ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದೂಡುವುದರಿಂದ ಯಾವುದೇ ಪ್ರಯೋಜನವಿಲ್ಲ. ನಿಗದಿಯಾದ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಿದರೆ ಮಕ್ಕಳ ಕಲಿಕೆ ಹಾಗೂ ಮುಂದಿನ ವ್ಯಾಸಂಗಕ್ಕೆ ಅನುಕೂಲವಾಗುತ್ತದೆ ಎಂದು ಒತ್ತಾಯಿಸಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?:
ಸಿಬಿಎಸ್‌ಇ ಪಠ್ಯಕ್ರಮ ಹಾಗೂ ಕೇಂದ್ರಿಯ ವಿದ್ಯಾಲಯಗಳಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಎಸ್‌ಎಸ್ಎಲ್‌ಸಿ ಮಕ್ಕಳಿಗೆ ಪರೀಕ್ಷೆ ಮಾಡುವ ಒತ್ತಡ ಏಕೆ ? ಎಂದು ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಇದು ಸರಿಯಾದ ಕ್ರಮವಲ್ಲ. ಪ್ರಮುಖ ಹಂತಗಳ ಪರೀಕ್ಷೆಗಳಿಗೆ ವ್ಯತ್ಯಯ ಉಂಟಾಗಬಾರದು. ಕರ್ನಾಟಕ ಮಾಧ್ಯಮಿಕ ಪರೀಕ್ಷಾ ಮಂಡಳಿಯು 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ.

ಕಳೆದ ವರ್ಷದಂತೆ ಈ ವರ್ಷವೂ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸುವುದು ಸೂಕ್ತ. ಪರೀಕ್ಷೆಗಳನ್ನು ಮುಂದೂಡಿದರೆ ಮಕ್ಕಳು ಕಲಿಕೆಯಿಂದ ದೂರ ಸರಿಯುತ್ತಾರೆ. ಕಲಿಕೆಯ ಬಗ್ಗೆ ಆಸಕ್ತಿಯನ್ನು ಕಳೆದುಕೊಳ್ಳುವಂತಾಗುತ್ತದೆ. ರಾಜ್ಯದಲ್ಲಿ ಎಸ್‌ಎಸ್ಎಲ್‌ಸಿ ಪರೀಕ್ಷೆ ಮುಂದಿನ ಎಲ್ಲಾ ಚಟುವಟಿಕೆಗಳಿಗೆ ಕೇಂದ್ರೀಕೃತವಾಗಿರುತ್ತದೆ. ಪರೀಕ್ಷೆಗಳನ್ನು ಕೋವಿಡ್-19ರ ಎಲ್ಲಾ ಸುರಕ್ಷತಾ ನಿಯಮಾವಳಿಗಳನ್ನು ಪಾಲಿಸಿ ನಡೆಸುವಂತಾಗಬೇಕು.

ಸರ್ಕಾರ ಈ ನಿಟ್ಟಿನಲ್ಲಿ ಮಕ್ಕಳನ್ನು ಸಂರಕ್ಷಿಸಲು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಖಾಸಗಿ ಸಂಸ್ಥೆಗಳ ಆಡಳಿತ ಮಂಡಳಿಗಳಿಗೆ ಸುರಕ್ಷತಾ ಕ್ರಮ ಜಾರಿಗೊಳಿಸುವ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಈ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಚಿವರು ನಿರ್ಧಾರ ತೆಗೆದುಕೊಂಡು ನಿಯಮಗಳ ಪ್ರಕಾರ ಪರೀಕ್ಷೆ ನಡೆಸಬೇಕು. ಮಕ್ಕಳ ಹಿತದೃಷ್ಟಿಯಿಂದ ಚಿಂತನೆ ಮಾಡುವುದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಹೊಣೆ ಹಾಗೂ ಜವಾಬ್ದಾರಿಯಾಗಿರುತ್ತದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ನಕಾರಾತ್ಮಕ ಆಲೋಚನೆಗಳಿಗೆ ಮಣಿಯದೇ, ನಿಯಮಾನುಸಾರ ನಿಗದಿಯಂತೆ ಪರೀಕ್ಷೆ ನಡೆಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಎಸ್ಪಿ ಯತೀಶ ಎನ್ ವರ್ಗಾವಣೆ

ಉತ್ತರಪ್ರಭ ಸುದ್ದಿ ಗದಗ: ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.

ಮಹಿಷಾಸುರನ ರೌದ್ರಾವತಾರಕ್ಕೆ ಅದುರಿದ ರಂಗಸ್ಥಳ

ಶ್ರೀದೇವೀ ಮಹಾತ್ಮೆ ಯಕ್ಷಗಾನದಲ್ಲಿ ಮಹಿಷಾಸುರ ಪಾತ್ರಧಾರಿ ರಂಗಸ್ಥಳದ ಕಂಬಕ್ಕೆ ತಲೆ ಬಡಿದುಕೊಂಡಿದ್ದು, ಕಂಬ ಅದುರಿದ ಕಾರಣ ಸ್ವಲ್ಪ ಕಾಲ ಆತಂಕದ ಸ್ಥಿತಿ ಎದುರಾಯಿತು.

ಕನಕ ದುರ್ಗಾದೇವಿಯ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದಲ್ಲಿ ಆದಿ ದೇವತೆ ಕನಕ ದುರ್ಗಾದೇವಿಯ ರಥೋತ್ಸವ ಭಕ್ತರ ಹರ್ಷೋದ್ಘಾರದ ಮಧ್ಯೆ ವಿಜೃಂಭಣೆಯಿಂದ ನಡೆಯಿತು.

ಮತ್ತೊಬ್ಬ ಸಚಿವರಿಗೆ ಕೊರೋನಾ ಸೋಂಕು..!

ವಸತಿ ಸಚಿವ ಜಿತೇಂದ್ರ ಅವ್ಹಾದ್ ಅವರ ನಂತರ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಅಶೋಕ್ ಚವ್ಹಾಣ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.