ಗದಗ: ಜಿಲ್ಲಾ ಪೈಲ್ವಾನರ ಮಾಶಾಸನ ಬಿಡುಗಡೆ ಮಾಡುವಂತೆ ಸಚಿವರಿಗೆ ಮನವಿ ನೀಡುವ ವೇಳೆ ಜಟಾಪಟಿ ನಡೆದ ಘಟನೆ ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ. 

ಜಿಲ್ಲೆಯ ಅನೇಕ ಪೈಲ್ವಾನರು, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಅವರಿಗೆ‌ ಮನವಿ ಸಲ್ಲಿಸಲು ಬಂದಿದ್ದರು. ಈ ವೇಳೆ ನಮ್ಮ ಸರ್ಕಾರದ ಅವಧಿಯಲ್ಲಿಯೇ ಕಲಾವಿದರ ಮಾಶಾಸನ ಹೆಚ್ಚಿಸಿದೆ ಎಂದ ಸಚಿವ ಸಿ.ಸಿ ಪಾಟೀಲ್ ಹೇಳಿದರು. ಆಗ ನಿಮ್ಮ ಸರ್ಕಾರ ಮಾಡಿಲ್ಲ ಅಂತ ಸಚಿವರ ಮಾತಿಗೆ ಪೈಲ್ವಾನರು ತಿರುಗೇಟು ನೀಡಿದರು. ಈ ವೇಳೆ ಯಾರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳದೇ ಅಂತರ ಕಾಯ್ದುಕೊಂಡು, ಮನವಿ ಸ್ವೀಕರಿಸಿ ಬೇಡಿಕೆ ಇಡೇರಿಕೆಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ನಮ್ಮ ಬೇಡಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಎಂದು ಆರೋಪಿಸಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪೈಲ್ವಾನರು ಹಾಗು ಪೊಲೀಸರ ಮದ್ಯೆ ಮಾತಿನ ಚಕಮಕಿ ನಡೆಯಿತು. ಇದರಿಂದ ಪೈಲ್ವಾನರ ವಿರುದ್ಧ ಸಚಿವ ಸಿ.ಸಿ ಪಾಟೀಲ್ ಗರಂ ಆದರು. ಹತ್ತಿರ ಬರಬೇಡಿ, ನಮ್ಮನ್ನು ಕೇಳಬೇಡಿ ಎಂದರೆ ನಾವು ಯಾರಿಗೆ ಕೇಳಬೇಕು? ಎಂದು ಪೈಲ್ವಾನರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಪೈಲ್ವಾನರನ್ನು ಸಮಾಧಾನ ಪಡಿಸಲು ಸಂಸದ ಶಿವಕುಮಾರ್ ಉದಾಸಿ ಮುಂದಾದರು. ಕೋವಿಡ್ ನಿಂದ ಮಾಶಾಸನ ವಿತರಣೆಯಲ್ಲಿ ವಿಳಂಭವಾಗಿದೆ. ಈ ಸಮಸ್ಯೆ ಕೇವಲ ಗದಗ ಜಿಲ್ಲೆಯ ಮಾತ್ರದ್ದಲ್ಲ. ಇಡೀ ರಾಜ್ಯದ ಸಮಸ್ಯೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರ ಜೊತೆಗೆ ಮಾತನಾಡಿ ಮಾಶಾಸನ ಕೊಡಿಸುವುದಾಗಿ ಸಂಸದ ಶಿವಕುಮಾರ್ ಉದಾಸಿ ಭರವಸೆ ನೀಡಿದರು.

Leave a Reply

Your email address will not be published. Required fields are marked *

You May Also Like

ಕೆಆರ್‌ಡಿಸಿಎಲ್ ಅಧಿಕಾರಿಗಳಿಗೆ ರೂಮ್‌ನಲ್ಲಿ ಕೂಡಿ ಹಾಕಿ ಸಾರ್ವಜನಿಕರಿಂದ ಧರಣಿ

ಉತ್ತರಪ್ರಭಗದಗ: ಗದಗದಿಂದ ಮುಂಡರಗಿ ಹೋಗುವ ಮಾರ್ಗ ಮಧ್ಯೆ ಬರುವ ಪಾಪನಾಶಿ ಗ್ರಾಮದ ಹತ್ತಿರವಿರುವ ಅನಧಿಕೃತ ಟೊಲ್…

ಖಾಸಗಿ‌ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಿಕ್ಷಕರಿಗೆ ಮನವಿ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಯ ಶಿಕ್ಷಕರು ತಮ್ಮ ಒಂದು ಅಥವಾ ಎರಡು ದಿನದ ಸಂಬಳವನ್ನು…

ನಿಧನ : ಹೊನ್ನಪ್ಪ ಬದ್ದೆಪ್ಪ ಲಮಾಣಿ

ಉತ್ತರಪ್ರಭಲಕ್ಷ್ಮೇಶ್ವರ: ಹೊನ್ನಪ್ಪ ಬದ್ದೆಪ್ಪ ಲಮಾಣಿ, ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಡರಕಟ್ಟಿ,…

ಗದಗ ಜಿಲ್ಲೆಯ ಆರು ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.