ಬೆಂಗಳೂರು : ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಕಳೆಯುತ್ತಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ವರೆಗೆ ಸ್ವೀಕರಿಸದಿರುವುದು ಖಂಡನೀಯ. ತಕ್ಷಣ ವರದಿ ಸ್ವೀಕರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸ್ವಾತಂತ್ರ‍್ಯ ನಂತರದಿAದ ಈ ವರೆಗೆ ಸಮಾಜದ ವಿವಿಧ ಸಮುದಾಯಗಳಲ್ಲಾದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬದಲಾವಣೆಯ ಬಗ್ಗೆ ತಿಳಿದುಕೊಳ್ಳಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಲು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು. ಯಾವ ಸಮುದಾಯಗಳು ಸಂವಿಧಾನದ ನಿಯಮಗಳಡಿ ಮೀಸಲಾತಿಗೆ ಅರ್ಹ ಇವೆ ಅವೆಲ್ಲವುಗಳಿಗೆ ಸರ್ಕಾರ ಮೀಸಲಾತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸ್ಥಳದಲ್ಲೇ ಪರೀಕ್ಷಿಸಿ ಸೋಂಕಿತರ ಸಂಖ್ಯೆ ಕಡಿಮೆಗೊಳಿಸಲು ಪ್ರಯತ್ನ ನಡೆದಿದೆ

ನರೇಗಲ್‌: ಕೊರೊನಾ ವೈರಸ್ ಪಟ್ಟಣದಿಂದ ಹಳ್ಳಿಯ ಕಡೆಗೆ ಗಣನೀಯವಾಗಿ ಹಬ್ಬಿದ್ದು, ಇದನ್ನು ತಡೆಗಟ್ಟಲು ಸರ್ಕಾರ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಉಪಯೋಗವನ್ನು ಕೊರೊನಾ ಸೋಂಕಿತರು ಪಡೆದುಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ:ಎ,ಡಿ,ಸಾಮುದ್ರಿ ಹೇಳಿದ

ಕೊರೊನಾ ಎರಡನೇ ಅಲೆ: ಅಧಿಕಾರಿಗಳ ಸಭೆ ಬಳಿಕೆ ಸಿಎಂ ಹೇಳಿದ್ದೇನು?

ಕೊರೊನಾ ಎರಡನೇ ಅಲೆ ಹಿನ್ನೆಲೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಪ್ರವಾಸಿಗರಿಗೆ ಮಡಿಕೇರಿ ಮುಕ್ತ

ಮಡಿಕೇರಿ : ಕೊರೊನಾ ಸೋಂಕಿನ ಮಧ್ಯೆಯೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.…

ಗದಗ ಜಿಲ್ಲೆಯ ಹೂ ಬೆಳೆಗಾರರಿಗೆ ಕೋಟ್ಯಾಂತರ ರೂ, ನಷ್ಟ..!

ಲಾಕ್ ಡೌನ್ ಹಿನ್ನೆಲೆ ಹೂಬೆಳೆಯನ್ನೆ ನಂಬಿಕೊಂಡ ಕುಳಿತ ರೈತ ಕಂಗಾಲಾಗಿದ್ದಾನೆ. ಗದಗ ಜಿಲ್ಲೆಯಲ್ಲಿ ಯಾವ ಹೂವು ಎಷ್ಟು ಹಾನೀಗಿಡಾಗಿದೆ ಎನ್ನುವ ವಿವರ ಇಲ್ಲಿದೆ ನೋಡಿ.