ಕಡಕೋಳದಲ್ಲಿ ಸಿಡಿಲು: ಮೂವರು ಸಾವು: ನಾಲ್ವರಿಗೆ ಗಂಭೀರ ಗಾಯ

ಶಿರಹಟ್ಟಿ: ತಾಲೂಕಿನ ಕಡಕೋಳ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ ಧಾರುಣ ಘಟನೆ ಜರುಗಿದೆ.
ಘಟನೆಯ ವಿವರ: ಕಡಕೋಳ ಗ್ರಾಮದ ನಿವಾಸಿಗಳಾದ ಕುಮಾರ(24), ಶರಣಪ್ಪ (38) ಮಾರುತಿ(50) ಹೊಲ ನೋಡಿ ಬರಲು ಹೋಗಿದ್ದು, ಮಳೆ, ಗಾಳಿ ಪ್ರಾರಂಭವಾಗಿದ್ದರಿಂದ ಅಲ್ಲಿಯೇ ಗಿಡದ ಮರೆಯಲ್ಲಿ ನಿಂತುಕೊಂಡಿದ್ದಾರೆ. ದುರಾದೃಷ್ಟವಶಾತ್ ಸಿಡಿಲು ಬಡಿದು ಈ ಮೂವರು ಸಾವನ್ನಪ್ಪಿದ್ದಾರೆ. ಅವರೊಂದಿಗಿದ್ದ ಪರಶುರಾಮ(22), ಪ್ರವೀಣ (30), ಲಕ್ಷ್ಮಣ್ಣ(30) ದುರಗಪ್ಪ(35) ಎಂಬುವವರು ತಿವೃ ಗಾಯಗೊಂಡಿದ್ದು, ಗಾಯಳುಗಳನ್ನು ಗದಗ ಜಿಮ್ಸ್ ಗೆ ದಾಖಲಿಸಿಲಾಗಿದೆ.

ಈ ಘಟನೆ ತಿಳಿದ ತಕ್ಷಣ ಶಾಸಕ ರಾಮಣ್ಣ ಲಮಾಣಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ನಂತರ ಮೃತ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ತಹಶೀಲ್ದಾರ ಅಧಿಕಾರಿಗೆ ಸೂಚಿಸಿದರು.

Exit mobile version