ಗದಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರೀಲ್ 19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಗ್ರಾಮೀಣಾಭಿವೃದ್ಧಿ ವಿವಿಯ ಮೊದಲ ಸೆಮೆಸ್ಟರ್ ನ ಸ್ನಾತಕೋತ್ತರ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿ ಈ ನಿರ್ಧಾರ ಕೈಗೊಂಡಿದ್ದು, ಮುಂದೂಡಲಾದ ಪರೀಕ್ಷೆಯ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು.

ಏ.19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆ ಹೊರತು ಪಡಿಸಿ ಉಳಿದ ದಿನಾಂಕಕ್ಕೆ ನಿಗದಿಯಾಗಿರುವ ಪರೀಕ್ಷೆಗಳು ಯಥಾ ಪ್ರಕಾರ ನಡೆಯಲಿವೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶತಾಯಿಷಿ ಸ್ವಾತಂತ್ರ್ಯ ಹೋರಾಟಗಾರ್ತಿ ಶಾಂತಾಬಾಯಿಗೆ ಸನ್ಮಾನ ಮಾಡಿದ ಅನಿಲ ಮೆಣಸಿನಕಾಯಿ

ಗದಗ: ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಮಹಾತ್ಮ ಗಾಂಧೀಜಿಯವರಿಗೆ ತಮ್ಮ ಕೈಯಾರ ಅಡುಗೆ ಮಾಡಿದ ಬಡಿಸಿದ ಮಹಾತಾಯಿ ಸದ್ಯ…

ಮನ್ ಕೀ ಮಾತ್ ಬದಲು ಭಾರತ ಮಾತಾಡಬೇಕು: ಚಿಂತಕ ಬಸುರಾಜ್ ಸೂಳಿಬಾವಿ ಆಕ್ರೊಶ

ಒಬ್ಬ ದಲಿತ ಬಾಲಕಿಯನ್ನು ಅತ್ಯಾಚಾರ ಗೈದು ಕೊಲೆಗೈದ ನೀಚ ಕೃತ್ಯ ನಡೆದರೂ, ಇದನ್ನು ಸಮರ್ಥಿಸಿಕೊಳ್ಳುವುದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ಗೋ ರಕ್ಷಣೆಗೆ ನಮ್ಮ ಸರ್ಕಾರವಿದೆ, ಹೆಣ್ಣು ಮಕ್ಕಳ ರಕ್ಷಣೆಗೆ ಅಲ್ಲ ಎಂಬ ಅಪ್ರಬುದ್ಧ ಸಂವಿದಾನ ವಿರೋಧಿ ಹೇಳಿಕೆ ಖಂಡನೀಯವಾದದ್ದು ಎಂದು ಚಿಂತಕ ಬಸವರಾಜ್ ಸೂಳಿಬಾವಿ ಆಕ್ರೋಶ ವ್ಯಕ್ತ ಪಡಿಸಿದರು.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ

ಇಂದು ಮತ್ತೆ ರಾಜ್ಯದಲ್ಲಿ ಐದು ಹೊಸ ಕೊರೋನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ 606ಕ್ಕೆ ಏರಿಕೆ ಆಗಿದೆ.

ಮಗಳ ಬದುಕು ಸರಿ ಮಾಡಲು ಬಂದ ಅತ್ತೆಯ ಮೇಲೆಯೇ ಕಲ್ಲು ಹಾಕಿದ ವ್ಯಕ್ತಿ!

ಕಲಬುರಗಿ : ಪತ್ನಿಯ ವಿಷಯದಲ್ಲಿ ನಡೆದ ಗಲಾಟೆ ಅತ್ತೆಯ ಸಾವಿನಲ್ಲಿ ಅಂತ್ಯವಾಗಿದೆ.