ಗದಗ: ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲಾ ಪಂಚಾಯತ ವ್ಯಾಪ್ತಿಯಡಿ ಬರುವ 57 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 57 ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ದಿ 1-1-2021 ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‌ಕಾರ್ಡ ಹೊಂದಿರಬೇಕು.

ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ (2018-19, 2019-20 ಮತ್ತು 2020-21) ಕನಿಷ್ಠ ಎರಡು ವರ್ಷ ಯೋಜನೆಯಡಿ ಅರಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಿರಬೇಕು. ವಯೋಮಿತಿ 45 ವರ್ಷ ಮೀರಿರಬಾರದು. ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನು ಹೊಂದಿರಬೇಕು.

ಗ್ರಾಮ ರೋಜ್‌ಗಾರ ಮಿತ್ರರರಿಗೆ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು. ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏ.10 ಆಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಸ್ತಿ ತೆರಿಗೆ ಪರಿಷ್ಕರಣೆ ಮಸೂದೆ ; ವಿಧಾನ ಪರಿಷತ್ ಒಪ್ಪಿಗೆ

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ತಿದ್ಧುಪಡಿ ಮಸೂದೆಗಳಿಗೆ ವಿಧಾನ ಪರಿಷತ್ ಸೋಮವಾರ ಒಪ್ಪಿಗೆ ನೀಡಿದೆ. ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ಮಸೂದೆ 2021 ಅನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಂಡಿಸಿದರು.

ಕೊರೊನಾ ಹಿನ್ನೆಲೆ : ಬೆಳಗಾವಿ ಜಿಲ್ಲೆಯಲ್ಲಿ ರೇಣುಕಾ ಯಲ್ಲಮ್ಮ ಸೇರಿ ಹಲವು ದೇವಸ್ಥಾನಗಳ ದರ್ಶನ ನಿಷೇಧ

ಕೋವಿಡ್-19 (ಕರೋನಾ)ರೂಪಾಂತರಿ ವೈರಾಣುವಿನ ಹರಡುವಿಕೆಯು ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಇನ್ನಿತರೆ ರಾಜ್ಯಗಳಲ್ಲಿ ತೀವ್ರತರವಾಗಿ ಹರಡುತ್ತಿರುವುದರಿಂದೆ.

ರಾಜ್ಯಾದ್ಯಂತ ಎರಡುದಿನ ಭಾರಿ ಮಳೆ : ಗದಗ ಸೆರಿ ಇನ್ನು ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..!

ಉತ್ತರಪ್ರಭ ಸುದ್ದಿ ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ರಾಜ್ಯದಲ್ಲಿ…

ಶಾಲಾ ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ಆರೋಪ: ಕ್ರಮಕ್ಕೆ ಜೆಡಿಎಸ್ ವಿದ್ಯಾರ್ಥಿ ಘಟಕ ಒತ್ತಾಯ

ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಕಳಪೆ ಮಟ್ಟದ್ದಾಗಿದ್ದು, ಅದನ್ನು ತಡೆಗಟ್ಟಬೇಕೆಂದು ಜಾತ್ಯಾತೀತ ಜನತಾದಳ ವಿದ್ಯಾರ್ಥಿ ಘಟಕದಿಂದ ಉಪ‌ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.