ಲಕ್ಷ್ಮೇಶ್ವರ: ಕೊರೋನಾ ಎರಡನೇ ಅಲೆ ಅತೀ ವೇಗವಾಗಿ ಹರಡುತ್ತಿರುವುದರಿಂದ ಶನಿವಾರ, ಭಾನುವಾರ ಸರಕಾರ ವಿಧಿಸಿರುವ ವೀಕೆಂಡ್ ಕರ್ಫ್ಯೂ ಅನ್ನು ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿತ್ತು.

ಇನ್ನು ಬಹುತೇಕರು ಇದಕ್ಕೆ ಸಹಕಾರ ನೀಡಿದ್ದು ಕೂಡ ವಿಶೇಷವಾಗಿತ್ತು. ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಹಾಗು ಆರೋಗ್ಯ ಇಲಾಖೆ ಪುರಸಭೆಯವರು ಸಾಕಷ್ಟು ಜಾಗೃತಿಗೂ ಮುಂದಾಗಿದ್ದಾರೆ.

ಶನಿವಾರ ಹಾಗು ಭಾನುವಾರ ಕರ್ಫ್ಯೂ ಜಾರಿಯಲ್ಲಿದ್ದರೂ ಕೆಲವರು  ಓಡಾಡುತ್ತಿದ್ದರು. ಅಂಥವರಿಗೆ ಸಿ.ಪಿ.ಐ ವಿಕಾಸ ಲಮಾಣಿ ಹಾಗೂ ಪಿಎಸ್‌ಐ ಶಿವಯೋಗಿ ಲೋಹಾರ ಬಿಸಿಮುಟ್ಟಿಸಿದರು. ಬೇಕಾಬಿಟ್ಟಿ ಓಡಾಡುವ ಜನ ಹಾಗು ವಾಹನಗಳನ್ನು ವಶಕ್ಕೆ ಪಡೆದುಕೊಂಡರು. ಶುಕ್ರವಾರ ರಾತ್ರಿ 9 ಗಂಟೆಯಿಂದ ಕರ್ಫ್ಯೂ ಜಾರಿ ಮಾಡಲಾಗಿದ್ದು ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪಟ್ಟಣದ ಎಲ್ಲಾ ವ್ಯಾಪಾರ ಮುಗ್ಗಟ್ಟು ಬಂದವಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

                ಲಕ್ಷ್ಮೇಶ್ವರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿದ್ದು, ಮಾರುಕಟ್ಟೆ, ಶಿಗ್ಲಿ ಕ್ರಾಸ್, ಪಾದಕಟ್ಟಿ ಸೇರಿದಂತೆ ಅನೇಕ ಕಡೆಗಳಲ್ಲಿ ಪೌರಕಾರ್ಮಿಕರು ಹಾಗೂ ಪೊಲೀಸ್ ಸಿಬ್ಬಂದಿಯವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

1 comment
  1. ನಮ್ಮ ಪೋಲಿಸ್ ಅಧಿಕಾರಿಗಳು ಜನರ ಹಿತ ರಕ್ಷಣೆ ಕಾಪಾಡಲು ಕೊರೊನ
    ತಡೆಗಟ್ಟಲು
    ಬಹಳ ಶ್ರಮ ಪಡುತ್ತಿದ್ದಾರೆ. ಅವರಿಗೆ ನಮ್ಮದೊಂದು ಹೃತ್ಪೂರ್ವಕ ವಂದನೆಗಳು

Leave a Reply

Your email address will not be published. Required fields are marked *

You May Also Like

GTTC ಸಂಸ್ಥೆ ಧಾರವಾಡದಲ್ಲಿ ಯೋಗ ದಿನಾಚರಣೆ

ಉತ್ತರಪ್ರಭಧಾರವಾಡ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಯಾಪುರ ಧಾರವಾಡದಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ…

ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಭೆ ಸಮಾರಂಭಗಳನ್ನು ಮುಂದೂಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಒಂದು ವಾರದ ಹಿಂದೆ ಧಾರವಾಡ ಎಸ್ ಡಿ ಎಮ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೋನಾ…

SBI ಗ್ರಾಮಸೇವಾ ಕೇಂದ್ರ ಉದ್ಘಾಟನೆ: ಸಶಕ್ತಿಕರಣದ ಮೂಲ ಉದ್ದೇಶ ಸಾಕಾರವಾದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ

ಮುಂಡರಗಿ: ಸರ್ಕಾರದ ಯೋಜನೆಗಳು ಹಾಗು ಸೌಲಭ್ಯಗಳು ಸಾಕಷ್ಟು ಇವೆ. ಆದರೆ ಅವುಗಳ ಸದ್ಭಳಕೆಯಾಗಬೇಕು. ಮುಖ್ಯವಾಗಿ ಸಶಕ್ತಿಕರಣದ…

ಗ್ರಾಪಂ ಚುನಾವಣೆ : ಮತಗಟ್ಟೆ ಅಧಿಕಾರಿ ನೇಮಕಕ್ಕೆ ನಿಯಮಗಳು

ವಿದ್ಯುತ್ ಸರಬರಾಜು ಕಂಪನಿಗಳ ಖಾಸಗಿಕರಣ ಸಂಬಂಧ ಕೇಂದ್ರ ಇಂಧನ ಮಂತ್ರಾಲಯವು ಹೊರಡಿಸಿರುವ ಕರಡು(Standard bidding Documents) ಅಭಿಪ್ರಾಯ ನೀಡುವ ಕುರಿತು ಈ ಬಗ್ಗೆ ಕುಲಂಕುಶವಾಗಿ ಪರಿಶೀಲಿಸಿ ಈ ವಿಷಯವನ್ನು ಪರಿಗಣಿಸಿ, ಎಲ್ಲ ವಿದ್ಉತ್ ಸರಬರಾಜು ಕಂಪನಿಗಳು ಮತ್ತು ಕೆಪಿಟಿಸಿಎಲ್ ರವರಿಂದ ಅಭಿಪ್ರಾಯವನ್ನು ಪಡೆದು ದಿನಾಂಕ 01-10-2020 ರೊಳಗೆ ಕ್ರೂಢಿಕೃತ ಅಭಿಪ್ರಾಯವನ್ನು ಇಂಧನ ಇಲಾಖೆಗೆ ಸಲ್ಲಿಸುವಂತೆ ಕೋರಲಾಗಿದೆ ಎಂದು ಇಂಧನ ಇಲಾಖೆಯ ಸರ್ಕಾರದ ಅಧಿನ ಕಾರ್ಯದರ್ಶಿ ಎನ್.ಮಂಗಳಗೌರಿ ಸುತ್ತೋಲೆ ಹೊರಡಿಸಿದ್ದಾರೆ.