ಬೆಂಗಳೂರು : ಪರದೆಯಲ್ಲಿ ಮುಖ ತೋರಿಸಿದರೆ ದೇಶದಲ್ಲಿ ಕೊರೊನಾ ಸೋಂಕು ಓಡಿಹೋಗಲ್ಲ ಎಂದು ಸಿದ್ದರಾಮಯ್ಯ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಪ್ರಧಾನಿ ಮೋದ ಅವರನ್ನು ಟೀಕಿಸಿದ್ದಾರೆ.

ಪದೇ ಪದೇ ಸಿಎಂ ಗಳಿಗೆ ಪಾಠ ಮಾಡುವುದಕ್ಕೆ ನೀವು ಹೆಡ್ ಮಾಸ್ಟರ್ ಅಲ್ಲ. ಪರದೆ ಮೇಲೇ ನಿಮ್ಮ ಮುಖ ತೋರಿಸುವುದರಿಂದ ಯಾವುದೇ ಕೊರೋನಾ ಸೋಂಕು ಹೋಗಲ್ಲ. ರಾಜ್ಯಗಳು ಸೋಂಕು ನಿಯಂತ್ರಣಕ್ಕಾಗಿ ಕೇಂದ್ರದ ಎದುರು ಬೇಡಿಕೆಗಳಿಟ್ಟಿವೆ. ಅವುಗಳನ್ನು ಈಡೇರಿಸುವ ಮೂಲಕ ದೇಶವನ್ನು ಸೋಂಕು ಮುಕ್ತಮಾಡಿ. ಆಗಲೇ ದೇಶದಲ್ಲಿ ಸೋಂಕು ನಿಯಂತ್ರಣವಾಗುತ್ತದೆ. ಅದೆಲ್ಲ ಬಿಟ್ಟು ಪರದೆಯಲ್ಲಿ ಮುಖ ತೋರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಮೊದಲು ರಾಜ್ಯಗಳ ಬೇಡಿಕೆ ಈಡೇರಿಸುವಲ್ಲಿ ಮುಂದಾಗಿ ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಫಲಿತಾಂಶ

ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಻ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.

ರಾಜ್ಯದಲ್ಲಿಂದು 1694 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1694 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದ ಮನೆಗಳನ್ನು ಗುರುತಿಟ್ಟುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಬಲ ಪಂಥೀಯ ಸಂಘಟನೆಗಳು ಕಿಡಿ ಕಾರಿದ್ದವು. ಇದೊಂದು ಪ್ರಚಾರದ ಗಿಮಿಕ್ ಎಂದು ಟೀಕಿಸಿದ್ದವು. ಈಗ ಕುಮಾರಸ್ವಾಮಿ ಅವರು ಈ ಎಲ್ಲಾ ಟೀಕೆಗಳಿಗೆ ಉತ್ತರ ನೀಡಿದ್ದಾರೆ.

ನಾಳೆ ರಾಜ್ಯ ಬಂದ್ ಏನಿರುತ್ತೆ..? ಏನಿರಲ್ಲ..?

ಮಾರಾಟ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಕೆಲವು ಸೇವೆಗಳು ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇರುತ್ತದೆ. ಇದರೊಂದಿಗೆ ಖಾಸಗಿ ಬಸ್, ಪ್ರಯಾಣಿಕರ ವಾಹನಗಳು, ಸರ್ಕಾರಿ ಕಚೇರಿ, ಮೆಟ್ರೋ ಸೇವೆ, ಆಸ್ಪತ್ರೆ ಮೆಡಿಕಲ್ ಸ್ಟೋರ್, ಅಂಬುಲೆನ್ಸ್, ರೈಲು ಸಂಚಾರ, ಹೋಟೆಲ್, ಹಣ್ಣು ತರಕಾರಿ ವ್ಯಾಪಾರ ಮೊದಲಾದವು ಇರುತ್ತವೆ.