ಬೆಂಗಳೂರು : ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಕಳೆಯುತ್ತಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ವರೆಗೆ ಸ್ವೀಕರಿಸದಿರುವುದು ಖಂಡನೀಯ. ತಕ್ಷಣ ವರದಿ ಸ್ವೀಕರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸ್ವಾತಂತ್ರ‍್ಯ ನಂತರದಿAದ ಈ ವರೆಗೆ ಸಮಾಜದ ವಿವಿಧ ಸಮುದಾಯಗಳಲ್ಲಾದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬದಲಾವಣೆಯ ಬಗ್ಗೆ ತಿಳಿದುಕೊಳ್ಳಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಲು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು. ಯಾವ ಸಮುದಾಯಗಳು ಸಂವಿಧಾನದ ನಿಯಮಗಳಡಿ ಮೀಸಲಾತಿಗೆ ಅರ್ಹ ಇವೆ ಅವೆಲ್ಲವುಗಳಿಗೆ ಸರ್ಕಾರ ಮೀಸಲಾತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಯಾವ ಊರಲ್ಲಿ ಎಷ್ಟು ಪಾಸಿಟಿವ್!

ಜಿಲ್ಲೆಯಲ್ಲಿ ಸೋಮವಾರ ದಿ. 20 ರಂದು 30 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಜಿಡಿಜಿ-498 ಮಲ್ಲಸಮುದ್ರ ನಿವಾಸಿ (46,ಪುರುಷ) ಹಾಗೂ ಜಿಡಿಜಿ-585 ಹುಲಕೋಟಿ

ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಷರತ್ತಿಗೊಳಪಟ್ಟು 3000 ರೂ.ಗಳ ಪರಿಹಾರ ಧನವನ್ನು ನೀಡಲು ಸರ್ಕಾರ ಆದೇಶಿಸಲಾಗಿದೆ.

Рейтинг Букмекеров 53 711 Отзывов О Букмекерах Рф И мира, Ведущий Портал об Спорте И Ставках

В мы рейтинг входят самые БК конторы в интернете, работающие вопреки российской…

ಎನ್ ಆರ್ ಬಿ ಸಿ 5ಎ ಕೆನಾಲ್ ಯೋಜನೆ: ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯ

ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ…