ಗದಗ: ಜಿಲ್ಲೆಯ ಖಾಸಗಿ ಹಾಗೂ ಸಹಕಾರಿ ರಸಗೊಬ್ಬರ ಮಾರಾಟಗಾರರು ರಸಗೊಬ್ಬರ ಚೀಲದ ನಿಗದಿತ ಎಂ.ಆರ್.ಪಿ ಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು. ಏ.1 ರಿಂದ ರಸಗೊಬ್ಬರ ದರ ಏರಿಕೆಯಾಗಿದೆ ಎಂಬ ನೆಪವೊಡ್ಡಿ ಲಭ್ಯವಿರುವ ರಸಗೊಬ್ಬರ ದಾಸ್ತಾನನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರಸಗೊಬ್ಬರ ಪರವಾನಿಗೆಯನ್ನು ರದ್ದುಗೊಳಿಸಿ, ಕಾನೂನು ಕ್ರಮ ಜರುಗಿಸಲಾಗುವುದು. ರಸಗೊಬ್ಬರ ಮಾರಾಟಗಾರರು ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರೈತ ಬಾಂಧವರು ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಈ ಕೆಳಗಿನ ದೂರವಾಣಿಗಳನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ತಿಳಿಸಿದ್ದಾರೆ.

ಇದನ್ನೂ ಓದ: ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೊಬ್ಬ ಪ್ರತಿನಿಧಿ ಬೇಕಾಗಿದ್ದಾರೆ.

ಸಹಾಯಕ ಕೃಷಿ ನಿರ್ದೇಕರು, ಗದಗ – 8277931403; ಸಹಾಯಕ ಕೃಷಿ ನಿರ್ದೇಕರು, ಮುಂಡರಗಿ -8277931130; ಸಹಾಯಕ ಕೃಷಿ ನಿರ್ದೇಕರು, ನರಗುಂದ – 8277931409; ಸಹಾಯಕ ಕೃಷಿ ನಿರ್ದೇಕರು, ರೋಣ – 8277931451 ; ಸಹಾಯಕ ಕೃಷಿ ನಿರ್ದೇಕರು, ಶಿರಹಟ್ಟಿ – 8277931461 ; ಸಹಾಯಕ ಕೃಷಿ ನಿರ್ದೇಶಕರು, ಜಾರಿದಳ, ಜಕೃನಿ ಕಛೇರಿ ಗದಗ – 9902004783; ಜಂಟಿ ಕೃಷಿ ನಿರ್ದೇಶಕರ ಕಛೇರಿ, ಗದಗ-08372-235443 ಇವರನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ:ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಯಲಗೂರ ಶಕ್ತಿಮಾನಗೆ ಭಕ್ತರ ಭಕ್ತಿಮಾನ ಸಮರ್ಪಣೆ- ಕಾತಿ೯ಕೋತ್ಸವ ಸಂಭ್ರಮ ಏಳೂರು ಒಡೆಯನ ಸನ್ನಿಧಿಯಲ್ಲಿ ಭಕ್ತಿ ಪರಾಕಾಷ್ಠೆ – ಮಿಂದೆದ್ದ ಜನಸಾಗರ

ಸಚಿತ್ರ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಕೃಷ್ಣೆಯ ತೀರದ ಪ್ರಾಕೃತಿಕ ಪರಿಮಳದ ಹಸಿನೆಲದ ಸುವಾಸನೆಯಲ್ಲಿ…

ನಾಳೆ ರಾಜ್ಯ ಬಂದ್ ಏನಿರುತ್ತೆ..? ಏನಿರಲ್ಲ..?

ಮಾರಾಟ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಕೆಲವು ಸೇವೆಗಳು ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇರುತ್ತದೆ. ಇದರೊಂದಿಗೆ ಖಾಸಗಿ ಬಸ್, ಪ್ರಯಾಣಿಕರ ವಾಹನಗಳು, ಸರ್ಕಾರಿ ಕಚೇರಿ, ಮೆಟ್ರೋ ಸೇವೆ, ಆಸ್ಪತ್ರೆ ಮೆಡಿಕಲ್ ಸ್ಟೋರ್, ಅಂಬುಲೆನ್ಸ್, ರೈಲು ಸಂಚಾರ, ಹೋಟೆಲ್, ಹಣ್ಣು ತರಕಾರಿ ವ್ಯಾಪಾರ ಮೊದಲಾದವು ಇರುತ್ತವೆ.

ಕೊರೊನಾ ಸೋಂಕಿನಿಂದ ಗುಣಮುಖನಾದ ವ್ಯಕ್ತಿ ಆತ್ಮಹತ್ಯೆಗೆ ಶರಣು

ರಾಯಚೂರು : ಕೊರೊನಾ ಸೋಂಕಿನಿಂದ ಗುಣಮುಖನಾಗಿದ್ದ ವ್ಯಕ್ತಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು…

ಗದಗ ಜಿಲ್ಲೆಯಲ್ಲಿ ಬೀಗರ ಬುತ್ತಿಯಿಂದ ಕೊರೊನಾ ಭಯ..!

ಗದಗ: ಕೊರೊನಾ ಹೆಮ್ಮಾರಿ ಪ್ಯಾಟ್ಯಾಗಷ್ಟ ಗಿರಿಕಿ ಹೊಡೆಯುತ್ತಿತ್ತ. ಈಗ ಹಳ್ಳಿಗೂ ಬಂದು ಹಳ್ಳಿ ಜನ್ರಿಗೆ ಹಳಹಳಿ…