ರೋಣ: ನಗರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಗೂ ಸ್ಯಾನಿಟೈಸರ್ ಸಿಂಪಡಿಸಲು ತಾಲೂಕು ದಂಡಾಧಿಕಾರಿಗಳು ಆದೇಶಿಸಿದ್ದರು. ಆದರೆ, ಪೊಲೀಸ್ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ತಾಲೂಕು ದಂಡಾಧಿಕಾರಿಗಳ ಆದೇಶಕ್ಕೆ ಬೆಲೆ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ.

ಮಾರ್ಚ 28 ರಂದು ಅಟಲ್ ಭೀಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಅಡುಗೆ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಆದ್ದರಿಂದ, ಕೊರೊನಾ ನಿಯಂತ್ರಣಕ್ಕಾಗಿ ಶಾಲೆಯನ್ನು ಶೀಲ್ಡೌನ್ ಮಾಡಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಕಲು ಪೊಲೀಸ್ ಇಲಾಖೆಯವರಿಗೆ ಹಾಗೂ ಸ್ಯಾನಿಟೇಸೇರ ಮಾಡಲು ಪುರಸಭೆಯವರಿಗೆ ಆದೇಶೀಸಿದ್ದರು. ತಾಲೂಕು ದಂಡಾಧಿಕಾರಿಗಳು ಹೊರಡಿಸಿದ ಆದೇಶವನ್ನು ಪಾಲಿಸದೇ ಉಲ್ಲಂಘಿಸಿದ್ದಾರೆ.

ನಮ್ಮ ಮಕ್ಕಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಶಾಲೆಯಲ್ಲಿ ಸರಿಯಾದ ನೀರಿನ ವ್ಯವಸ್ಥೆ ಇಲ್ಲ. ಇಕ್ಕಟ್ಟಾದ ಕೊಠಡಿಗಳಲ್ಲಿ ನಮ್ಮ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಜೊತೆಗೆ ಸರಿಯಾದ ಸೌಲಭ್ಯಗಳಿಲ್ಲ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವುದು ಸಹಜ. ಮುಂದೆ ನಮ್ಮ ಮಕ್ಕಳ ಭವಿಷ್ಯ ಏನಾಗುವದು ಎಂಬ ಭಯ ನಮ್ಮನ್ನು ಕಾಡುತ್ತಿದೆ. ಈ ಪರಸ್ಥಿತಿ ನೋಡಿದರೆ ತಾಲೂಕಾಡಳಿತವು ಕೋವಿಡ್ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಪಾಲಕರ ನೇರವಾಗಿ ಆರೋಪವಾಗಿದೆ.

Leave a Reply

Your email address will not be published. Required fields are marked *

You May Also Like

ಜಿಲೆಟಿನ್‌ ಸ್ಫೋಟ ದುರಂತ: ಗ್ರಾಮಸ್ಥರಿಂದ ಆಕ್ರೋಶ

ಜಿಲ್ಲೆಯ ಹುಣಸೋಡು ಅಕ್ರಮ ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೆಟಿನ್‌ ಸ್ಪೋಟಗೊಂಡ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟಗೊಂಡಿದೆ.

ಮುಂಬೈನ 800 ಚದರ ಅಡಿ ಜಾಗಕ್ಕೆ ತಿಂಗಳಿಗೆ 1 ರೂಪಾಯಿ!: ಪತ್ನಿಗೆ ಲೀಸ್ ಕೊಟ್ಟ ಬ್ಯಾಂಕ್ ಚೇರ್ಮನ್

ಖಾಸಗಿ ಬ್ಯಾಂಕಿನ ಮುಖ್ಯಸ್ಥರೊಬ್ಬರು ತಮ್ಮ ಪತ್ನಿಯ ಎನ್.ಜಿ.ಒ.ಗೆ ತಮ್ಮ ಬ್ಯಾಂಕಿನ ಪಕ್ಕದ ಜಾಗವನ್ನು ಬಳಸಿಕೊಳ್ಳಲು ನೀಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ. ತಿಂಗಳಿಗೆ ನಾಮಕಾವಸ್ಥೆ ಒಂದೇ ಒಂದು ರೂಪಾಯಿ ಬಾಡಿಗೆಯಷ್ಟೇ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ. ಯೆಸ್ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳು ದಿವಾಳಿ ಹೊಂದಿದ್ದರ ಹಿಂದೆ ಬ್ಯಾಂಕ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸ್ವಾರ್ಥವಿತ್ತು ಎನ್ನುವುದನ್ನು ನೋಡಿದ್ದೇವೆ.

ನಾಳೆಯಿಂದ 14 ದಿನ ರಾಜ್ಯಾದ್ಯಂತ ಲಾಕ್

ನಾಳೆ ರಾತ್ರಿಯಿಂದಲೇ ರಾಜ್ಯಾದ್ಯಂತ 14 ದಿನಗಳವರೆಗೆ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮಾಸ್ಕ್ ಬಳಸದವರಿಗೆ ವಿಧಿಸಲಾಗಿದ್ದ ದಂಡ ಪ್ರಮಾಣದಲ್ಲಿ ಇಳಿಕೆ

ಕೋವಿಡ್ 19 ಸೋಂಕು ಕರ್ನಾಟಕದಲ್ಲಿ ಕಾಣಿಸಿಕೊಂಡ ದಿನದಿಂದ ಸರ್ಕಾರವು ಸೋಂಕನ್ನು ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಕಾಲಕಾಲಕ್ಕೆ ಕೇಂದ್ರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿಯೂ ಸಹ ಲಾಕ್ ಡೌನ್ ವಿಧಿಸುವುದರಲ್ಲದೆ, ಕಡ್ಡಾಯವಾಗಿ ಮಾಸ್ಕ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೋಳಿಸಲಾಗಿದೆ.