ಗದಗ: ಕೋವಿಡ್ ಸೋಂಕಿನ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲಾಡಳಿತ ನೀಡಿದ ಕೊವಿಡ್-19 ರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಏ.1 ರಂದು ಹೋಳಿ ಹಬ್ಬವನ್ನು ಶಾಂತ ರೀತಿಯಲ್ಲಿ ಸರಳವಾಗಿ ಆಚರಿಸಲು ಡಿವೈಎಸ್‌ಪಿ ಎಸ್.ಕೆ.ಪ್ರಲ್ಹಾದ ತಿಳಿಸಿದ್ದಾರೆ.

ಹೊಳಿಹಬ್ಬದ ಪ್ರಯುಕ್ತ ಬೆಟಗೇರಿಯ ಎಂ.ವಿ.ಮೂಲಿಮನಿ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾರ್ಗಸೂಚಿಗಳು

1, ನಗರದಲ್ಲಿ ಕಾಮನ ಮೂರ್ತಿ ಕೂಡಿಸಲು ಕಾಮ ರತಿ ಮಂಡಳಿಗಳು ಹೆಸ್ಕಾಂ, ಪೊಲೀಸ್, ಅಗ್ನಿಶಾಮಕ, ನಗರಸಭೆಯವರಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು.

2, ಕಾಲಕಾಲಕ್ಕೆ ಸರ್ಕಾರ ನೀಡುವ ಸೂಚನೆಗಳನ್ನು ಪಾಲಿಸಬೇಕು. ಕಾಮ ರತಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ 10/10 ಅಳತೆಯ ಪೆಂಡಾಲನ್ನು ಮಾತ್ರ ಹಾಕಬೇಕು.

3, ಸ್ವಯಂ ಸೇವಕರು ಒಂದೇ ತರಹದ ಉಡುಪಿನಲ್ಲಿ ದಿನದ 24 ಗಂಟೆಯೂ ಇರಬೇಕು.

4, ಕಾಮ ರತಿ ವೀಕ್ಷಣೆಗೆ ಬರುವ ಸಾರ್ವಜನಿಕರಿಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಬೇಕು.

5, ಸಾರ್ವಜನಿಕರಿಗಾಗಿ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನರ್, ಮಾಸ್ಕ್, ಸ್ಯಾನಿಟೈಸರ್ ಉಪಯೋಗಿಸಬೇಕು.

6, ಪೆಂಡಾಲದಲ್ಲಿ ಸಿ.ಸಿ ಕ್ಯಾಮರಾ ಅಳವಡಿಸಬೇಕು ಮತ್ತು ಬೆಂಕಿ ನಂದಿಸುವ ಸಾಧನಗಳನ್ನು ಇರಿಸಿರಬೇಕು

7, ಸರ್ಕಾರದ ಆದೇಶದಂತೆ ಕಾಮನ ಮೂರ್ತಿಗಳನ್ನು ಸಾರ್ವಜನಿಕ ರಸ್ತೆ, ವೃತ್ತಗಳಲ್ಲಿ ಕೂರಿಸಬಾರದು.

8, ಮೆರವಣಿಗೆ ಮೂಲಕ ಸಾರ್ವಜನಿಕವಾಗಿ ಕೂಡಿಸುವುದಾಗಲಿ, ದಹನ ಮಾಡುವುದಾಗಲಿ, ಮನರಂಜನಾ ಕಾರ್ಯಕ್ರಮಗಳ ಆಯೋಜನೆ, ಧ್ವನಿವರ್ಧಕ, ಡಿಜೆ ಉಪಯೋಗ ಮಾಡಬಾರದು.

9, ಸಿಡಿಮದ್ದು, ಪಟಾಕಿಗಳನ್ನು ಅನವಶ್ಯಕವಾಗಿ ಹಚ್ಚಬಾರದು.

10, ಯಾವುದೇ ರಾಸಾಯನಿಕ ಬಣ್ಣಗಳನ್ನು ಬಳಸಬಾರದು.

11, ಕಾಮರತಿ ಮೂರ್ತಿಗಳ ಮೇಲೆ ಯಾವುದೇ ಬೆಲೆ ಬಾಳುವ ವಸ್ತುಗಳನ್ನು ಹಾಕಬಾರದು.

12, ಪೆಂಡಾಲದಲ್ಲಿ ಬೆಂಕಿ ಬಳಸಿ ಅಡುಗೆ ಮಾಡುವುದಾಗಲಿ, ಜೂಜಾಟ ಆಡುವಂತಿಲ್ಲ ಮತ್ತು ಸಾರ್ವಜನಿಕರಿಗೆ ಒತ್ತಾಯ ಪೂರ್ವಕವಾಗಿ ಹಣ ವಸೂಲಿ ಮಾಡಬಾರದು.

13, ಕೋಮುಸೌಹಾರ್ಧತೆಗೆ ಧಕ್ಕೆಯಾಗುವ ಹಾಡು, ಭಾಷೆ ಬಳಸಬಾರದು.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ತಾಪಂ ಸಾಮಾನ್ಯ ಸಭೆ: ಹನ್ನೊಂದ್ ತಿಂಗಳದಿಂದ ಪಗಾರ ಇಲ್ಲಂದ್ರ ಹೊಟ್ಟೆಗೇನ್ ಹಿಟ್ಟ್ ತಿನಬೇಕೇನ್ರಿ? ತಾಪಂ ಸದಸ್ಯರ ಆಕ್ರೋಶ!

ಶಿರಹಟ್ಟಿ: ಹನ್ನೊಂದು ತಿಂಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಒಂದು ರೂಪಾಯಿ ಸಂಬಳ…

ಹೆಚ್ಚು ಮದ್ಯ ಕುಡಿದಿದ್ದಾನೆ ಎಂಬ ಕಾರಣಕ್ಕೆ ಕೊಲೆ!

ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಇಲ್ಲಿಯ ಆರ್.ಟಿ. ನಗರದಲ್ಲಿ ನಡೆದಿದೆ.

ಬೋಧನೆಯಲ್ಲಿ ಆಧುನಿಕತೆ ತಂತ್ರಜ್ಞಾನ ಬಳಸಿಕೊಳ್ಳಿ: ಜಾಲಿಹಾಳ

ಶಿಕ್ಷಕರು ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಬುದ್ದಿಮಟ್ಟ ಮತ್ತು ಅವರ ಆಸಕ್ತಿಗಳನ್ನು ಅರಿತು ಭೋಧನೆ ಮಾಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಲು ಸಾಧ್ಯವಾಗುತ್ತದೆ ಎಂದು ಬಾಲಕೀಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಜಾಲಿಹಾಳ ಹೇಳಿದರು.

ಗದಗ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೇ ಜಯಂತಿಯ ಆಚರಣೆ

ಗದಗ:PPG SC/ST ವಸತಿ ನಿಲಯ ಗದಗದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ…