ಬೆಂಗಳೂರು: ಕೊರೊನಾ ಹಿನ್ನೆಲೆ ರಾಜ್ಯದಲ್ಲಿ ನಡೆಯಬೇಕಿದ್ದ ಜಿಲ್ಲಾ ಹಾಗು ತಾಲೂಕು ಪಂಚಾಯತಿ ಚುನಾವಣೆಗಳನ್ನು ಮುಂದೂಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಚಿಂತನೆ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಅವರು ಈ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ. ಆದರೆ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆ ಸದ್ಯಕ್ಕೆ ಚುನಾವಣೆ ಮುಂದೂಡಲು ಗ್ರಾಮೀಣಾಭಿವೃದ್ಧಿ ಇಲಾಖೆ ತೀರ್ಮಾನಿಸಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ನಂತರ ಈ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸುತ್ತೇವೆ ಎಂದು ಹೇಳಿದರು.
ಅವಧಿ ಮುಕ್ತಾಯಗೊಳ್ಳುತ್ತಿರುವ ಜಿಪಂ, ತಾಪಂಗಳಿಗೆ ಆಡಳಿತಾಧಿಕಾರಿ ನೇಮಿಸುವ ಕುರಿತು ಯೋಚನೆ ಮಾಡಿದ್ದೇವೆ ಎಂದರು.