ಲಕ್ಷ್ಮೇಶ್ವರ: ತಾಲೂಕಿನ ಉಂಡೇನಹಳ್ಳಿ ಒಡೆಯರ ಮಲ್ಲಾಪೂರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಶಾಸಕ ರಾಮಣ್ಣ ಲಮಾಣಿ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ವಿವಿಧ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಕಾಮಗಾರಿ ಪ್ರಾರಂಭವಾಗಿದ್ದು, ಗ್ರಾಮದ ಜನರು ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು. ಕುಡಿಯುವ ನೀರಿಗಾಗಿ ಈ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಂದು ಗ್ರಾಮದಲ್ಲಿ ಈ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು.
‌‌
ಈ ಸಂದರ್ಭದಲ್ಲಿ ಪದ್ಮರಾಜ್ ಪಾಟೀಲ್, ರುದ್ರಪ್ಪ ಲಮಾಣಿ, ಪುಂಡಲೀಕ ಲಮಾಣಿ, ಕಿರಣ ಯಲ್ಲಾಪೂರ, ಸಂತೋಷ ಲಮಾಣಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಉತ್ತರ ಕರ್ನಾಟಕ ಪ್ರವಾಹದ ಕುರಿತು ಪ್ರಧಾನಿಯೊಂದಿಗೆ ಚರ್ಚೆ ಮಾಡಿದ್ದೇನೆ – ಸಿಎಂ!

ಶಿವಮೊಗ್ಗ : ಉತ್ತರ ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಪ್ರವಾಹದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕೋವಿಡ್ ಹಿನ್ನೆಲೆ ಕಾಲಕಾಲೇಶ್ವರ ಜಾತ್ರೆ ರದ್ದು

ಶ್ರೀ ಕಾಲಕಾಲೇಶ್ವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ರದ್ದುಮಾಡಲಾಗಿದೆ ಎಂದು ತಹಶೀಲ್ದಾರ ಎ.ಬಿ. ಕಲಘಟಗಿ ಹೇಳಿದರು.