ಶಿರಹಟ್ಟಿ: ಸ್ಥಳೀಯ ಪಪಂ ವ್ಯಾಪ್ತಿಯಲ್ಲಿ ಕೇವಲ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಪಂಚಾಯ್ತಿಯ ಜನಸಂಖ್ಯೆಗನುಗುಣವಾಗಿ 4-5 ಶುದ್ದ ಕುಡಿಯುವ ನೀರಿನ ಘಟಕಗಳು ಅವಶ್ಯಕತೆ ಇದೆ. ಅವುಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರವೇ ವತಿಯಿಂದ ಶುಕ್ರವಾರ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷ ರಫೀಕ ಕೆರಿಮನಿ, ಪ್ರಸ್ತುತ ಬೇಸಿಗೆಕಾಲ ಇರುವುದರಿಂದ ಸಾರ್ವಜನಿಕರಿಗೆ ನೀರಿನ ಸಮಸ್ಯೆ ತಂಬಾ ಆಗುತ್ತಿದೆ. ಇರುವ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗದ ನಿರ್ವಹಣೆ ಇಲ್ಲದೆ ಸಮರ್ಪಕ ನೀರು ಸಾರ್ವಜನಿಕರಿಗೆ ದೊರೆಯದಂತಾಗಿದೆ. ಸ್ಥಳೀಯ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಮುಂದಾಗಿದ್ದು, ಅದಕ್ಕನುಗುಣವಾಗಿ ಸೂಕ್ತ ಸ್ಥಳ ಹಾಗೂ ನಿರ್ವಹಣೆಯ ಕುರಿತು ಅವರನ್ನು ಸಂಪರ್ಕಿಸಿ ಘಟಕ ಸ್ಥಾಪಿಸಿದರೆ ಸಾರ್ವಜನಿಕರಿಗೆ ಕೊಂಚ ನೀರಿನ ಬವಣೆ ನೀಗುತ್ತದೆ.

ಅಲ್ಲದೆ ಪಂಚಾಯ್ತಿ ವತಿಯಿಂದ ಇನ್ನು ಕೆಲವು ನೀರಿನ ಘಟಕ ಸ್ಥಾಪನೆಯಾಗಬೇಕಿದೆ. ನೀರಿನ ಸಮಸ್ಯೆಗೆ ಬೇಗ ಪರಿಹಾರ ಕಂಡುಕೊಳ್ಳದೇ ಹೋದರೆ ಉಗ್ರವಾದ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕರವೇ ಜಿಲ್ಲಾಧ್ಯಕ್ಷ ದಾವಲಸಾಬ ಮುಳಗುಂದ ಮಾತನಾಡಿದರು. ವೆಂಕಟೇಶ್ವರ ಬೇಲೂರು, ಸಹದೇವ್ ಕೋಟಿ, ಇಲಿಯಾಸ್ ಮೀರಾ ನವರ್, ಮನ್ಸೂರು ಮಕಾಂದಾರ್, ಈರಣ್ಣ ಬಾಗೇವಾಡಿ, ಖಾದರ್ ಟಪಾಲ್, ಸಾಯಿರಾಬಾನು ಒಂಟಿ, ಯೋಗಿತಾ ದೇಸಾಯಿಪಟ್ಟಿ, ಶೋಭಾ ಬಳೆಗಾರ, ರೇಖಾ ಮಧುಕರ್, ಶಾಂಭವಿ ಹಿರೇಮಠ್, ವಿಜಯಕ್ಕ ತಳವಾರ್ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಶುಂಠಿ ವ್ಯಾಪಾರಿಯಿಂದ ಮುಂಡರಗಿ ಪೊಲೀಸ್ ಸ್ಟೇಶನ್ ಗೆ ಸೋಂಕಿನ ಸಂಕಟ..!

ಮುಂಡರಗಿ: ಕೊಡಗು ಜಿಲ್ಲೆಯ ಶುಂಠಿ ವ್ಯಾಪಾರಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆದ್ರೆ ಆತನ ಟ್ರಾವೆಲ್ ಹಿಸ್ಟರಿ…

ಅರಣ್ಯಗಳ ಅಂಚಿನಲ್ಲಿ 650 ಕಿ.ಮೀ ರೈಲ್ವೆ ಬ್ಯಾರಿಕೇಡ್ ಹಾಕುವ ಗುರಿ : ಅರಣ್ಯ ಸಚಿವ ಆನಂದ್ ಸಿಂಗ್

ಕಾಡಂಚಿನ ಗ್ರಾಮಗಳಲ್ಲಿ ಪದೆ ಪದೇ ಜಾನುವಾರಗಳ ಮೇಲೆ ಹುಲಿ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಇಂದು ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು.

Install Glory Casino app Bonus up to 10000 Rupees Play Live Casino Games Blossoms Mother & Children Hospital Best in Obstetrics & Gynaecology

Install Glory Casino app Bonus up to 10000 Rupees Play Live Casino…

ರಸ್ತೆ ಗುಂಡಿಯಲ್ಲಿ ಸಿಲುಕಿದ ಬಸ್, 2 ಗಂಟೆ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ..!

ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತಷ್ಟು ಹಾಳಾಗಿದ್ದು ಅಪಘಾಕ್ಕೆ ಆಹ್ವಾನ ನೀಡುತ್ತಿವೆ. ಬುಧವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರಾಕ್ಟರ್‌ವೊಂದು ರಸ್ತೆಯಲ್ಲಿ ಆಳವಾಗಿದ್ದ ಗುಂಡಿಯಲ್ಲಿ ಸಿಲುಕಿ ಸ್ವಲ್ಪದರಲ್ಲೆ ಅಪಾಯದಿಂದ ಪಾರಾಗಿವೆ.