ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

 ಈ ವೇಳೆ ಮಾತನಾಡಿದ ಡಿಎಸ್‌ಎಸ್ ಸಂಚಾಲಕ ಆನಂದ ಎಚ್. ನಡವಲಕೆರಿ, 2012ರಲ್ಲಿ ನಿರ್ಮಿಸಲಾದ 150 ಮನೆಗಳನ್ನು ಇಂದಿಗೂ ಹಂಚಿಕೆ ಮಾಡಿರುವುದಿಲ್ಲ. 2013ರಲ್ಲಿ ಆಯ್ಕೆಯಾದ ಕೆಲವು ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಗಿದೆ. ನಂತರ 403 ಮನೆಗಳನ್ನು ನಿರ್ಮಿಸುವ ಉದ್ದೇಶದೊಂದಿಗೆ 150 ಫಲಾನುಭವಿಗಳಿಂದ 30 ಸಾವಿರ ರೂಪಾಯಿ ವಂತಿಕೆಯನ್ನು ಸಹ ತುಂಬಿಸಿಕೊಳ್ಳಲಾಗಿದೆ. ಆದರೆ ಈಗ ಈ ಹಿಂದೆ ಆಯ್ಕೆಯಾದ ಫಲಾನುಭವಿಗಳನ್ನು ಬಿಟ್ಟು ಬೇರೆ ವ್ಯಕ್ತಿಗಳಿಗೆ ಮನೆ ಹಂಚಿಕೆಗೆ ಮುಂದಾಗಿರುವುದನ್ನು ಡಿಎಸ್‌ಎಸ್ ಖಂಡಿಸುತ್ತದೆ ಎಂದರು.

 ಈ ಮೊದಲು ತಯಾರಾದ ಪಟ್ಟಿಯಂತೆ ಮನೆಗಳನ್ನು ಹಂಚಿಕೆ ಮಾಡಬೇಕು. ಹೊಸದಾಗಿ ಮನೆ ಇದ್ದವರಿಗೆ ಹಾಗೂ ಪ್ರಭಾವಿಗಳಿಗೆ ಮನೆ ಹಂಚಿಕೆಗೆ ಮುಂದಾದರೆ ಕಚೇರಿಗೆ ಮುತ್ತಿಗೆ ಹಾಕಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಅಪ್ಪಣ್ಣ ಗೊರಕಿ, ರಾಜು ಹಳ್ಳದಮನಿ, ಶರಣ ಗೊರಕಿ, ಬಸವರಾಜ ನಡವಲಕೆರಿ, ಸುಭಾಸ ನಡವಲಕೆರಿ, ಪರಶುರಾಮ ನಡವಲಕೆರಿ, ಭೀಮಪ್ಪ ಹಲಗಿ, ಫಕ್ಕೀರಪ್ಪ ಪಾದಗಟ್ಟಿ ಇದ್ದರು.

Leave a Reply

Your email address will not be published. Required fields are marked *

You May Also Like

ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿಯೂ ಶುರುವಾಯಿತು ಆಪರೇಷನ್ ಕಮಲ!

ಚಿಕ್ಕೋಡಿ : ಸ್ಥಳೀಯ ಸಂಸ್ಥೆ ಚುನಾವಣೆಯಿಂದಲೂ ಬಿಜೆಪಿಯಿಂದ ಆಪರೇಷನ್ ಕಮಲ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಸಿಡಿ ಪ್ರಕರಣ : ನಾಲ್ವರು ಎಸ್ಐಟಿ ವಶಕ್ಕೆ

ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸಿಡಿ ಪ್ರಕರಣದಲ್ಲಿ ಯುವತಿ ಸೇರಿ ನಾಲ್ವರ ವಶಕ್ಕೆ ಪಡೆಯಲಾಗಿದೆ.

ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.

ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…

ಹೆಸರು, ಶೇಂಗಾ, ಹತ್ತಿ, ಗೋವಿನ ಜೋಳ ಬಿತ್ತನೆಗೆ ರೈತ ಅಣಿ ಉತ್ತಮ ಮಳೆ, ಮುಂಗಾರು ಹಂಗಾಮಿನ ಬಿತ್ತನೆಗೆ ಸಿದ್ಧತೆ ಚುರುಕು ಚಂದ್ರು ಬಿ

ಮುಳಗುಂದ: ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಉತ್ತಮ ಮಳೆಯಾಗಿದ್ದು, ಕೋವಿಡ್ ಲಾಕ್ ಡೌನ್ ಮಧ್ಯೆ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಮುಂಗಾರು ಹಂಗಾಮಿನ ಪ್ರಮುಖವಾಗಿ ಹೆಸರು, ಶೇಂಗಾ, ಹತ್ತಿ, ಗೋವಿನ ಜೋಳ ಬಿತ್ತನೆಗೆ ರೈತರು ಭೂಮಿ ಹದಗೊಳಿಸುವ ಕಾಯಕದಲ್ಲಿ ನಿರತರಾಗಿದ್ದಾರೆ.