ಗದಗ: ವೀಕೆಂಡ್ ಕಫ್ಯೂ೯ ಹಿನ್ನೆಲೆಯಲ್ಲಿ ಗದುಗಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದ ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಬ್ದವಾಗಿದೆ.

ಎಪಿಎಂಸಿ ಮಾರ್ಕೆಟ್ ಗೇಟ್ ಬಂದ್ ಮಾಡಿ ಬೀಗ ಹಾಕಲಾಗಿದೆ. ಪ್ರತಿದಿನ ಬೆಳಗ್ಗೆ ಎಪಿಎಂಸಿ  ಹಾಗು ಹೂವಿನ ಮಾರುಕಟ್ಟೆಯಲ್ಲಿ ಹಾಗೂ ತರಕಾರಿ ಮಾರುಕಟ್ಟೆಯಲ್ಲಿ ಹರಾಜು, ಮಾರಾಟ ನಡೆಯುತ್ತಿತ್ತು. ಆದರೆ, ಇಂದು ಎಲ್ಲಾ ವ್ಯಾಪಾರ ವಹಿವಾಟು ಸಂಪೂರ್ಣ ಸ್ತಬ್ಧವಾಗಿದೆ.

ವೀಕೆಂಡ್ ಕಫ್ಯೂ೯ ಹಿನ್ನೆಲೆ ಗದಗ ನಗರದ ಹೃದಯ ಭಾಗದ ನಾಮಜೋಶಿ ರಸ್ತೆಯಲ್ಲಿರುವ ಕಿರಾಣಿ ಮಾರ್ಕೆಟ್ ಕೂಡ ಸಂಪೂರ್ಣ ಸ್ತಬ್ದವಾಗಿದೆ. ಬೆಳಗ್ಗೆ 10 ಘಂಟೆಯವರೆಗೆ ಕಿರಾಣಿಗೆ ಅವಕಾಶವಿದ್ದರೂ ಕೂಡಾ ಸ್ವಯಂ ಪ್ರೇರಣೆಯಿಂದ ಮಾರುಕಟ್ಟೆಯನ್ನು ವರ್ತಕರು ಸಂಪೂರ್ಣ ಬಂದ್ ಮಾಡಿದ್ದಾರೆ. ವ್ಯಾಪಾರ ವಹಿವಾಟು ಇಲ್ಲದೇ ನಾಮಜೋಶಿ ರಸ್ತೆ ಸಂಪೂರ್ಣ ಖಾಲಿ ಖಾಲಿಯಾಗಿದೆ. ನಗರದಲ್ಲಿ ಪೊಲೀಸ್ ಹಾಗು ನಗಸಭೆ ಅಧಿಕಾರಿಗಳು ಸಿಟಿ ಸಂಚಾರ ಕೈಗೊಂಡಿದ್ದಾರೆ‌. ಗದಗ ನಗರ ಸಂಪೂರ್ಣ ಸ್ತಬ್ದವಾಗಿದೆ. ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಮೂಲಕ ಟಫ್ ರೂಲ್ಸ್ ಜಾರಿ ಮಾಡಿದ್ದಾರೆ.

ನಗರದ ಬಡಾವಣೆ, ಓಣಿ ಕಟ್ಟೆಗಳಲ್ಲಿರುವ ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿ ವ್ಯಾಪಾರವನ್ನು ಮಾಡುವ ಅಂಗಡಿಗಳು, ಡೈರಿ, ಹಾಲಿನ ಬೂತ್‍ಗಳು, ಮಾಂಸ ಮತ್ತು ಮೀನು ಮಾರಾಟವನ್ನು ಬೆಳಗ್ಗೆ 6 ರಿಂದ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಲಾಗಿತ್ತು. ಕೋವಿಡ್-19ರ  ನಿರ್ವಹಣೆಗೆ ಅಗತ್ಯ ಸೇವಾ ಇಲಾಖೆಗಳ ನೌಕರರಿಗೆ  ಅನಿಯಂತ್ರಿತ ಚಲನೆಯನ್ನು ಅನುಮತಿಸಲಾಗಿದ್ದು, ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು ನಿರಂತರ ಕಾರ್ಯಾಚರಣೆ ನಡೆಸುವ ಕೈಗಾರಿಕೆಗಳು, ಕಂಪನಿಗಳು, ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿಸಿದೆ. ಟೆಲಿಕಾಂ ಮತ್ತು ಇಂಟರ್‍ನೆಟ್ ಸೇವೆ ಪೂರೈಕೆದಾರರಿಗೆ ವಾರಾಂತ್ಯದ ಕರ್ಪ್ಯೂ ಅನ್ವಯಿಸುವುದಿಲ್ಲ. ತುರ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಗಳು ಹಾಗೂ ಅವರ ಪರಿಚಾರಕರು, ವ್ಯಕ್ತಿಗಳು ಈ ಅವಧಿಯಲ್ಲಿ ಸಂಚರಿಸಬಹುದಾಗಿದೆ. ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹ ಜನರು ಕನಿಷ್ಠ ಪುರಾವೆಗಳನ್ನು ಹಾಜರುಪಡಿಸಿದಲ್ಲಿ ಸಂಚಾರವನ್ನು ಅನುಮತಿಸಲಾಗುವುದು.

ಹೊಟೇಲ್, ರೆಸ್ಟೋರೆಂಟ್ಸ್ ಮತ್ತು ಉಪಹಾರ ಗೃಹಗಳಲ್ಲಿ ಕೇವಲ ಪಾರ್ಸಲ್ ಸೇವೆ ಒದಗಿಸಲು ಅವಕಾಶ ಕಲ್ಪಿಸಿದೆ. ದೂರ ಪ್ರಯಾಣದ ರಾತ್ರಿ ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ರೈಲ್ವೆ ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‍ಗಳು, ನಿಲ್ದಾಣಗಳು, ಸ್ಟಾಂಡ್‍ಗಳಲ್ಲಿ ಸಾರ್ವಜನಿಕ ಸಾರಿಗೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳು (ಕ್ಯಾಬ್‍ಗಳನ್ನು ಒಳಗೊಂಡಂತೆ) ರೈಲು, ರಸ್ತೆ ಹಾಗೂ ವಿಮಾನಗಳ ಮೂಲಕ ಸಂಚರಿಸಲು ಕೋವಿಡ್-19 ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತಿಗೊಳಪಟ್ಟು ಅವಕಾಶ ಕಲ್ಪಿಸಲಾಗಿದೆ. ಗದಗ ನಗರದಲ್ಲಿಯೂ ಟಫ್ ರೂಲ್ಸ್ ಜಾರಿಗೆ ತರಲಾಗಿದ್ದು, ಪೊಲೀಸ್ ಹಾಗು ಜಿಲ್ಲಾಡಳಿತ ಕಾಳಜಿಯಿಂದ ಕಾರ್ಯಪ್ರವೃತ್ತವಾಗಿದೆ.

Leave a Reply

Your email address will not be published. Required fields are marked *

You May Also Like

ಹಸಿರು ವಲಯಕ್ಕೂ ವಕ್ಕರಿಸಿದ ಕೊರೊನಾ!

ಕರ್ನಾಟಕಕ್ಕೆ ಕೊರೊನಾ ಎಂಟ್ರಿ ಕೊಟ್ಟರೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಅದರ ಆಟ ನಡೆದಿರಲಿಲ್ಲ. ಆದರೆ, ಒಂದೇ ದಿನ 8 ಪ್ರಕರಣಗಳು ದಾಖಲಾಗಿದ್ದು, ಜನರು ಆತಂಕದಲ್ಲಿ ಇದ್ದಾರೆ.

ನಿವೃತ್ತ ಕರಣಿಕ ಶಾಂತೂ ತಡಸಿಗೆ ಹೃದಯಸ್ಪರ್ಶಿ ಸನ್ಮಾನ ಗುರುಗಳೇ ದೇವರು ಶಿಷ್ಯರೇ ಭಕ್ತರು-ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ

ಉತ್ತರಪ್ರಭ ಸುದ್ದಿಆಲಮಟ್ಟಿ: ಮಕ್ಕಳನ್ನು ಪರಿಪೂರ್ಣ ಶಿಲೆಗಳನ್ನಾಗಿ ರೂಪಿಸುವಲ್ಲಿ ಗುರುಗಳ ಹಾಗು ಗುರುಮಾತೆಯರ ಪಾತ್ರ ಬಹುಮುಖ್ಯ ಎಂದು…

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2021-22ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ…

ಪಿವರ್ಸ್ ಹಾಕದೆ ಕಾಮಗಾರಿ ಪೂರ್ಣ: ಲಕ್ಷ್ಮೇಶ್ವರದಲ್ಲಿ ಅಂಬೇಡ್ಕರ್ ನಗರ ಕಾಮಗಾರಿ ಮುಗಿದು ಐದು ತಿಂಗಳಾತು

ಕಾಂಕ್ರೀಟ್ ರಸ್ತೆ ಇಲ್ಲದೇ ಸಂಚಾರಕ್ಕೆ ಸಂಚಾಕಾರ ಬಂದಿದೆ ಎಂದು ಪಟ್ಟಣದ ಜನರು ಪಟ್ಟು ಹಿಡಿದ ಪರಿಣಾಮ ಕಾಂಕ್ರೀಟ್ ರಸ್ತೆಯೇನೋ ನಿರ್ಮಾಣ ಮಾಡಿದರು. ಆದರೆ ಕಾಮಗಾರಿ ಕಾಟಾಚಾರಕ್ಕೆ ಮಾಡಿದರಾ ಎನ್ನುವ ಪ್ರಶ್ನೆ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಉದ್ಭವವಾಗಿದೆ.