ರೋಣ: ನಗರಾದ್ಯಂತ ವಿಕೆಂಡ್ ಕರ್ಪ್ಯೂಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಯಾರೊಬ್ಬರೂ ಅನಗತ್ಯವಾಗಿ ಹೊರಗಡೆ ಬರದೇ ಮನೆಯಲ್ಲಿಯೇ ಕುಳಿತಿರುವುದು ಕಂಡು ಬಂದಿತು. ಮಹಾಮಾರಿ ಕರೋನದಿಂದ ಕಂಗೆಟ್ಟುಹೋದ ಜನರು, ದಿಕ್ಕು ತೋಚದೆ ಕಂಗಾಲಾದ ವ್ಯಾಪಾರಸ್ಥರು ಕಳೆದ ವರ್ಷದ ಲಾಕ್ ಡೌನ್ ನಿಂದ ಇನ್ನು ಚೇತರಿಕೆ ಕಾಣದೆ ತೊಳಲಾಡುತ್ತಿರುವಾಗ ಈ ವರ್ಷವು ಕೂಡಾ ಈ ಕರೋನ ಎರಡನೇ ಅಲೆಗೆ ಸಿಲುಕಿ ಮತ್ತೆ ಸಾಲದ ಸುಳಿಯಲ್ಲಿ ಹೊರಳಾಡುವ ಸ್ಥಿತಿ ಬಂದೊದಗಿದೆ ಎಂದು ಬೀದಿ ಬದಿ ವ್ಯಾಪಾರಸ್ಥರು, ಹಾಗೂ ಬಾಡಿಗೆ ಅಂಗಡಿ ನಡೆಸುವವರು ಅಳಲು ತೋಡಿಕೊಂಡಿದ್ದಾರೆ.

ನಗರದ ಪ್ರಮುಖ ರಸ್ತೆಗಳಾದ ಸೂಡಿ ಕ್ರಾಸ್, ಮುಲ್ಲನಬಾವಿ ಕ್ರಾಸ್, ಬಸ್ ನಿಲ್ದಾಣ ಹಾಗೂ ಪೋತರಾಜನ ಕಟ್ಟೆ ಈ ಎಲ್ಲಾ ಕಡೆ ಪೊಲೀಸ್ ಸಿಬ್ಬಂದಿಗಳು ಹಾಗೂ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಅನಗತ್ಯವಾಗಿ ಓಡಾಡುವವರೆಗೆ ಹಾಗೂ ಮಾಸ್ಕ್ ಇಲ್ಲದೆ ಹೊರಗೆ ಬರುವವರನ್ನು ಹಿಡಿದು ದಂಡ ಹಾಕುತ್ತಿರುವದು ಕಂಡು ಬಂದಿತು.

ಬಸ್ ನಿಲ್ದಾಣವು ಪ್ರಯಾಣಿಕರಿಲ್ಲದೇ ಬೀಕೋ ಎನ್ನುತ್ತಿತ್ತು.
ಒಟ್ಟಿನಲ್ಲಿ ರೋಣ ನಗರದಲ್ಲಿ ವೀಕೆಂಡ್ ಕರ್ಪ್ಯೂ ಯಶಸ್ವಿಯಾಗಿದೆ. ಟಪ್ ರೂಲ್ಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಪುರಸಭೆ ಸಿಬ್ಬಂದಿಗಳು, ತಾಲೂಕಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಹೆಚ್ಚು ಕಾಳಜಿಯಿಂದ ಕಾರ್ಯಪ್ರವೃತ್ತರಾಗಿದ್ದರು.

Leave a Reply

Your email address will not be published. Required fields are marked *

You May Also Like

ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಮಹಿಳೆಯಲ್ಲಿದೆ : ತಹಶೀಲ್ದಾರ ಭ್ರಮರಾಂಭ

ಮಹಿಳೆಯರಿಗೆ ಎಲ್ಲಾಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಿ ಅವಳನ್ನು ಸಂಪೂರ್ಣವಾಗಿ ತೊಡಗಿಸಿದ್ದೇ ಆದರೆ ದೇಶದ ಅರ್ಥ ವ್ಯವಸ್ಥೆಯ ಜತೆಗೆ ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಅವಳಲ್ಲಿದೆ ಎಂದು ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹೇಳಿದರು.

ರಾಜಕೀಯ ಹಗ್ಗ ಜಗ್ಗಾಟ: ಪಾಳುಬಿದ್ದ ಆಶ್ರಯ ಮನೆಗಳ ಪ್ರವೇಶಿಸಿದ ಜನರು

ನರೇಗಲ್ಲ: ರಾಜಕೀಯ ನಾಯಕರ ಹಗ್ಗ ಜಗ್ಗಾಟದಲ್ಲಿ 10 ವರ್ಷಗಳಿಂದ ಪಾಳುಬಿದಿದ್ದ ಆಶ್ರಯ ಮನೆಳಿಗೆ ಜನಸಾಮಾನ್ಯರು ಪ್ರವೇಶ ಪಡೆದಿದ್ದಾರೆ. ಇರುವ ಆಶ್ರಯ ಮನೆಗಳು ತಮ್ಮ ಹೆಸರಿಗೆ ಬಾರದಿದ್ದರೂ ಆಡಳಿತ ಯಂತ್ರದ ನಿರ್ಲಕ್ಷ್ಯ ಹಾಗೂ ತಮ್ಮ ಸಂಕಷ್ಟ ಸಹಿಸಲಾರದೆ ಮನೆಗಳನ್ನು ಸ್ವಚ್ಛಗೊಳಿಸಿಕೊಂಡು ಪ್ರವೇಶಿಸಿದ್ದಾರೆ.

ನಾಡಬಾಂಬ್‌ ; ಹಸುವಿನ ಬಾಯಿ ಛಿದ್ರ

ಜಮೀನಿನಲ್ಲಿ ಮೇಯುತ್ತಿದ್ದ ಸೀಮೆ ಹಸುವೊಂದು ನಾಡಬಾಂಬ್‌ ಜಿಗಿದ ಪರಿಣಾಮ ಅದರ ಬಾಯಿ ಛಿದ್ರಗೊಂಡಿರುವ ಘಟನೆ ತಾಲ್ಲೂಕಿನ ಕೆಬ್ಬಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.