ಲಕ್ಷ್ಮೇಶ್ವರ: ವೀಕೆಂಡ್ ಕರ್ಫ್ಯೂಗೆ ಪಟ್ಟಣದಲ್ಲಿ ಜನತೆ ಸಾಥ್ ನೀಡಿದ್ದು ಜನರು ಇಲ್ಲದೇ ಬಸ್ಟ್ಯಾಂಡ್, ಬಾನು ಮಾರ್ಕೆಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಬಿಕೋ ಎನ್ನುತ್ತಿದೆ.
ಶನಿವಾರ ಹಾಗು ರವಿವಾರ ವೀಕೆಂಡ್ ಕರ್ಫ್ಯೂಗೆ ಪೊಲೀಸ್ ಅಧಿಕಾರಿಗಳು ಪುರಸಭೆ ಸಿಬ್ಬಂದಿಗಳು ಹಾಗೂ ಮಾಧ್ಯಮ ಮಿತ್ರರರಿಗೆ ಪಟ್ಟಣದ ಶಿಕ್ಷಕ ಪಾಟೀಲ ಅವರು ತಮ್ಮ ಕೈಯಲ್ಲಿ ಆಗುವ ಸೇವೆ ಸಲ್ಲಿಸಿದರು. ಲಕ್ಷ್ಮೇಶ್ವರ ಪಟ್ಟಣದ ಉಮಾ ವಿದ್ಯಾಲಯದ ಶಿಕ್ಷಕ ಪಾಟೀಲ್ ಪೊಲೀಸ್, ಪುರಸಭೆ ಸಿಬ್ಬಂದಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ತಂದು ಬಾಟಲಿಗಳಲ್ಲಿ ನೀರು ತುಂಬಿ ಕರ್ತವ್ಯಕ್ಕೆ ಹಾಜರಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಪುರಸಭೆಯ ಸಿಬ್ಬಂದಿಗಳಿಗೆ ಮತ್ತು ಮಾಧ್ಯಮ ಮಿತ್ರರರಿಗೆ ಅವರು ಇರುವಲ್ಲಿ ಹೋಗಿ ನೀರನ್ನು ಕೊಟ್ಟು ಮಾನವೀಯತೆ ಮೆರೆದಿದ್ದಾರೆ.
ಸದ್ಯ ಶಾಲೆಗಳು ರಜೆ ಘೋಷಿಸಿದ್ದಾರೆ. ಖಾಲಿ ಮನೆಯಲ್ಲಿ ಕುಳಿತುಕೊಂಡು ಪಗಾರ ತಗೆದುಕೊಳ್ಳಲು ನನಗೆ ಇಷ್ಟ ಇಲ್ಲ. ಆದ್ದರಿಂದ ನನ್ನ ಕೈಯಲ್ಲಿ ಆಗುವ ಸೇವೆಯನ್ನು ನಾನು ಮಾಡುತ್ತಿದ್ದೇನೆ. ನಮಗೋಸ್ಕರ ಕರ್ತವ್ಯ ನಿರ್ವಹಿಸುತ್ತಿರುವ ಕೊರೋನಾ ವಾರಿಯರ್ಸ್ಗೆ ಬಿಸಿಲಿನಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದು ಅವರಿಗೆ ನೀರನ್ನು ಹಂಚುತ್ತಿದ್ದೇನೆ ಎನ್ನುತ್ತಾರೆ ಪಾಟೀಲ್.
ಪೊಲೀಸ್, ಪುರಸಭೆ ಸಿಬ್ಬಂದಿಗಳು ಹಾಗೂ ಮಾಧ್ಯಮ ಮಿತ್ರರಿಗೆ ನೀರಿನ ವ್ಯವಸ್ಥೆ ಮಾಡಿರುವ ಶಿಕ್ಷಕ ಪಾಟೀಲ್ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಯಿತು.
