ಲಕ್ಷ್ಮೇಶ್ವರ: ಕೊರೋನಾ ಎರಡನೇ ಅಲೆ ಅತೀ ವೇಗವಾಗಿ ಹರಡುತ್ತಿರುವುದರಿಂದ ಶನಿವಾರ, ಭಾನುವಾರ ಸರಕಾರ ವಿಧಿಸಿರುವ ವೀಕೆಂಡ್ ಕರ್ಫ್ಯೂ ಅನ್ನು ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿತ್ತು.

ಇನ್ನು ಬಹುತೇಕರು ಇದಕ್ಕೆ ಸಹಕಾರ ನೀಡಿದ್ದು ಕೂಡ ವಿಶೇಷವಾಗಿತ್ತು. ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಹಾಗು ಆರೋಗ್ಯ ಇಲಾಖೆ ಪುರಸಭೆಯವರು ಸಾಕಷ್ಟು ಜಾಗೃತಿಗೂ ಮುಂದಾಗಿದ್ದಾರೆ.

ಶನಿವಾರ ಹಾಗು ಭಾನುವಾರ ಕರ್ಫ್ಯೂ ಜಾರಿಯಲ್ಲಿದ್ದರೂ ಕೆಲವರು  ಓಡಾಡುತ್ತಿದ್ದರು. ಅಂಥವರಿಗೆ ಸಿ.ಪಿ.ಐ ವಿಕಾಸ ಲಮಾಣಿ ಹಾಗೂ ಪಿಎಸ್‌ಐ ಶಿವಯೋಗಿ ಲೋಹಾರ ಬಿಸಿಮುಟ್ಟಿಸಿದರು. ಬೇಕಾಬಿಟ್ಟಿ ಓಡಾಡುವ ಜನ ಹಾಗು ವಾಹನಗಳನ್ನು ವಶಕ್ಕೆ ಪಡೆದುಕೊಂಡರು. ಶುಕ್ರವಾರ ರಾತ್ರಿ 9 ಗಂಟೆಯಿಂದ ಕರ್ಫ್ಯೂ ಜಾರಿ ಮಾಡಲಾಗಿದ್ದು ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪಟ್ಟಣದ ಎಲ್ಲಾ ವ್ಯಾಪಾರ ಮುಗ್ಗಟ್ಟು ಬಂದವಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

                ಲಕ್ಷ್ಮೇಶ್ವರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿದ್ದು, ಮಾರುಕಟ್ಟೆ, ಶಿಗ್ಲಿ ಕ್ರಾಸ್, ಪಾದಕಟ್ಟಿ ಸೇರಿದಂತೆ ಅನೇಕ ಕಡೆಗಳಲ್ಲಿ ಪೌರಕಾರ್ಮಿಕರು ಹಾಗೂ ಪೊಲೀಸ್ ಸಿಬ್ಬಂದಿಯವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

1 comment
  1. ನಮ್ಮ ಪೋಲಿಸ್ ಅಧಿಕಾರಿಗಳು ಜನರ ಹಿತ ರಕ್ಷಣೆ ಕಾಪಾಡಲು ಕೊರೊನ
    ತಡೆಗಟ್ಟಲು
    ಬಹಳ ಶ್ರಮ ಪಡುತ್ತಿದ್ದಾರೆ. ಅವರಿಗೆ ನಮ್ಮದೊಂದು ಹೃತ್ಪೂರ್ವಕ ವಂದನೆಗಳು

Leave a Reply

Your email address will not be published. Required fields are marked *

You May Also Like

ಮಹಾದೇವಪ್ಪ ಬಸಪ್ಪ ಹೆಬ್ಬಾಳ ನಿಧನ

ಆಲಮಟ್ಟಿ:ಬಸವನಬಾಗೇವಾಡಿ ತಾಲ್ಲೂಕಿನ ಮಣ್ಣೂರ ಗ್ರಾಮದ ಲಿಂಗಾಯತ ಸಮಾಜದ ಮುಖಂಡ ಮಹಾದೇವಪ್ಪ ಬಸಪ್ಪ ಹೆಬ್ಬಾಳ (69) ಶುಕ್ರವಾರ…

ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡಲ್ಲ: ಎಸ್.ಆರ್.ಹಿರೇಮಠ

ಗದಗ: ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡುವುದಿಲ್ಲ…

ಕಳ್ಳತನ ಪ್ರಕರಣ ಇಬ್ಬರ ಬಂಧನ.

ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

” ಶಿಕ್ಷಕ- ಮಕ್ಕಳಲ್ಲಿ ನವ ಚೇತನ ತುಂಬಿದ ವಿಷಯ ವೇದಿಕೆ ” ಚಿತ್ರಕಲೆ ಪಠ್ಯಗಳ ಜೀವಾಳ

ಉತ್ತರಪ್ರಭ ಸುದ್ದಿವಿಜಯಪುರ: ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಹಾಗು ವ್ಯಕ್ತಿತ್ವ ವಿಕಸನಕ್ಕೆ ಚಿತ್ರಕಲೆ ಸಹಕಾರಿಯಾಗಿದೆ ಅಲ್ಲದೇ ಪಠ್ಯಾಧಾರೀತ…