ತಿರುಪತಿ: ಕೊರೋನಾ ಎರಡನೇ ಅಲೆಯಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ದೇವರ ದರ್ಶನಕ್ಕೂ ತೊಡಕುಂಟು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏ.12ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ಉಚಿತ ದರ್ಶನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏ.11ರವರೆಗೆ ಮಾತ್ರವೇ ಟೋಕನ್ ವಿತರಿಸಲಾಗುತ್ತದೆ.
ಆ ನಂತರ ಟೋಕನ್ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗುತ್ತದೆ ಎಂದು ಟಿಟಿಡಿ ಹೇಳಿದೆ. ಈಗಾಗಲೇ ದರ್ಶನಕ್ಕಾಗಿ ನೀಡಲಾಗುವ ದರ್ಶನದ ಎಲ್ಲಾ ಟೋಕನ್ಗಳ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ತಿರುಪತಿಯಲ್ಲಿರುವ ಭೂದೇವಿ ಕಟ್ಟಡ ಮತ್ತು ವಿಷ್ಣು ನಿವಾಸಂನಲ್ಲಿ ತಿರುಪತಿ ತಿಮ್ಮಪ್ಪನ ಉಚಿತ ದರ್ಶನ ಕಲ್ಪಿಸಲಾಗುತ್ತಿತ್ತು.