ಶಿರಹಟ್ಟಿ: ತಾಲೂಕಿನ ಕಡಕೋಳ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ ಧಾರುಣ ಘಟನೆ ಜರುಗಿದೆ.
ಘಟನೆಯ ವಿವರ: ಕಡಕೋಳ ಗ್ರಾಮದ ನಿವಾಸಿಗಳಾದ ಕುಮಾರ(24), ಶರಣಪ್ಪ (38) ಮಾರುತಿ(50) ಹೊಲ ನೋಡಿ ಬರಲು ಹೋಗಿದ್ದು, ಮಳೆ, ಗಾಳಿ ಪ್ರಾರಂಭವಾಗಿದ್ದರಿಂದ ಅಲ್ಲಿಯೇ ಗಿಡದ ಮರೆಯಲ್ಲಿ ನಿಂತುಕೊಂಡಿದ್ದಾರೆ. ದುರಾದೃಷ್ಟವಶಾತ್ ಸಿಡಿಲು ಬಡಿದು ಈ ಮೂವರು ಸಾವನ್ನಪ್ಪಿದ್ದಾರೆ. ಅವರೊಂದಿಗಿದ್ದ ಪರಶುರಾಮ(22), ಪ್ರವೀಣ (30), ಲಕ್ಷ್ಮಣ್ಣ(30) ದುರಗಪ್ಪ(35) ಎಂಬುವವರು ತಿವೃ ಗಾಯಗೊಂಡಿದ್ದು, ಗಾಯಳುಗಳನ್ನು ಗದಗ ಜಿಮ್ಸ್ ಗೆ ದಾಖಲಿಸಿಲಾಗಿದೆ.

ಈ ಘಟನೆ ತಿಳಿದ ತಕ್ಷಣ ಶಾಸಕ ರಾಮಣ್ಣ ಲಮಾಣಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ನಂತರ ಮೃತ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ತಹಶೀಲ್ದಾರ ಅಧಿಕಾರಿಗೆ ಸೂಚಿಸಿದರು.

1 comment
  1. ಪ್ರತಿಕ್ಷಣದ ಸುದ್ದಿ ತಕ್ಷಣ. ನಿಖರ ಸುದ್ದಿಗೆ ಇನ್ನೊಂದು ಹೆಸರೇ ಉತ್ತರ ಪ್ರಭ.

Leave a Reply

Your email address will not be published. Required fields are marked *

You May Also Like

ಮೊರಾರ್ಜಿ ವಸತಿ ಶಾಲೆಯಲ್ಲಿ 10 ವಿದ್ಯಾರ್ಥಿಗಳಿಗೆ ಕೋವಿಡ್ ಧೃಡ

ಮುಳಗುಂದ : ಇಲ್ಲಿನ ಯಳವತ್ತಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10 ವಿದ್ಯಾರ್ಥಿಗಳು…

ಕೊರೊನಾ ಕಂದಕದಲ್ಲಿ ಕರ್ನಾಟಕ: ಇಂದು 4537 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 4537 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59652 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ

ಸಂಕಷ್ಟದಲ್ಲೂ ಪರೋಪಕಾರಿ ಈ ಆಟೋ ಚಾಲಕ

ಲಾಕ್ ಡೌನ್ ಹಿನ್ನಲೆ ದುಡಿಮೆಯನ್ನೆ ನಂಬಿದ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ತನಗೆಷ್ಟೆ ಸಂಕಷ್ಟ ಎದುರಾದರೂ ಆಟೋ ಚಾಲಕನೊಬ್ಬ ಜನಸೇವೆಗೆ ನಿಂತಿದ್ದಾನೆ.

ಮುಂಡರಗಿ: ಕ್ಯಾಂಟರ್-ಬೈಕ್ ಅಪಘಾತ ಬೈಕ್ ಸವಾರ ಸಾವು.!

ಮುಂಡರಗಿ: ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಬೈಕ್ ಮದ್ಯ…