ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

 ಈ ವೇಳೆ ಮಾತನಾಡಿದ ಡಿಎಸ್‌ಎಸ್ ಸಂಚಾಲಕ ಆನಂದ ಎಚ್. ನಡವಲಕೆರಿ, 2012ರಲ್ಲಿ ನಿರ್ಮಿಸಲಾದ 150 ಮನೆಗಳನ್ನು ಇಂದಿಗೂ ಹಂಚಿಕೆ ಮಾಡಿರುವುದಿಲ್ಲ. 2013ರಲ್ಲಿ ಆಯ್ಕೆಯಾದ ಕೆಲವು ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಗಿದೆ. ನಂತರ 403 ಮನೆಗಳನ್ನು ನಿರ್ಮಿಸುವ ಉದ್ದೇಶದೊಂದಿಗೆ 150 ಫಲಾನುಭವಿಗಳಿಂದ 30 ಸಾವಿರ ರೂಪಾಯಿ ವಂತಿಕೆಯನ್ನು ಸಹ ತುಂಬಿಸಿಕೊಳ್ಳಲಾಗಿದೆ. ಆದರೆ ಈಗ ಈ ಹಿಂದೆ ಆಯ್ಕೆಯಾದ ಫಲಾನುಭವಿಗಳನ್ನು ಬಿಟ್ಟು ಬೇರೆ ವ್ಯಕ್ತಿಗಳಿಗೆ ಮನೆ ಹಂಚಿಕೆಗೆ ಮುಂದಾಗಿರುವುದನ್ನು ಡಿಎಸ್‌ಎಸ್ ಖಂಡಿಸುತ್ತದೆ ಎಂದರು.

 ಈ ಮೊದಲು ತಯಾರಾದ ಪಟ್ಟಿಯಂತೆ ಮನೆಗಳನ್ನು ಹಂಚಿಕೆ ಮಾಡಬೇಕು. ಹೊಸದಾಗಿ ಮನೆ ಇದ್ದವರಿಗೆ ಹಾಗೂ ಪ್ರಭಾವಿಗಳಿಗೆ ಮನೆ ಹಂಚಿಕೆಗೆ ಮುಂದಾದರೆ ಕಚೇರಿಗೆ ಮುತ್ತಿಗೆ ಹಾಕಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಅಪ್ಪಣ್ಣ ಗೊರಕಿ, ರಾಜು ಹಳ್ಳದಮನಿ, ಶರಣ ಗೊರಕಿ, ಬಸವರಾಜ ನಡವಲಕೆರಿ, ಸುಭಾಸ ನಡವಲಕೆರಿ, ಪರಶುರಾಮ ನಡವಲಕೆರಿ, ಭೀಮಪ್ಪ ಹಲಗಿ, ಫಕ್ಕೀರಪ್ಪ ಪಾದಗಟ್ಟಿ ಇದ್ದರು.

Leave a Reply

Your email address will not be published. Required fields are marked *

You May Also Like

ಆಮ್ಲಜನಕ ಪೂರೈಸುವಲ್ಲಿ ಸರ್ಕಾರ ಸಮರ್ಥವಿದೆ : ಸಚಿವ ಸುಧಾಕರ್

ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಭಾಷಣ ನಿಲ್ಲಿಸಿ, ಕೆಲಸ ಮಾಡಿ: ಸಿದ್ದರಾಮಯ್ಯ

ಬೆಂಗಳೂರು: ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ @PMOIndia ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ…

ಕೆಎಎಸ್ ಅಧಿಕಾರಿ ಸುಧಾ ಅವರ ಮನೆಯಲ್ಲಿ ಸಿಕ್ಕ ಚಿನ್ನಾಭರಣ ಎಷ್ಟು ಗೊತ್ತಾ?

ಬೆಂಗಳೂರು : ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ್ದು, ಬರೋಬ್ಬರಿ 3.7 ಕೆಜಿ ಚಿನ್ನ ಹಾಗೂ 10.5 ಕೆಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಲಕ್ಷ್ಮೇಶ್ವರ: ಅಪರಾಧ ತಡೆ ಮಾಸಾಚರಣೆ

ತಾಲೂಕಿನ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಯ ಹರದಗಟ್ಟಿ ಗ್ರಾಮದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.