ಶಿರಹಟ್ಟಿ: ಸ್ಥಳೀಯ ಪಪಂ ವ್ಯಾಪ್ತಿಯಲ್ಲಿ ಕೇವಲ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಪಂಚಾಯ್ತಿಯ ಜನಸಂಖ್ಯೆಗನುಗುಣವಾಗಿ 4-5 ಶುದ್ದ ಕುಡಿಯುವ ನೀರಿನ ಘಟಕಗಳು ಅವಶ್ಯಕತೆ ಇದೆ. ಅವುಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರವೇ ವತಿಯಿಂದ ಶುಕ್ರವಾರ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷ ರಫೀಕ ಕೆರಿಮನಿ, ಪ್ರಸ್ತುತ ಬೇಸಿಗೆಕಾಲ ಇರುವುದರಿಂದ ಸಾರ್ವಜನಿಕರಿಗೆ ನೀರಿನ ಸಮಸ್ಯೆ ತಂಬಾ ಆಗುತ್ತಿದೆ. ಇರುವ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗದ ನಿರ್ವಹಣೆ ಇಲ್ಲದೆ ಸಮರ್ಪಕ ನೀರು ಸಾರ್ವಜನಿಕರಿಗೆ ದೊರೆಯದಂತಾಗಿದೆ. ಸ್ಥಳೀಯ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಮುಂದಾಗಿದ್ದು, ಅದಕ್ಕನುಗುಣವಾಗಿ ಸೂಕ್ತ ಸ್ಥಳ ಹಾಗೂ ನಿರ್ವಹಣೆಯ ಕುರಿತು ಅವರನ್ನು ಸಂಪರ್ಕಿಸಿ ಘಟಕ ಸ್ಥಾಪಿಸಿದರೆ ಸಾರ್ವಜನಿಕರಿಗೆ ಕೊಂಚ ನೀರಿನ ಬವಣೆ ನೀಗುತ್ತದೆ.

ಅಲ್ಲದೆ ಪಂಚಾಯ್ತಿ ವತಿಯಿಂದ ಇನ್ನು ಕೆಲವು ನೀರಿನ ಘಟಕ ಸ್ಥಾಪನೆಯಾಗಬೇಕಿದೆ. ನೀರಿನ ಸಮಸ್ಯೆಗೆ ಬೇಗ ಪರಿಹಾರ ಕಂಡುಕೊಳ್ಳದೇ ಹೋದರೆ ಉಗ್ರವಾದ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕರವೇ ಜಿಲ್ಲಾಧ್ಯಕ್ಷ ದಾವಲಸಾಬ ಮುಳಗುಂದ ಮಾತನಾಡಿದರು. ವೆಂಕಟೇಶ್ವರ ಬೇಲೂರು, ಸಹದೇವ್ ಕೋಟಿ, ಇಲಿಯಾಸ್ ಮೀರಾ ನವರ್, ಮನ್ಸೂರು ಮಕಾಂದಾರ್, ಈರಣ್ಣ ಬಾಗೇವಾಡಿ, ಖಾದರ್ ಟಪಾಲ್, ಸಾಯಿರಾಬಾನು ಒಂಟಿ, ಯೋಗಿತಾ ದೇಸಾಯಿಪಟ್ಟಿ, ಶೋಭಾ ಬಳೆಗಾರ, ರೇಖಾ ಮಧುಕರ್, ಶಾಂಭವಿ ಹಿರೇಮಠ್, ವಿಜಯಕ್ಕ ತಳವಾರ್ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಸಿಡಿಲು ಬಡಿದು ಇಬ್ಬರು ಸಾವು

ಉತ್ತರಪ್ರಭಶಿರಹಟ್ಟಿ: ಪಟ್ಟಣದ ಹೊರವಲಯದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ…

ಲವ್ ಜಿಹಾದ್ ಪ್ರಕರಣ ಕ್ರಮಕ್ಕೆ ಒತ್ತಾಯಿಸಿ ಲಕ್ಷ್ಮೇಶ್ವರದಲ್ಲಿ ಮನವಿ

ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ.

ನಿಡಗುಂದಿ: ಚರಕ ಕ್ಲಿನಿಕ್ ಉದ್ಘಾಟನಾ ಸಮಾರಂಭ ವೈದ್ಯ ವೃತ್ತಿ ವ್ಯಾಪಾರೀಕರಣದತ್ತ ಶಾಸಕ ಶಿವಾನಂದ ಪಾಟೀಲ ವಿಷಾಧ

ವರದಿ : ಗುಲಾಬಚಂದ ಜಾಧವನಿಡಗುಂದಿ : ವೈದ್ಯ ವೃತ್ತಿ ಅತ್ಯಂತ ಪವಿತ್ರ. ಎಲ್ಲ ವೃತ್ತಿಗಳಲ್ಲೇ ಶ್ರೇಷ್ಠ.…

ಶಿಕ್ಷಕರ ಅಗತ್ಯ ಸೇವೆ ಈಗ ಆನಲೈನ್ ವ್ಯಾಪ್ತಿಯಲ್ಲಿ: ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ ಲೇಪಿಸಿದ ಶಿಕ್ಷಣ ಸಚಿವರು,ಅಧಿಕಾರಿಗಳು

ಉತ್ತರಪ್ರಭ ಸುದ್ದಿಆಲಮಟ್ಟಿ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಶಿಕ್ಷಕರ ಅಗತ್ಯ 17 ಸೇವೆಗಳನ್ನು ಆನ್…