ಶಿರಹಟ್ಟಿ: ಸ್ಥಳೀಯ ಪಪಂ ವ್ಯಾಪ್ತಿಯಲ್ಲಿ ಕೇವಲ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಪಂಚಾಯ್ತಿಯ ಜನಸಂಖ್ಯೆಗನುಗುಣವಾಗಿ 4-5 ಶುದ್ದ ಕುಡಿಯುವ ನೀರಿನ ಘಟಕಗಳು ಅವಶ್ಯಕತೆ ಇದೆ. ಅವುಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರವೇ ವತಿಯಿಂದ ಶುಕ್ರವಾರ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷ ರಫೀಕ ಕೆರಿಮನಿ, ಪ್ರಸ್ತುತ ಬೇಸಿಗೆಕಾಲ ಇರುವುದರಿಂದ ಸಾರ್ವಜನಿಕರಿಗೆ ನೀರಿನ ಸಮಸ್ಯೆ ತಂಬಾ ಆಗುತ್ತಿದೆ. ಇರುವ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗದ ನಿರ್ವಹಣೆ ಇಲ್ಲದೆ ಸಮರ್ಪಕ ನೀರು ಸಾರ್ವಜನಿಕರಿಗೆ ದೊರೆಯದಂತಾಗಿದೆ. ಸ್ಥಳೀಯ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಮುಂದಾಗಿದ್ದು, ಅದಕ್ಕನುಗುಣವಾಗಿ ಸೂಕ್ತ ಸ್ಥಳ ಹಾಗೂ ನಿರ್ವಹಣೆಯ ಕುರಿತು ಅವರನ್ನು ಸಂಪರ್ಕಿಸಿ ಘಟಕ ಸ್ಥಾಪಿಸಿದರೆ ಸಾರ್ವಜನಿಕರಿಗೆ ಕೊಂಚ ನೀರಿನ ಬವಣೆ ನೀಗುತ್ತದೆ.

ಅಲ್ಲದೆ ಪಂಚಾಯ್ತಿ ವತಿಯಿಂದ ಇನ್ನು ಕೆಲವು ನೀರಿನ ಘಟಕ ಸ್ಥಾಪನೆಯಾಗಬೇಕಿದೆ. ನೀರಿನ ಸಮಸ್ಯೆಗೆ ಬೇಗ ಪರಿಹಾರ ಕಂಡುಕೊಳ್ಳದೇ ಹೋದರೆ ಉಗ್ರವಾದ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕರವೇ ಜಿಲ್ಲಾಧ್ಯಕ್ಷ ದಾವಲಸಾಬ ಮುಳಗುಂದ ಮಾತನಾಡಿದರು. ವೆಂಕಟೇಶ್ವರ ಬೇಲೂರು, ಸಹದೇವ್ ಕೋಟಿ, ಇಲಿಯಾಸ್ ಮೀರಾ ನವರ್, ಮನ್ಸೂರು ಮಕಾಂದಾರ್, ಈರಣ್ಣ ಬಾಗೇವಾಡಿ, ಖಾದರ್ ಟಪಾಲ್, ಸಾಯಿರಾಬಾನು ಒಂಟಿ, ಯೋಗಿತಾ ದೇಸಾಯಿಪಟ್ಟಿ, ಶೋಭಾ ಬಳೆಗಾರ, ರೇಖಾ ಮಧುಕರ್, ಶಾಂಭವಿ ಹಿರೇಮಠ್, ವಿಜಯಕ್ಕ ತಳವಾರ್ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಮಾರುಕಟ್ಟೆಯಲ್ಲಿಲ್ಲ ಮೆಣಸಿನಕಾಯಿ ಘಾಟು..! ರೈತರಿಗೆ ತಪ್ಪದ ಪರಿಪಾಟಲು..!

ಕೊರೋನಾ ಕಾಟದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರ ಸಂಕಷ್ಟದ ಬದುಕಿನ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ನಿಮ್ಮ ಉತ್ತರ ಪ್ರಭ ಮಾಡಿದೆ

ನಾಳೆಯಿಂದ ನೀಲಗುಂದ ಗ್ರಾಮದಲ್ಲಿ ಮಹಾಶಿವರಾತ್ರಿ ಉತ್ಸವ

ಐತಿಹಾಸಿಕ, ಆಧ್ಯಾತ್ಮ ನೆಲೆಬೀಡು ನೀಲಗುಂದ ಗ್ರಾಮದ ಗುದ್ನೇಶ್ವರಮಠದ ದಿವ್ಯ ಚೇತನ ಟ್ರಸ್ಟ್ನಿಂದ ಮಾ.9 ರಿಂದ 11 ವರಗೆ ಮಹಾಶಿವರಾತ್ರಿ ಉತ್ಸವ ಹಮ್ಮಿಕೊಂಡಿದ್ದು, ಮೂರು ದಿನಗಳ ಕಾಲ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು ಹೇಳಿದರು.

ಸೌರ ಚಾಲಿತ ಕೃಷಿ ಪಂಪ್ ಸೆಟ್ ಗೆ ಆನ್ಲೈನ್ ಅಜಿ೯ – ಸವಿತಾ ಮೇಟಿ

ಆಲಮಟ್ಟಿ : ಕೇಂದ್ರ ಸರ್ಕಾರದ ಪಿಎಂ ಕುಸುಮ ಕಂಪೋನೆಟ್ ಬಿ ಯೋಜನೆ ಯಡಿ ಮೊದಲನೆ ಹಂತದಲ್ಲಿ…

ಜಗತ್ತಿನಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ನಿನ್ನೆ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?

ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಕಳೆದ 24 ಭಾರತ ದೇಶದಲ್ಲಿ ಸೋಂಕಿತರು ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. ಕೊರೊನಾ ವಾರಿಯರ್ಸ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಇದರಿಂದ ತಿಳಿದು ಬರುತ್ತಿದೆ. ಸದ್ಯ ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ಇದುವರೆಗೂ 8,22,71,657 ಜನ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದಾರೆ.ಗಂಟೆಗಳಲ್ಲಿ 72,049 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.