ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದೂಡುವುದರಿಂದ ಯಾವುದೇ ಪ್ರಯೋಜನವಿಲ್ಲ. ನಿಗದಿಯಾದ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಿದರೆ ಮಕ್ಕಳ ಕಲಿಕೆ ಹಾಗೂ ಮುಂದಿನ ವ್ಯಾಸಂಗಕ್ಕೆ ಅನುಕೂಲವಾಗುತ್ತದೆ ಎಂದು ಒತ್ತಾಯಿಸಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?:
ಸಿಬಿಎಸ್‌ಇ ಪಠ್ಯಕ್ರಮ ಹಾಗೂ ಕೇಂದ್ರಿಯ ವಿದ್ಯಾಲಯಗಳಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಎಸ್‌ಎಸ್ಎಲ್‌ಸಿ ಮಕ್ಕಳಿಗೆ ಪರೀಕ್ಷೆ ಮಾಡುವ ಒತ್ತಡ ಏಕೆ ? ಎಂದು ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಇದು ಸರಿಯಾದ ಕ್ರಮವಲ್ಲ. ಪ್ರಮುಖ ಹಂತಗಳ ಪರೀಕ್ಷೆಗಳಿಗೆ ವ್ಯತ್ಯಯ ಉಂಟಾಗಬಾರದು. ಕರ್ನಾಟಕ ಮಾಧ್ಯಮಿಕ ಪರೀಕ್ಷಾ ಮಂಡಳಿಯು 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ.

ಕಳೆದ ವರ್ಷದಂತೆ ಈ ವರ್ಷವೂ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸುವುದು ಸೂಕ್ತ. ಪರೀಕ್ಷೆಗಳನ್ನು ಮುಂದೂಡಿದರೆ ಮಕ್ಕಳು ಕಲಿಕೆಯಿಂದ ದೂರ ಸರಿಯುತ್ತಾರೆ. ಕಲಿಕೆಯ ಬಗ್ಗೆ ಆಸಕ್ತಿಯನ್ನು ಕಳೆದುಕೊಳ್ಳುವಂತಾಗುತ್ತದೆ. ರಾಜ್ಯದಲ್ಲಿ ಎಸ್‌ಎಸ್ಎಲ್‌ಸಿ ಪರೀಕ್ಷೆ ಮುಂದಿನ ಎಲ್ಲಾ ಚಟುವಟಿಕೆಗಳಿಗೆ ಕೇಂದ್ರೀಕೃತವಾಗಿರುತ್ತದೆ. ಪರೀಕ್ಷೆಗಳನ್ನು ಕೋವಿಡ್-19ರ ಎಲ್ಲಾ ಸುರಕ್ಷತಾ ನಿಯಮಾವಳಿಗಳನ್ನು ಪಾಲಿಸಿ ನಡೆಸುವಂತಾಗಬೇಕು.

ಸರ್ಕಾರ ಈ ನಿಟ್ಟಿನಲ್ಲಿ ಮಕ್ಕಳನ್ನು ಸಂರಕ್ಷಿಸಲು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಖಾಸಗಿ ಸಂಸ್ಥೆಗಳ ಆಡಳಿತ ಮಂಡಳಿಗಳಿಗೆ ಸುರಕ್ಷತಾ ಕ್ರಮ ಜಾರಿಗೊಳಿಸುವ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಈ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಚಿವರು ನಿರ್ಧಾರ ತೆಗೆದುಕೊಂಡು ನಿಯಮಗಳ ಪ್ರಕಾರ ಪರೀಕ್ಷೆ ನಡೆಸಬೇಕು. ಮಕ್ಕಳ ಹಿತದೃಷ್ಟಿಯಿಂದ ಚಿಂತನೆ ಮಾಡುವುದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಹೊಣೆ ಹಾಗೂ ಜವಾಬ್ದಾರಿಯಾಗಿರುತ್ತದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ನಕಾರಾತ್ಮಕ ಆಲೋಚನೆಗಳಿಗೆ ಮಣಿಯದೇ, ನಿಯಮಾನುಸಾರ ನಿಗದಿಯಂತೆ ಪರೀಕ್ಷೆ ನಡೆಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯದ ಕೂಗು ಎತ್ತಿದ್ದು ನಿಜ- ಸಚಿವ ಉಮೇಶ್ ಕತ್ತಿ

ಆಲಮಟ್ಟಿ: ಉತ್ತರ ಕರ್ನಾಟಕದ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊ0ಡಾಗ ತಾವು ಸಹಜವಾಗಿಯೇ ಪ್ರತ್ಯೇಕ ರಾಜ್ಯದ ಕೂಗೆತ್ತಿರುವುದು…

ಗಾಳಿ ಶುದ್ಧಿ ಮಾಡಲಿದೆಯಂತೆ ಯಂತ್ರ: ಬೆಂಗಳೂರಲ್ಲಿ ಪ್ರಾಯೋಗಿಕ ಕಾರ್ಯ

ಈಗಾಗಲೇ ಶುದ್ಧ ಕುಡಿಯುವ ನೀರು ಒದಗಿಸುವ ಯಂತ್ರಗಳು ರಾಜ್ಯದಲ್ಲೆಲ್ಲಡೆ ಕಂಡು ಬರುತ್ತಿವೆ. ಆದರೆ ಇದೀಗ ನೀರಿನಂತೆ ಗಾಳಿಯನ್ನು ಶುದ್ಧೀಕರಣ ಗೊಳಿಸುವ ಯಂತ್ರದಿಂದ ಸಿಲಿಕಾನ ಸಿಟಿಯಲ್ಲಿ ಗಾಳಿ ಶುದ್ಧಿಕರಣ ಮಾಡುವ ಪ್ರಾಯೋಗಿಕ ಕಾರ್ಯ ಕೈಗೊಳ್ಳಲಾಗಿದೆ.

ಪ್ರಾಥಮಿಕ ಶಾಲೆ ಶಿಕ್ಷಕರು ಪ್ರೌಢಶಾಲೆ ಸಹ ಶಿಕ್ಷಕ ಹುದ್ದೆಗೆ ಅರ್ಹರಲ್ವಂತೆ..!

ಬೆಂಗಳೂರು: 1 -5 ನೇ ತರಗತಿಗೆ ಪಾಠ ಮಾಡುವ ಪ್ರಾಥಮಿಕ ಶಾಲೆ ಶಿಕ್ಷಕರು, ಪ್ರೌಢಶಾಲೆ ಸಹ ಶಿಕ್ಷಕ ಗ್ರೇಡ್- 2 ಹುದ್ದೆಗಳಿಗೆ ಬಡ್ತಿ ಪಡೆಯಲು ಅರ್ಹರಲ್ಲ ಎಂದು ಆದೇಶಿಸಲಾಗಿದೆ. ಪ್ರಾಥಮಿಕ ಶಾಲೆ ಶಿಕ್ಷಕರುಗಳಿಗೆ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೀಡಿದ್ದಲ್ಲಿ ಅದನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ ಆದೇಶಿಸಿದೆ.

ರೈತ ಸಂಘದ ಪ್ರತಿಭಟನೆ ಹಿನ್ನೆಲೆ ಬಿಎ/ಬಿಕಾಂ ಪರೀಕ್ಷೆ ಮುಂದೂಡಿಕೆ

ಇದೇ ದಿನಾಂಕ 28 ರಂದು ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನೆಲೆ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಸ್ನಾತಕ ಪರೀಕ್ಷೆಗಳನ್ನು ಮುಂದೂಡಿದೆ. ಬಂದ್ ಕರೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗುವ ಸಂಭವವಿದೆ. ಇದರಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಧಾರವಾಡ ವಿವಿ ಈ ನಿರ್ಧಾರ ತೆಗೆದುಕೊಂಡಿದೆ.