ಬೆಂಗಳೂರು: ಸಾರಿಗೆ ಮುಷ್ಕರ ಹೊತ್ತಲ್ಲೇ ಸರ್ಕಾರ ನೈಟ್‍ಕರ್ಫ್ಯೂ ಜಾರಿ ಮಾಡಿದೆ.  ಈ ಮೂಲಕ ಜನಸಾಮಾನ್ಯರಿಗೆ ಏಕಕಾಲಕ್ಕೆ ಎರಡು ಆಘಾತ ಕಾದಿದೆ. ಏ.10 ರಿಂದ ರಾಜ್ಯದ 8 ನಗರಗಳಲ್ಲಿ ನೈಟ್‍ಕರ್ಫ್ಯೂ ಹೇರಲಾಗಿದೆ. ಇತ್ತ ಶನಿವಾರದಿಂದ ಸತತ 4 ದಿನ ರಜೆ ಇರುತ್ತದೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತೀವ್ರ ಸಂಕಷ್ಟ ಎದುರಾಗಿದೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ 11 ರಾಜ್ಯಗಳ ಸಿಎಂಗಳ ಸಭೆಯ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ನೈಟ್‍ಕರ್ಫ್ಯೂ ಜಾರಿಗೊಳಿಸಿ ಸಿಎಂ ಬಿಎಸ್‍ವೈ ಆದೇಶಿಸಿದ್ದಾರೆ.

ಏ.10ರಿಂದ ಅಂದರೆ ಶನಿವಾರದಿಂದ ಏಪ್ರಿಲ್ 20ರವರೆಗೆ ರಾಜ್ಯದ 8 ನಗರಗಳ ವ್ಯಾಪ್ತಿಯಲ್ಲಷ್ಟೇ ಸೀಮಿತಗೊಳಿಸಿ ನೈಟ್‍ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಬೆಂಗಳೂರು ನಗರ, ಮಂಗಳೂರು, ಉಡುಪಿ, ಮಣಿಪಾಲ್, ತುಮಕೂರು, ಬೀದರ್, ಕಲಬುರಗಿ, ಮೈಸೂರು ನಗರದಲ್ಲಿ ನೈಟ್‍ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾಜ್ಯದ 8 ನಗರಗಳಿಗೆ ಸೀಮಿತಗೊಳಿಸಿ ಏ. 10 ರಿಂದ ಏ.20ರವರೆಗೆ ನೈಟ್‍ಕರ್ಫ್ಯೂ ಹೇರಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ಇರಲಿದೆ. ವಾಣಿಜ್ಯ ಚಟುವಟಿಕೆಗಳ ಮೇಲೆ ಮತ್ತೆ ನೈಟ್‍ಕರ್ಫ್ಯೂ ಬರೆ ಬೀಳಲಿದ್ದು, ರಾತ್ರಿ 10 ಗಂಟೆಯಿಂದ ಎಲ್ಲ ವಾಣಿಜ್ಯ ಚಟುವಟಿಕೆಗಳು ಸ್ಥಗಿತವಾಗಲಿದೆ. 7 ಜಿಲ್ಲೆಗಳ 8 ನಗರಗಳಲ್ಲಿ ವಾಣಿಜ್ಯ ಚಟುವಟಿಕೆಗಳಾದ ಹೋಟೆಲ್, ರೆಸ್ಟೋರೆಂಟ್, ಪಬ್‍ಗಳೂ ಬಂದ್ ಆಗಲಿದೆ. ಅಗತ್ಯ ಚಟುವಟಿಕೆಗಳಿಗಷ್ಟೇ ನೈಟ್‍ಕರ್ಫ್ಯೂ ವೇಳೆ ವಿನಾಯ್ತಿ ನೀಡಲಾಗುತ್ತದೆ. ನೈಟ್‍ಕರ್ಫ್ಯೂ ವೇಳೆ ಸಿನಿಮಾ ಪ್ರದರ್ಶನ ನಿಷೇಧ ಹಾಗೂ ಅಂತರ್ಜಿಲ್ಲೆಗಳ ಓಡಾಟಕ್ಕೆ ನಿರ್ಬಂಧ ಇಲ್ಲ. ಅಂತರ್‍ಜಿಲ್ಲೆ ಓಡಾಟ, ಬಸ್, ಸ್ವಂತ ವಾಹನಗಳಲ್ಲಿ ಓಡಾಟಕ್ಕೆ ಅನುಮತಿ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ…

ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ

ನಗರದ ಜನತಾ ಶಿಕ್ಷಣ ಸಮಿತಿಯ ಬನಶಂಕರಿ ಆರ್ಟ್ಸ್, ಕಾಮರ್ಸ್ ಮತ್ತು ಎಸ್.ಕೆ.ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಒಂದು ದಿನದ ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ ಆಯೋಜಿಸಲಾಗಿದೆ.

ದೇಶದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ ಕೊರೊನಾ ವೈರಸ್!

ದೇಶದಲ್ಲಿ ಕೊರೊನಾ ಪೀಡಿತ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಿ ಕೊರೊನಾವನ್ನು ನಿಯಂತ್ರಿಸಲು ಇನ್ನೂ ಆಗುತ್ತಿಲ್ಲ. ಇದು ಜನರ ಆತಂಕಕ್ಕೆ ಕಾರಣವಾಗುತ್ತಿದೆ.

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.