ಗದಗ: ಜಿಲ್ಲೆಯ ಖಾಸಗಿ ಹಾಗೂ ಸಹಕಾರಿ ರಸಗೊಬ್ಬರ ಮಾರಾಟಗಾರರು ರಸಗೊಬ್ಬರ ಚೀಲದ ನಿಗದಿತ ಎಂ.ಆರ್.ಪಿ ಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು. ಏ.1 ರಿಂದ ರಸಗೊಬ್ಬರ ದರ ಏರಿಕೆಯಾಗಿದೆ ಎಂಬ ನೆಪವೊಡ್ಡಿ ಲಭ್ಯವಿರುವ ರಸಗೊಬ್ಬರ ದಾಸ್ತಾನನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರಸಗೊಬ್ಬರ ಪರವಾನಿಗೆಯನ್ನು ರದ್ದುಗೊಳಿಸಿ, ಕಾನೂನು ಕ್ರಮ ಜರುಗಿಸಲಾಗುವುದು. ರಸಗೊಬ್ಬರ ಮಾರಾಟಗಾರರು ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರೈತ ಬಾಂಧವರು ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಈ ಕೆಳಗಿನ ದೂರವಾಣಿಗಳನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ತಿಳಿಸಿದ್ದಾರೆ.
ಇದನ್ನೂ ಓದ: ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೊಬ್ಬ ಪ್ರತಿನಿಧಿ ಬೇಕಾಗಿದ್ದಾರೆ.
ಸಹಾಯಕ ಕೃಷಿ ನಿರ್ದೇಕರು, ಗದಗ – 8277931403; ಸಹಾಯಕ ಕೃಷಿ ನಿರ್ದೇಕರು, ಮುಂಡರಗಿ -8277931130; ಸಹಾಯಕ ಕೃಷಿ ನಿರ್ದೇಕರು, ನರಗುಂದ – 8277931409; ಸಹಾಯಕ ಕೃಷಿ ನಿರ್ದೇಕರು, ರೋಣ – 8277931451 ; ಸಹಾಯಕ ಕೃಷಿ ನಿರ್ದೇಕರು, ಶಿರಹಟ್ಟಿ – 8277931461 ; ಸಹಾಯಕ ಕೃಷಿ ನಿರ್ದೇಶಕರು, ಜಾರಿದಳ, ಜಕೃನಿ ಕಛೇರಿ ಗದಗ – 9902004783; ಜಂಟಿ ಕೃಷಿ ನಿರ್ದೇಶಕರ ಕಛೇರಿ, ಗದಗ-08372-235443 ಇವರನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ:ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ.