ಬೆಳಗಾವಿ : ಸುರೇಶ್ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭೆಗೆ ಉಪ ಚುನಾವಣೆ ನಡೆಯುತ್ತಿದೆ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಗೆಲ್ಲಲಿದ್ದಾರೆ ಎಂದರು.

ಸುದ್ದಿಗಾರರೊAದಿಗೆ ಮಾತನಾಡಿದ ಅವರು, ಶಿವಾಜಿ ಮಹಾರಾಜರು, ಬಸವೇಶ್ವರ ಸೌಹಾರ್ದತೆ ಪ್ರತಿಕವಾಗಿದ್ದರು. ಸರ್ಕಾರ ಮರಾಠಾ ಸಮುದಾಯದ ಅಭಿವೃದ್ಧಗೆ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದಾರೆ. ಸುರೇಶ್ ಅಂಗಡಿ ಪತ್ನಿ ಗೆಲ್ಲಿಸಲು ಶ್ರಮಿಸುತ್ತೇವೆ. ಬೆಳಗಾವಿಯಲ್ಲಿ ಬಿಜೆಪಿ ಪರ ಅನುಕಂಪದ ಅಲೆಯಿದೆ ಮಸ್ಕಿ, ಬಸವಕಲ್ಯಾಣ ದಲ್ಲಿ ರಾಜ್ಯ ಸರ್ಕಾರದ ಅಭಿವೃದ್ಧಿ ಮೇಲೆ ಗೆಲ್ಲುತ್ತೇವೆ ಎಂದು ವಿಶ್ವಾ ವ್ಯಕ್ತ ಪಡಿಸಿದರು.

ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಯಾಕ ಬೆಳಗಾವಿ ಅಭಿವೃದ್ಧಿಗೆ ಶ್ರಮಿಸಲಿಲ್ಲ. ಬಿಜೆಪಿ ಸರ್ಕಾರದಲ್ಲಿ ಸುವರ್ಣ ವಿಧಾನಸೌಧ ಕಟ್ಟಿದಿವಿ. ಕಾಂಗ್ರೆಸಗೆ ಏನು ಗುರಿ ಇಲ್ಲ. ಕಾಂಗ್ರೆಸ್‌ನವರು ಬರೀ ಸುಳ್ಳು ಭರವಸೆ ಕೊಡ್ತಾರೆ. ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರವೂ ಸುವರ್ಣ ವಿಧಾನಸೌಧಕ್ಕೆ ಪ್ರಮುಖ ಕಚೇರಿ ಸ್ಥಳಾಂತರ ಮಾಡ್ತಿವಿ. ನಮಗೆ ಸ್ವಲ್ಪ ಸಮಯ ಕೊಡಿ ಎಂದರು.

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಬಿಜೆಪಿಗೆ ಮೈನ್ಸ್ ಆಗುತ್ತೆ ಎಂದ ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರೀಯಿಸಿ, ಸಿಡಿ ಪ್ರಕರಣ ಬಿಜೆಪಿ ಪಕ್ಷಕ್ಕೆ ಮೈನಸ್ ಆಗಲ್ಲ. ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಮೂರು ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೊರೋನಾ ಸೋಂಕು ಪರೀಕ್ಷೆ ನಡೆಸಿದ್ದು ಎಷ್ಟು ಜನರಿಗೆ ಗೊತ್ತೆ?

ಕೊರೋನಾ ಸೋಂಕು ಪತ್ತೆ ಕಾರ್ಯ ಕೂಡ ರಾಜ್ಯದಲ್ಲಿ ತೀವ್ರಗತಿಯಲ್ಲಿ ನಡೆದಿದ್ದು, ಈಗಾಗಲೇ 1 ಲಕ್ಷ ಜನರನ್ನು ಸೋಕು ಪರೀಕ್ಷೆಗೆ ಒಳಪಡಿಸಲಾಗಿದೆ.

ಕಟ್ಟಿಗೆ ಅಡ್ಡೆಗಳಿಂದ ಶಿರಹಟ್ಟಿ ಜನರಿಗೆ ಕೊರೊನಾ ಭಯ..!

ದಿನದಿಂದ ದಿನಕ್ಕೆ ನಿರೀಕ್ಷೆಗೂ ಮೀರಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಾತ್ರ ಕಟ್ಟಿಗೆ ಅಡ್ಡೆಗಳು ಯಾವುದೇ ಅಡ್ಡಿ, ಆತಂಕಗಳಿಲ್ಲದೆ ನಡೆಯುತ್ತಿವೆ.

ಕಾರ್ಮಿಕರ ಬದುಕಲ್ಲಿ ನಗೆ ಮೂಡಲಿ – ಕುಮಾರಸ್ವಾಮಿ!

ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.

ಶಾಸಕ ಶರತ್ ಬಚ್ಚೇಗೌಡ ಕೈ ಸೇರಲು ಮುಹೂರ್ತ ಫಿಕ್ಸ್!

ಪಕ್ಷೇತರರಾಗಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಾಸಕ ಶರತ್ ಬಚ್ಚೇಗೌಡ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ಫಿಕ್ಸ್ ಆಗಿದೆ. ಇದೇ ತಿಂಗಳ 25ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.