ತಾಂಡಾ ಅಭಿವೃದ್ಧಿ ನಿಗಮದ ಉಪಯೋಗ ಪಡೆದುಕೊಳ್ಳಿ: ಶಾಸಕ ರಾಮಣ್ಣ ಲಮಾಣಿ

ಲಕ್ಷ್ಮೇಶ್ವರ: ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಅವರು ತಾಲೂಕಿನ ಉಂಡೇನಹಳ್ಳಿ ಗ್ರಾಮದಲ್ಲಿ ತಾಂಡಾ ಅಭಿವೃದ್ಧಿ ನಿಗಮದಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಪ್ರತಿಯೊಂದು ಗ್ರಾಮಗಳು ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ತಾಂಡಾಗಳಲ್ಲಿ ಸಿಸಿ ರಸ್ತೆ ಕಾಮಗಾರಿ, ಚರಂಡಿ ನಿರ್ಮಾಣ, ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ. ಈ ಯೋಜನೆಯನ್ನು ತಾಂಡಾದ ಜನರು ಸದುಪಯೋಗ ಪಡಿಸಿಕೊಂಡು ತಾಂಡಾ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುಂಡಲೀಕ ಲಮಾಣಿ, ಕಿರಣ ಲಮಾಣಿ, ಸೋಮಣ್ಣ ಲಮಾಣಿ, ಸಂತೋಷ ಲಮಾಣಿ ಸೇರಿದಂತೆ ಅನೇಕರು ಇದ್ದರು.

Exit mobile version