ರೋಣ: ನಗರಾದ್ಯಂತ ವಿಕೆಂಡ್ ಕರ್ಪ್ಯೂಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಯಾರೊಬ್ಬರೂ ಅನಗತ್ಯವಾಗಿ ಹೊರಗಡೆ ಬರದೇ ಮನೆಯಲ್ಲಿಯೇ ಕುಳಿತಿರುವುದು ಕಂಡು ಬಂದಿತು. ಮಹಾಮಾರಿ ಕರೋನದಿಂದ ಕಂಗೆಟ್ಟುಹೋದ ಜನರು, ದಿಕ್ಕು ತೋಚದೆ ಕಂಗಾಲಾದ ವ್ಯಾಪಾರಸ್ಥರು ಕಳೆದ ವರ್ಷದ ಲಾಕ್ ಡೌನ್ ನಿಂದ ಇನ್ನು ಚೇತರಿಕೆ ಕಾಣದೆ ತೊಳಲಾಡುತ್ತಿರುವಾಗ ಈ ವರ್ಷವು ಕೂಡಾ ಈ ಕರೋನ ಎರಡನೇ ಅಲೆಗೆ ಸಿಲುಕಿ ಮತ್ತೆ ಸಾಲದ ಸುಳಿಯಲ್ಲಿ ಹೊರಳಾಡುವ ಸ್ಥಿತಿ ಬಂದೊದಗಿದೆ ಎಂದು ಬೀದಿ ಬದಿ ವ್ಯಾಪಾರಸ್ಥರು, ಹಾಗೂ ಬಾಡಿಗೆ ಅಂಗಡಿ ನಡೆಸುವವರು ಅಳಲು ತೋಡಿಕೊಂಡಿದ್ದಾರೆ.

ನಗರದ ಪ್ರಮುಖ ರಸ್ತೆಗಳಾದ ಸೂಡಿ ಕ್ರಾಸ್, ಮುಲ್ಲನಬಾವಿ ಕ್ರಾಸ್, ಬಸ್ ನಿಲ್ದಾಣ ಹಾಗೂ ಪೋತರಾಜನ ಕಟ್ಟೆ ಈ ಎಲ್ಲಾ ಕಡೆ ಪೊಲೀಸ್ ಸಿಬ್ಬಂದಿಗಳು ಹಾಗೂ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಅನಗತ್ಯವಾಗಿ ಓಡಾಡುವವರೆಗೆ ಹಾಗೂ ಮಾಸ್ಕ್ ಇಲ್ಲದೆ ಹೊರಗೆ ಬರುವವರನ್ನು ಹಿಡಿದು ದಂಡ ಹಾಕುತ್ತಿರುವದು ಕಂಡು ಬಂದಿತು.

ಬಸ್ ನಿಲ್ದಾಣವು ಪ್ರಯಾಣಿಕರಿಲ್ಲದೇ ಬೀಕೋ ಎನ್ನುತ್ತಿತ್ತು.
ಒಟ್ಟಿನಲ್ಲಿ ರೋಣ ನಗರದಲ್ಲಿ ವೀಕೆಂಡ್ ಕರ್ಪ್ಯೂ ಯಶಸ್ವಿಯಾಗಿದೆ. ಟಪ್ ರೂಲ್ಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಪುರಸಭೆ ಸಿಬ್ಬಂದಿಗಳು, ತಾಲೂಕಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಹೆಚ್ಚು ಕಾಳಜಿಯಿಂದ ಕಾರ್ಯಪ್ರವೃತ್ತರಾಗಿದ್ದರು.

Leave a Reply

Your email address will not be published. Required fields are marked *

You May Also Like

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ…

ಅಗಸ್ಟ್ 5 ರಂದು ಸಂಕಲ್ಪ ಯಾತ್ರೆಗೆ ಆಲಮಟ್ಟಿಯಲ್ಲಿ ಚಾಲನೆ

ಉತ್ತರಪ್ರಭಆಲಮಟ್ಟಿ : ದೇಶ, ನಾಡು ಕಟ್ಟುವಗೊಸ್ಕರ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಮಹನೀಯರ ಸ್ಮರಣೆಗಾಗಿ…

ಹಾವೇರಿಯಲ್ಲಿ ಮತ್ತೆ ನಾಲ್ಕು ಜನರಿಗೆ ಕೊರೋನಾ ಸೋಂಕು.!

ಹಾವೇರಿ: ಜಿಲ್ಲೆಯಲ್ಲಿ ಹೊಸದಾಗಿ ನಾಲ್ಕು ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ…

ಸಿಡಿ ಹುಡುಗಿ ಕಿಡ್ನಾಪ್ ಕೇಸ್ : ಪ್ರಕರಣ ವರ್ಗಾವಣೆ

ಮಾಜಿ ಸಚಿನ ರಮೇಶ ಜಾರಕಿಹೋಳಿ ಅವರ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡ ಹುಡುಗಿ ಕಿಡ್ನಾಪ್ ಕೇಸ್ ಈಗ ಬೆಂಗಳೂರಿನ ಆರ್.ಟಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.