧ್ಯಕ್ಷರಾಗಿ ಶಿವಾನಂದ ಆಯ್ಕೆ

ಕೃಷಿ ಉತ್ಪನ್ನ ಮಾರುಕಟ್ಟೆ(ಕೇಂದ್ರ ಕಚೇರಿ ಹೊಳೆಆಲೂರ) ಸಮಿತಿಯ ಕೊನೆಯ ಅವಧಿಗೆ ನೂತನ ಅಧ್ಯಕ್ಷರಾಗಿ ರೋಣ ರೈತ ಕ್ಷೇತ್ರದ ಸದಸ್ಯ ಅಂದಾನಪ್ಪ ಉರ್ಫ ರಾಜಣ್ಣ ಹೂಲಿ,ಉಪಾಧ್ಯಕ್ಷರಾಗಿ ಹೊಳೆಆಲೂರ ಕ್ಷೇತ್ರದ ಸದಸ್ಯ ಶಿವಾನಂದ ಅರಹುಣಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.