ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

 ಈ ವೇಳೆ ಮಾತನಾಡಿದ ಡಿಎಸ್‌ಎಸ್ ಸಂಚಾಲಕ ಆನಂದ ಎಚ್. ನಡವಲಕೆರಿ, 2012ರಲ್ಲಿ ನಿರ್ಮಿಸಲಾದ 150 ಮನೆಗಳನ್ನು ಇಂದಿಗೂ ಹಂಚಿಕೆ ಮಾಡಿರುವುದಿಲ್ಲ. 2013ರಲ್ಲಿ ಆಯ್ಕೆಯಾದ ಕೆಲವು ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಗಿದೆ. ನಂತರ 403 ಮನೆಗಳನ್ನು ನಿರ್ಮಿಸುವ ಉದ್ದೇಶದೊಂದಿಗೆ 150 ಫಲಾನುಭವಿಗಳಿಂದ 30 ಸಾವಿರ ರೂಪಾಯಿ ವಂತಿಕೆಯನ್ನು ಸಹ ತುಂಬಿಸಿಕೊಳ್ಳಲಾಗಿದೆ. ಆದರೆ ಈಗ ಈ ಹಿಂದೆ ಆಯ್ಕೆಯಾದ ಫಲಾನುಭವಿಗಳನ್ನು ಬಿಟ್ಟು ಬೇರೆ ವ್ಯಕ್ತಿಗಳಿಗೆ ಮನೆ ಹಂಚಿಕೆಗೆ ಮುಂದಾಗಿರುವುದನ್ನು ಡಿಎಸ್‌ಎಸ್ ಖಂಡಿಸುತ್ತದೆ ಎಂದರು.

 ಈ ಮೊದಲು ತಯಾರಾದ ಪಟ್ಟಿಯಂತೆ ಮನೆಗಳನ್ನು ಹಂಚಿಕೆ ಮಾಡಬೇಕು. ಹೊಸದಾಗಿ ಮನೆ ಇದ್ದವರಿಗೆ ಹಾಗೂ ಪ್ರಭಾವಿಗಳಿಗೆ ಮನೆ ಹಂಚಿಕೆಗೆ ಮುಂದಾದರೆ ಕಚೇರಿಗೆ ಮುತ್ತಿಗೆ ಹಾಕಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಅಪ್ಪಣ್ಣ ಗೊರಕಿ, ರಾಜು ಹಳ್ಳದಮನಿ, ಶರಣ ಗೊರಕಿ, ಬಸವರಾಜ ನಡವಲಕೆರಿ, ಸುಭಾಸ ನಡವಲಕೆರಿ, ಪರಶುರಾಮ ನಡವಲಕೆರಿ, ಭೀಮಪ್ಪ ಹಲಗಿ, ಫಕ್ಕೀರಪ್ಪ ಪಾದಗಟ್ಟಿ ಇದ್ದರು.

Leave a Reply

Your email address will not be published. Required fields are marked *

You May Also Like

ಕೊರೊನಾ ಭಯದ ಜೊತೆಗೆ ಶುರುವಾಯ್ತು ಡೆಂಗ್ಯೂ ಭಯ.!

ಬೆಂಗಳೂರು : ಸದ್ಯ ಕೊರೊನಾ ವಿರುದ್ಧ ಇಡೀ ಜಗತ್ತೇ ಹೋರಾಡುತ್ತಿದೆ. ಇದರ ಮಧ್ಯೆಯೇ ಡೆಂಗ್ಯೂ ಜನರ…

ಶ್ರೀಮತಿ ಹನುಮಮ್ಮ ಮಂಜುನಾಥ್ ಮತ್ತು ಮಾರುತಿ ಕರಡೋಣ ಕರ್ನಾಟಕ ರತ್ನ 2021 ಪ್ರಶಸ್ತಿ ಪ್ರಧಾನ

ಉತ್ತರಪ್ರಭ ಸುದ್ದಿ ಕನಕಗಿರಿ: ಕನಕಗಿರಿ ತಾಲೂಕಿನ ನವಲಿ ತಾಂಡಾ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹನುಮಮ್ಮ ಮಂಜುನಾಥ್…

ಆರ್ ಆರ್ ನಗರ, ಶಿರಾದಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ!

ಬೆಂಗಳೂರು : ರಾಜ್ಯದಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಫಲಿತಾಂಶ ಇಂದು ಹೊರ ಬರುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿವೆ.

ಕೋವಿಡ್-19 ಗದಗ ಜಿಲ್ಲೆ : ಪ್ರತಿಬಂಧಿತ ಪ್ರದೇಶಗಳ ಘೋಷಣೆ

ಗದಗ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕು ಸಕಾರಾತ್ಮಕ ಕಂಡುಬ0ದ ಪ್ರದೇಶಗಳನ್ನು ಪ್ರತಿಬಂಧಿತÀ ಪ್ರದೇಶಗಳನ್ನಾಗಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಘೋಷಿಸಿದ್ದಾರೆ.