ಶಿರಹಟ್ಟಿ: ತಾಲೂಕಿನ ಸುಗನಹಳ್ಳಿ ಗ್ರಾಮದ ಆಲದಮ್ಮ ಕೆರೆಯ ಅಭಿವೃದ್ಧಿಗೆ ಟೆಂಡರ್ ಕರೆದಿದ್ದು, ಪ್ರಾಮಾಣಿಕ ಗುತ್ತಿಗೆದಾರರಿಗೆ ಅಧಿಕಾರಿಗಳು ಕಾಮಗಾರಿ ನೀಡುವುದರ ಮೂಲಕ ಸಾರ್ವಜನಿಕರ ಹಿತದೃಷ್ಟಿ ಕಾಯಬೇಕೆಂದು ಬನ್ನಿಕೊಪ್ಪ ಗ್ರಾಪಂ ಅಧ್ಯಕ್ಷ ಸಿದ್ದಲಿಂಗಯ್ಯ ಹೊಂಬಾಳಿಮಠ ಆಗ್ರಹಿಸಿದರು.

ಈ ಕುರಿತು ಉತ್ತರಪ್ರಭದೊಂದಿಗೆ ಮಾತನಾಡಿದ ಇವರು ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಬಜೆಟ್‌ನಲ್ಲಿ ತಾಲೂಕಿನ ಸುಗನಹಳ್ಳಿಯ ಆಲದಮ್ಮ ಕೆರೆಗೆ 10ಕೋಟಿ ಅನುದಾನ ಮೀಸಲಿರಿಸಿದ್ದರು. ಸದ್ಯ ಆಡಳಿತದಲ್ಲಿರುವ ಯಡಿಯೂರಪ್ಪ ನೇತೃತ್ವ ಬಿಜೆಪಿ ಸರ್ಕಾರ ಅನುದಾನ ಬಿಡುಗಡೆ ಮಾಡಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಈಗಾಗಲೇ ಎರಡು ಬಾರಿ ಟೆಂಡರ್ ಕರೆದು ರದ್ದುಪಡಿಸಲಾಗಿತ್ತು. ಸದ್ಯ 3ನೇ ಬಾರಿ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದ್ದು, ಟೆಂಡರ್ ಕರೆದು ರದ್ದು ಮಾಡುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ. ಕೂಡಲೇ ಪ್ರಾಮಾಣಿಕ ಗುತ್ತಿಗೆದಾರರಿಗೆ ಟೆಂಡರ್ ನೀಡಿ ಕಾಮಗಾರಿ ಪ್ರಾರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪವರ ಸ್ಟಾರ್ ಅಭಿಮಾನಿ ಹೃದಯಾಘಾತದಿಂದ ಸಾವು

ಉತ್ತರಪ್ರಭನಂಜನಗೂಡು: ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಅಭಿಮಾನಿಯೊಬ್ಬ ಆಕಾಶ್(22) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ…

ಆಕಸ್ಮಿಕ ಬೆಂಕಿ: ಮನೆಯ ಮೇಲಿಟ್ಟ ವಸ್ತುಗಳಿಗೆ ಹಾನಿ

ರೋಣ: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಮನೆಯ ಮೇಲಿಟ್ಟ ವಸ್ತುಗಳು ಸುಟ್ಟ ಘಟನೆ ರೋಣ ಪಟ್ಟಣದಲ್ಲಿ ನಡೆದಿದೆ.

ಕೊರೊನಾ ಸಂಕಷ್ಟ – ರಾಜ್ಯದಲ್ಲಿ ಮತ್ತೆ ಕರ್ಫ್ಯೂ ಜಾರಿಗೊಳಿಸಿದ ಸರ್ಕಾರ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ…

25ನೇ ವಾರ್ಡಿನ ಮಾನವಿ ಮತ್ತು 8ನೇ ವಾರ್ಡ ಕಾಂಗ್ರೆಸ್ ಅಭ್ಯರ್ಥಿ ಪೂರ್ಣಿಮಾ ಮತ್ತು 13ಮತ್ತು 19ನೇ ವಾರ್ಡ ಬಿಜೆಪಿ ಗೆ ಜಯ

ಗದಗ:: ಗದಗ ಬೆಟಗೇರಿ ನಗರ ಸಭೆ ಚುನಾವಣೆ ಮತ ಎಣಿಕೆ ಗದಗ ನಗರದ ಗುರು ಬಸವ…