ಬೆಂಗಳೂರು: ಸಾರಿಗೆ ಮುಷ್ಕರ ಹೊತ್ತಲ್ಲೇ ಸರ್ಕಾರ ನೈಟ್‍ಕರ್ಫ್ಯೂ ಜಾರಿ ಮಾಡಿದೆ.  ಈ ಮೂಲಕ ಜನಸಾಮಾನ್ಯರಿಗೆ ಏಕಕಾಲಕ್ಕೆ ಎರಡು ಆಘಾತ ಕಾದಿದೆ. ಏ.10 ರಿಂದ ರಾಜ್ಯದ 8 ನಗರಗಳಲ್ಲಿ ನೈಟ್‍ಕರ್ಫ್ಯೂ ಹೇರಲಾಗಿದೆ. ಇತ್ತ ಶನಿವಾರದಿಂದ ಸತತ 4 ದಿನ ರಜೆ ಇರುತ್ತದೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತೀವ್ರ ಸಂಕಷ್ಟ ಎದುರಾಗಿದೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ 11 ರಾಜ್ಯಗಳ ಸಿಎಂಗಳ ಸಭೆಯ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ನೈಟ್‍ಕರ್ಫ್ಯೂ ಜಾರಿಗೊಳಿಸಿ ಸಿಎಂ ಬಿಎಸ್‍ವೈ ಆದೇಶಿಸಿದ್ದಾರೆ.

ಏ.10ರಿಂದ ಅಂದರೆ ಶನಿವಾರದಿಂದ ಏಪ್ರಿಲ್ 20ರವರೆಗೆ ರಾಜ್ಯದ 8 ನಗರಗಳ ವ್ಯಾಪ್ತಿಯಲ್ಲಷ್ಟೇ ಸೀಮಿತಗೊಳಿಸಿ ನೈಟ್‍ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಬೆಂಗಳೂರು ನಗರ, ಮಂಗಳೂರು, ಉಡುಪಿ, ಮಣಿಪಾಲ್, ತುಮಕೂರು, ಬೀದರ್, ಕಲಬುರಗಿ, ಮೈಸೂರು ನಗರದಲ್ಲಿ ನೈಟ್‍ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾಜ್ಯದ 8 ನಗರಗಳಿಗೆ ಸೀಮಿತಗೊಳಿಸಿ ಏ. 10 ರಿಂದ ಏ.20ರವರೆಗೆ ನೈಟ್‍ಕರ್ಫ್ಯೂ ಹೇರಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ಇರಲಿದೆ. ವಾಣಿಜ್ಯ ಚಟುವಟಿಕೆಗಳ ಮೇಲೆ ಮತ್ತೆ ನೈಟ್‍ಕರ್ಫ್ಯೂ ಬರೆ ಬೀಳಲಿದ್ದು, ರಾತ್ರಿ 10 ಗಂಟೆಯಿಂದ ಎಲ್ಲ ವಾಣಿಜ್ಯ ಚಟುವಟಿಕೆಗಳು ಸ್ಥಗಿತವಾಗಲಿದೆ. 7 ಜಿಲ್ಲೆಗಳ 8 ನಗರಗಳಲ್ಲಿ ವಾಣಿಜ್ಯ ಚಟುವಟಿಕೆಗಳಾದ ಹೋಟೆಲ್, ರೆಸ್ಟೋರೆಂಟ್, ಪಬ್‍ಗಳೂ ಬಂದ್ ಆಗಲಿದೆ. ಅಗತ್ಯ ಚಟುವಟಿಕೆಗಳಿಗಷ್ಟೇ ನೈಟ್‍ಕರ್ಫ್ಯೂ ವೇಳೆ ವಿನಾಯ್ತಿ ನೀಡಲಾಗುತ್ತದೆ. ನೈಟ್‍ಕರ್ಫ್ಯೂ ವೇಳೆ ಸಿನಿಮಾ ಪ್ರದರ್ಶನ ನಿಷೇಧ ಹಾಗೂ ಅಂತರ್ಜಿಲ್ಲೆಗಳ ಓಡಾಟಕ್ಕೆ ನಿರ್ಬಂಧ ಇಲ್ಲ. ಅಂತರ್‍ಜಿಲ್ಲೆ ಓಡಾಟ, ಬಸ್, ಸ್ವಂತ ವಾಹನಗಳಲ್ಲಿ ಓಡಾಟಕ್ಕೆ ಅನುಮತಿ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಮುಳುಗದ ರವಿ‌ ಬೆಳಗು

ಪತ್ರಕರ್ತ, ಕವಿ, ಕತೆಗಾರ, ಅನುವಾದಕ, ವಿವಾದಾತ್ಮಕ ಬರಹಗಾರ ರವಿ ಬೆಳಗೆರೆ ನಿರೀಕ್ಷಿತವಾಗಿ ದೈಹಿಕವಾಗಿ ಹೋಗಿದ್ದಾರೆ. ಕುಡಿತ, ಸಿಗರೇಟ್, ರಸಿಕತೆ ರವಿಯನ್ನು ಬಲಿ ತೆಗೆದುಕೊಂಡಿದೆ. ಯಾವತ್ತಾದರೂ ಒಂದು ದಿನ ಸಾಯೋದೇ, ಹ್ಯಾಗ ಬದುಕಿದರೆ ಏನು? ಎಂಬ ಉಡಾಫೆಯೂ ಇತ್ತಲ್ಲ! ಆದರೆ ರವಿ very very colourful ಕನಸುಗಾರ. ಬದುಕಿನ ರಹಸ್ಯಗಳನ್ನು ಬಿಚ್ಚಿಟ್ಟ ಎದೆಗಾರ. ತುಂಬಾ ಕಾಡಿ ಕನಲಿದ ಹುಟ್ಟಿನ ರಹಸ್ಯ ಬಿಚ್ಚಿಟ್ಟು ನಿರಾಳವಾದ ಹೊತ್ತಲ್ಲಿ ಜೀವ ಬಿಟ್ಟ ಜಾದೂಗಾರ.

ಇನ್ಮುಂದೆ ಪೊಲೀ‍‍ಸರಿಗೆ ವಾರದ ರಜೆ ಕಡ್ಡಾಯ

ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್​ ಸುತ್ತೋಲೆ ಹೊರಡಿಸಿದ್ದಾರೆ. ತುರ್ತು ಪರಿಸ್ಥಿತಿ ಬಿಟ್ಟು ಎಲ್ಲ ಸಂದರ್ಭದಲ್ಲಿ ವಾರದ ರಜೆ‌ ಕಡ್ಡಾಯವಾಗಿ ನೀಡಬೇಕು ಎಂದು ವಲಯ ಐಜಿಪಿ ಮತ್ತು ಎಸ್ ಪಿ ಗಳಿಗೆ ಆದೇಶ ಹೊರಡಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ವಿಸ್ತರಣೆ

ಶಿಮ್ಲಾ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಿಮಾಚಲ ಪ್ರದೇಶದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ನ್ನು ವಿಸ್ತರಿಸಲಾಗಿದೆ.ಈ…

ಯುವಕರಲ್ಲಿ ಆತ್ಮಸ್ಥೈರ್ಯ ಕುಗ್ಗಿಸಿದ ಬಿಜೆಪಿ : ರಾಮಕೃಷ್ಣ ದೊಡ್ಡಮನಿ

ಈಗಿನ ಯುವಕರಲ್ಲಿ ಆತ್ಮಸ್ಥೆರ್ಯ ಕುಗ್ಗಿಹೋಗಿದೆ. ಅವರಲ್ಲಿ ಆತ್ಮಸ್ಥೆರ್ಯ ತುಂಬಿದರೆ ನೀರುದ್ಯೋಗದ ಸಮಸ್ಯೆ ಬಗೆಹರಿಸಬಹುದಾಗಿತ್ತು. ಆದರೆ ಬಿಜೆಪಿಯವರು ಇವು ಯಾವುದೆ ಕೆಲಸ ಮಾಡಿಲ್ಲ ಅನೇಕ ಯುವಕರು ನೀರುದ್ಯೋಗ ಸಮಸ್ಯೆಯನ್ನು ಗಂಭೀರವಾಗಿ ಎದುರಿಸುತ್ತಿದ್ದಾರೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.