ಬೆಟಗೇರಿ: ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು ಕೊರೊನಾ ಕಾರಣಾಂತರದಿAದ ಈ ರೈಲುಗಳು ರದ್ದಾಗಿರುವುದರಿಂದ ರಾಯಚೂರಿಗೆ, ಮಂತ್ರಾಲಯ, ದರ್ಶನಕ್ಕೆ ಶ್ರೀಶೈಲಂಗೆ ಹಾಗೂ ಗದ್ವಾಲ ಜಮಲಮ್ಮ ದೇವಿಗೆ ಹೋಗಿ ಬರುವ ಪ್ರಯಾಣಿಕರಿಗೆ ತೀವ್ರವಾದ ತೊಂದರೆಯಾಗಿದೆ ಎಂದು ಬೆಟಗೇರಿ ರೇಲ್ವೆ ಹೋರಾಟ ಸಮಿತಿ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ರೈಲುಗಳು ಮಧ್ಯ (ಶ್ರೀಶೈಲಂ) ರೇಲ್ವೆ ವಿಭಾಗದಿಂದ ಓಡಿಸಲಾಗುತ್ತಿತ್ತು ಕೊಲ್ಲಾಪೂರ-ಹೈದ್ರಾಬಾದ ಮಣಗೂರು-ಕೊಲ್ಲಾಪೂರ ರೈಲುಗಳು ಮೊದಲಿನಂತೆ ಪ್ರತಿನಿತ್ಯ ಓಡಿಸುವಂತೆ ಮತ್ತು ಮಂತ್ರಾಲಯ, ಶ್ರೀಶೈಲಂ, ಗದ್ವಾಲ್, ರಾಯಚೂರಿಗೆ ಹೋಗಿ ಬರುವ ಸದ್ಭಕ್ತರಿಗೆ ಮತ್ತು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲವೇ ನೈರುತ್ಯ ರೇಲ್ವೆಯವರಾದರೂ ಈ ಗಾಡಿಗಳು ಹುಬ್ಬಳ್ಳಿಯಿಂದ ಓಡಿಸುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೂರುಸಾವಿರಮಠ ಮತ್ತು ಆಸ್ತಿಗಳ ವಿಚಾರ: ಬಹಿರಂಗ ಚರ್ಚೆಗೆ ದಿಂಗಾಲೇಶ್ವರ ಶ್ರೀಗಳ ಆವ್ಹಾನ

ಶ್ರೀ ಜಗದ್ಗುರು ಮಾರುಸಾವಿರಮಠದ ಆಸ್ತಿ ಮತ್ತು ಉತ್ತರಾಧಿಕಾರಕ್ಕೆ ಸಂಬಂಧಪಟ್ಟ ವಿಚಾರವಾಗಿ ಹೇಳಿಕೆ ನೀಡುವ ಯಾವುದೇ ವ್ಯಕ್ತಿಗಳು ನಮ್ಮೊಂದಿಗೆ ಚರ್ಚಿಸಿ ಹೇಳಿಕೆ ನೀಡಬೇಕು ಎಂದು ಬಾಲೇಹೊಸೂರು ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಶ್ರೀಗಳು ತಿಳಿಸಿದ್ದಾರೆ.

ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ಅಲ್ಪಾವಧಿ ಕೃಷಿ ಸಾಲ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ…

ಕೊರೊನಾ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ- ಸಿ.ಸಿ.ಪಾಟೀಲ್

ಕೊರೋನಾದ ಪರಿಣಾಮದಿಂದ ಕಂಗಾಲಾದ ನಾವು ನೀವೆಲ್ಲರೂ ಇದೀಗ ಹೊರಗಡೆ ಬಂದಂತಾಗಿದೆ, ಸುಮಾರು ದಿನಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಪೂಜೆ ಮಾಡದೇ ಇರುವುದಕ್ಕೆ ಕಾರಣ ಈ ಮಹಾಮಾರಿ ಕರೋನ. ಇದರಿಂದ ದೇಶದ ಬೊಕ್ಕಸ, ರಾಜ್ಯದ ಬೊಕ್ಕಸ, ವ್ಯಾಪಾರಸ್ಥರಿಗೆ ಹಿನ್ನೆಡೆ ಮತ್ತು ಉದ್ಯಮಿಗಳಿಗೆ ಭಾರೀ ತೊಂದರೆ ಉಂಟಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.