ಗದಗ : ಗ್ರಾಮೀಣಾಭಿವೃದ್ಧಿ ವಿವಿ ಪರೀಕ್ಷೆ ಮುಂದೂಡಿಕೆ

ಗದಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರೀಲ್ 19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಗ್ರಾಮೀಣಾಭಿವೃದ್ಧಿ ವಿವಿಯ ಮೊದಲ ಸೆಮೆಸ್ಟರ್ ನ ಸ್ನಾತಕೋತ್ತರ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿ ಈ ನಿರ್ಧಾರ ಕೈಗೊಂಡಿದ್ದು, ಮುಂದೂಡಲಾದ ಪರೀಕ್ಷೆಯ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು.

ಏ.19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆ ಹೊರತು ಪಡಿಸಿ ಉಳಿದ ದಿನಾಂಕಕ್ಕೆ ನಿಗದಿಯಾಗಿರುವ ಪರೀಕ್ಷೆಗಳು ಯಥಾ ಪ್ರಕಾರ ನಡೆಯಲಿವೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version