ಲಕ್ಷ್ಮೇಶ್ವರ: ವೀಕೆಂಡ್ ಕರ್ಫ್ಯೂಗೆ ಪಟ್ಟಣದಲ್ಲಿ ಜನತೆ ಸಾಥ್ ನೀಡಿದ್ದು ಜನರು ಇಲ್ಲದೇ ಬಸ್ಟ್ಯಾಂಡ್, ಬಾನು ಮಾರ್ಕೆಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಬಿಕೋ ಎನ್ನುತ್ತಿದೆ.

ಶನಿವಾರ ಹಾಗು ರವಿವಾರ ವೀಕೆಂಡ್ ಕರ್ಫ್ಯೂಗೆ ಪೊಲೀಸ್ ಅಧಿಕಾರಿಗಳು ಪುರಸಭೆ ಸಿಬ್ಬಂದಿಗಳು ಹಾಗೂ ಮಾಧ್ಯಮ ಮಿತ್ರರರಿಗೆ ಪಟ್ಟಣದ ಶಿಕ್ಷಕ ಪಾಟೀಲ ಅವರು ತಮ್ಮ ಕೈಯಲ್ಲಿ ಆಗುವ ಸೇವೆ ಸಲ್ಲಿಸಿದರು. ಲಕ್ಷ್ಮೇಶ್ವರ ಪಟ್ಟಣದ ಉಮಾ ವಿದ್ಯಾಲಯದ ಶಿಕ್ಷಕ ಪಾಟೀಲ್ ಪೊಲೀಸ್, ಪುರಸಭೆ ಸಿಬ್ಬಂದಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ತಂದು ಬಾಟಲಿಗಳಲ್ಲಿ ನೀರು ತುಂಬಿ ಕರ್ತವ್ಯಕ್ಕೆ ಹಾಜರಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಪುರಸಭೆಯ ಸಿಬ್ಬಂದಿಗಳಿಗೆ ಮತ್ತು ಮಾಧ್ಯಮ ಮಿತ್ರರರಿಗೆ ಅವರು ಇರುವಲ್ಲಿ ಹೋಗಿ ನೀರನ್ನು ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

ಸದ್ಯ ಶಾಲೆಗಳು ರಜೆ ಘೋಷಿಸಿದ್ದಾರೆ. ಖಾಲಿ ಮನೆಯಲ್ಲಿ ಕುಳಿತುಕೊಂಡು ಪಗಾರ ತಗೆದುಕೊಳ್ಳಲು ನನಗೆ ಇಷ್ಟ ಇಲ್ಲ. ಆದ್ದರಿಂದ ನನ್ನ ಕೈಯಲ್ಲಿ ಆಗುವ ಸೇವೆಯನ್ನು ನಾನು ಮಾಡುತ್ತಿದ್ದೇನೆ. ನಮಗೋಸ್ಕರ ಕರ್ತವ್ಯ ನಿರ್ವಹಿಸುತ್ತಿರುವ ಕೊರೋನಾ ವಾರಿಯರ್ಸ್‌ಗೆ ಬಿಸಿಲಿನಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದು ಅವರಿಗೆ ನೀರನ್ನು ಹಂಚುತ್ತಿದ್ದೇನೆ ಎನ್ನುತ್ತಾರೆ ಪಾಟೀಲ್.

ಪೊಲೀಸ್, ಪುರಸಭೆ ಸಿಬ್ಬಂದಿಗಳು ಹಾಗೂ ಮಾಧ್ಯಮ ಮಿತ್ರರಿಗೆ ನೀರಿನ ವ್ಯವಸ್ಥೆ ಮಾಡಿರುವ ಶಿಕ್ಷಕ ಪಾಟೀಲ್ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಯಿತು.

Leave a Reply

Your email address will not be published. Required fields are marked *

You May Also Like

ಜಿಂದೇಶ್ಯಾವಲಿ ದರ್ಗಾ ಉರುಸು ರದ್ದುಗೊಳಿಸಿ ಡಿಸಿ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಎರಡನೇ ಹಂತದ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಯಾವಾಗ?: ಸಿಎಂ ಹೇಳಿದ್ದೇನು?

ಬೆಂಗಳೂರು: ಈಗಾಗಲೇ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮೊದಲ ಹಂತದ ಪ್ಯಾಕೇಜ್ ಕುರಿತು ಸಾಕಷ್ಟು ಮನವಿಗಳು ಹಾಗೂ ಬೇಡಿಕೆಗಳು ವ್ಯಕ್ತವಾದ ಹಿನ್ನೆಲೆ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎರಡನೇ ಹಂತದ ಪ್ಯಾಕೇಜನ್ನು ಸಿಎಂ ಘೋಷಣೆ ಮಾಡಲಿದ್ದಾರೆ.

ನಗರ ಸಭೆ ಚುನಾವಣೆ: 17ನೇ ವಾರ್ಡನ ಪಕ್ಷೇತರ ಅಭ್ಯರ್ಥಿ  ಆಸ್ಮಾ ಮುನ್ನಾ ಸಾಭ ರೇಶ್ಮಿ ಮತ್ತು 3ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ನಗರ ಸಭೆ ಚುನಾವಣೆ: 17ನೇ ವಾರ್ಡನ ಪಕ್ಷೇತರ ಅಭ್ಯರ್ಥಿ  ಆಸ್ಮಾ ಮುನ್ನಾ ಸಾಭ ರೇಶ್ಮಿ ಮತ್ತು…

ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿ

ಬೆಂಗಳೂರು : ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿಗೊಳಿಸಲು…