ಶಿರಹಟ್ಟಿ: ಸ್ಥಳೀಯ ಜ್ಞಾನ ಜ್ಯೋತಿ ಕೊಚಿಂಗ್ ಸೆಂಟರ್ ವಿದ್ಯಾರ್ಥಿ ಮಂಜುನಾಥ ಚಡಚಣ್ಣವರ ಮೊರಾರ್ಜಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 2ನೇ ಪಡೆದುಕೊಂಡಿದ್ದಾರೆ.

7 ವರ್ಷಗಳಿಂದ ಜಿಲ್ಲೆಯ ಹೆಚ್ಚು ವಿದ್ಯಾರ್ಥಿಗಳು ತೆರ್ಗಡೆಗೊಳಿಸುತ್ತಿರುವ ಸಂಸ್ಥೆಯ ವಿದ್ಯಾರ್ಥಿಯಾದ ಮಂಜುನಾಥ ಕಳೆದ ಫೆ.24ರಂದು ಪರೀಕ್ಷೆ ಬರೆದಿದ್ದು, ಈಗ ರ‍್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾನೆ. ವ್ಯಾಸಾಂಗ ಮಾಡುತ್ತಿರುವ ಸಿಸಿಎನ್ ಶಾಲೆಯ ಶಿಕ್ಷಕರು, ಕೊಚಿಂಗ್ ಸಂಸ್ಥೆಯ ಹಿರಿಯ ಮಾರ್ಗದರ್ಶಕ ಪ್ರಕಾಶ ನರಗುಂದೆ ಹಾಗೂ ಪ್ರಧಾನ ಸಂಯೋಜಕ ಸಂಗಮೇಶ ಮಡಿವಾಳರ ಹಾಗೂ ಪೋಷಕರು ವಿದ್ಯಾರ್ಥಿಯನ್ನು ಅಭಿನಂಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಭಾರತ: 7 ಲಕ್ಷ ದಾಟಿದ ಪಾಸಿಟಿವ್

ನವದೆಹಲಿ: ಭಾನುವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದ ನಡುವಿನ 24 ಗಂಟೆಗಳಲ್ಲಿ 24,448 ಕೇಸುಗಳು ದಾಳಲಾಗುವ ಮೂಲಕ…

ರಕ್ತದಾನ ಮಾಡಿ ಜೀವ ಉಳಿಸಿ

ಆರೋಗ್ಯವಂತ ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ಐಎಂಎ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಆರ್.ಟಿ. ಪವಾಡಶೆಟ್ಟರ್ ಹೇಳಿದರು.

ಕೋವಿಶೀಲ್ಡ್ ಎರಡನೇ ಡೋಸ್ ಪಡೆದ ಡಿಸಿ

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾನುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಎರಡನೇ ಡೋಸ್ ಪಡೆದಿದ್ದಾರೆ. 28 ದಿನಗಳ ಹಿಂದೆ ಮೊದಲ ಡೋಸ್ ಪಡೆದಿದ್ದ ಅವರು, ಇದೀಗ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.

ಚೀನಾ ವಿಚಾರ ರಾಹುಲ್ ಹೇಳಿಕೆ ಹಾಸ್ಯಾಸ್ಪದ : ಪ್ರಹ್ಲಾದ್ ಜೋಷಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚೀನಾ ವಿಚಾರದಲ್ಲಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. ಹದಿನೈದು ನಿಮಿಷದಲ್ಲಿ ಚೀನಾದ ಸೈನಿಕರನ್ನು ಹೊರಹಾಕುವ ಹೇಳಿಕೆ ನೀಡುತ್ತಾರೆ ಇದು ಹಾಸ್ಯಾಸ್ಪದ ಹೇಳಿಕೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದರು.